AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕಪ್ಪು ಕೋಟು ಧರಿಸಲಿರುವ ಅಕ್ಷಯ್ ಕುಮಾರ್, ಈ ಬಾರಿ ಅರ್ಷದ್ ವಾರ್ಸಿ ಜೊತೆಗೆ

Akshay Kumar: ‘ಜಾಲಿ ಎಲ್​ಎಲ್​ಬಿ’ ಸರಣಿಯ ಹೊಸ ಸಿನಿಮಾ ಘೋಷಣೆ ಆಗಿದೆ. ಮೊದಲ ಸಿನಿಮಾದಲ್ಲಿ ಜಾಲಿ ಆಗಿದ್ದ ಅರ್ಷದ್ ವಾರ್ಸಿ, ಎರಡನೇ ಸಿನಿಮಾದಲ್ಲಿ ವಕೀಲರಾಗಿದ್ದ ಅಕ್ಷಯ್ ಕುಮಾರ್ ಇಬ್ಬರೂ ಒಟ್ಟಿಗೆ ಮೂರನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಮತ್ತೆ ಕಪ್ಪು ಕೋಟು ಧರಿಸಲಿರುವ ಅಕ್ಷಯ್ ಕುಮಾರ್, ಈ ಬಾರಿ ಅರ್ಷದ್ ವಾರ್ಸಿ ಜೊತೆಗೆ
ಜಾಲಿ ಎಲ್​ಎಲ್​ಬಿ 3
ಮಂಜುನಾಥ ಸಿ.
|

Updated on: Jan 02, 2024 | 6:13 PM

Share

ಬಾಲಿವುಡ್​ನಲ್ಲಿ (Bollywood) ಕೆಲವು ಜನಪ್ರಿಯ ಸಿನಿಮಾ ಸರಣಿಗಳಿವೆ. ‘ಧೂಮ್’, ‘ಟೈಗರ್’, ‘ರಾಜ್’, ‘ಸ್ಟುಡೆಂಟ್ ನಂಬರ್ 1’, ‘ಲವ್ ಆಜ್ ಕಲ್’, ‘ಹೇರಾ ಪೇರಿ’, ‘ಭೂಲ್ ಭುಲಯ್ಯ’, ‘ಗೋಲ್​ಮಾಲ್’, ‘ಸೂರ್ಯವಂಶಿ’, ‘ಸಿಂಗಂ’ ಹೀಗೆ ಪಟ್ಟಿ ಬೆಳೆಯುತ್ತದೆ. ಇವುಗಳಲ್ಲಿ ಹಾಸ್ಯ ಪ್ರಧಾನ ಸಿನಿಮಾಗಳು ಕೆಲವಷ್ಟೆ. ಇದೇ ಪಟ್ಟಿಗೆ ಸೇರುತ್ತದೆ ‘ಜಾಲಿ ಎಲ್​ಎಲ್​ಬಿ’. ಕೋರ್ಟ್​ನಲ್ಲಿ ನಡೆಯುವ ತಮಾಷೆ ಪ್ರಸಂಗಗಳ ಜೊತೆಗೆ ಕ್ಲಿಷ್ಟವಾದ ಪ್ರಕರಣಗಳನ್ನು ನಾಯಕ ಬುದ್ಧಿವಂತಿಕೆಯಿಂದ ಬಗೆಹರಿಸುವ ಕತೆಗಳನ್ನು ಈ ಸಿನಿಮಾ ಸರಣಿ ಒಳಗೊಂಡಿದೆ.

ಮೊದಲಿಗೆ ‘ಜಾಲಿ ಎಲ್​ಎಲ್​ಬಿ’ ಸಿನಿಮಾದಲ್ಲಿ ಬೇಜವಾಬ್ದಾರಿಯುತ ವಕೀಲನ ಪಾತ್ರದಲ್ಲಿ ಅರ್ಷದ್ ವಾರ್ಸಿ ನಟಿಸಿದ್ದರು. ಅರ್ಷದ್ ಎದುರಾಗಿ ಬೊಮನ್ ಇರಾನಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಅದಾದ ಬಳಿಕ ‘ಜಾಲಿ ಎಲ್​ಲ್​ಬಿ 2’ ಸಿನಿಮಾನಲ್ಲಿ ಅರ್ಷದ್ ವಾರ್ಸಿಯನ್ನು ಪಕ್ಕಕ್ಕಿಟ್ಟು ಅಕ್ಷಯ್ ಕುಮಾರ್ ನಾಯಕರಾದರು. ಆ ಸಿನಿಮಾ ಸಹ ಸೂಪರ್-ಡೂಪರ್ ಹಿಟ್ ಆಯ್ತು. ಇದೀಗ ‘ಜಾಲಿ ಎಲ್​ಎಲ್​ಬಿ 3’ ಸಿನಿಮಾ ಸೆಟ್ಟೇರಲು ರೆಡಿಯಾಗಿದೆ.

ಇದನ್ನೂ ಓದಿ:ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಕೈಯಲ್ಲಿ ಎಷ್ಟು ಸಿನಿಮಾಗಳಿವೆ?

‘ಜಾಲಿ ಎಲ್​ಎಲ್​ಬಿ 3’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಮತ್ತೆ ವಕೀಲರಾಗಿ ಮಿಂಚಲಿದ್ದಾರೆ. ಆದರೆ ಸರಣಿಯ ಮೊದಲ ಸಿನಿಮಾದಲ್ಲಿ ಜಾಲಿ ಆಗಿ ನಟಿಸಿದ್ದ ಅರ್ಷದ್ ವಾರ್ಸಿ ‘ಜಾಲಿ ಎಲ್​ಎಲ್​ಬಿ ’ ಸಿನಿಮಾ ಸರಣಿಗೆ ಮತ್ತೆ ಮರಳಿದ್ದಾರೆ. ‘ಜಾಲಿ ಎಲ್​ಎಲ್​ಬಿ 3’ ಸಿನಿಮಾನಲ್ಲಿ ಅಕ್ಷಯ್ ಕುಮಾರ್ ಹಾಗೂ ಅರ್ಷದ್ ವಾರ್ಸಿ ಒಟ್ಟಿಗೆ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಇಬ್ಬರೂ ನಾಯಕ ನಟರಾಗಿ ನಟಿಸಲಿದ್ದಾರೆಯೇ ಅಥವಾ ಅರ್ಷದ್ ವಾರ್ಸಿ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆಯೇ ಕಾದು ನೋಡಬೇಕಿದೆ.

‘ಜಾಲಿ ಎಲ್​ಎಲ್​ಬಿ 3’ ಸಿನಿಮಾದ ಚಿತ್ರೀಕರಣ ಫೆಬ್ರವರಿ ತಿಂಗಳಲ್ಲಿ ಪ್ರಾರಂಭವಾಗಲಿದೆ. ಸಿನಿಮಾದ ನಿರ್ದೇಶವನ್ನು ಸುಭಾಷ್ ಕಪೂರ್ ನಿರ್ದೇಶನ ಮಾಡಲಿದ್ದಾರೆ. ಸಿನಿಮಾದ ಚಿತ್ರಕತೆಯನ್ನು ಅವರೇ ಬರೆದಿದ್ದಾರೆ. ಸಿನಿಮಾದ ನಾಯಕಿ ಹಾಗೂ ಇನ್ನಿತರೆ ಪಾತ್ರವರ್ಗಗಳ ಆಯ್ಕೆಯೂ ಪೂರ್ಣಗೊಂಡಿದ್ದು ಚಿತ್ರತಂಡವು ಮಾಹಿತಿಗಳನ್ನು ಹಂಚಿಕೊಳ್ಳಲಿದೆ. ಅಕ್ಷಯ್ ಕುಮಾರ್ ಇತ್ತೀಚೆಗಷ್ಟೆ ‘ಬಡೆ ಮಿಯಾ ಚೋಟೆ ಮಿಯಾ’ ಹಾಗೂ ‘ದಿ ಗ್ರೇಟ್ ಇಂಡಿಯನ್ ರೆಸ್ಕ್ಯೂ’ ಸಿನಿಮಾಗಳ ಚಿತ್ರೀಕರಣ ಮುಗಿಸಿದ್ದಾರೆ. ‘ಸ್ಕೈ ಫೋರ್ಸ್’ ಹೆಸರಿನ ಸಿನಿಮಾದಲ್ಲಿ ಪ್ರಸ್ತುತ ನಟಿಸುತ್ತಿದ್ದಾರೆ. ಇದರ ಜೊತೆಗೆ ‘ಜಾಲಿ ಎಲ್​ಎಲ್​ಬಿ 3’ ಸಿನಿಮಾದಲ್ಲಿಯೂ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು