AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿ ಇದ್ದಾರೆ ಇಬ್ಬರು ಸ್ಟಾರ್ ಹೀರೋಗಳು; ಯಾರೆಂದು ಪತ್ತೆಹಚ್ಚಿ ನೋಡೋಣ..

ನಟರ ಹೆಸರು ಹೇಳಿದ ನಂತರವೂ ಈ ಫೋಟೋದಲ್ಲಿ ಅವರು ಎಲ್ಲಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದು ಕೂಡ ಒಂದು ಕಷ್ಟದ ಟಾಸ್ಕ್​. ಯಾಕೆಂದರೆ, ಮೈಗೆಲ್ಲ ಕೆಸರು ಮೆತ್ತಿಕೊಂಡಿರುವ ಅವರನ್ನು ಗುರುತು ಹಿಡಿಯಲು ಸ್ವಲ್ಪ ಸೂಕ್ಷ್ಮವಾಗಿ ಗಮನಿಸಬೇಕು. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ. ಸಿನಿಮಾದ ಶೂಟಿಂಗ್​ ಸೆಟ್​ನಿಂದಲೇ ಆ ನಟರು ಹೀಗೆ ಡಿಫರೆಂಟ್​ ಆಗಿ ಪೋಸ್​ ನೀಡಿದ್ದಾರೆ. ಅಭಿಮಾನಿಗಳು ಇದನ್ನು ನೋಡಿ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಈ ಫೋಟೋದಲ್ಲಿ ಇದ್ದಾರೆ ಇಬ್ಬರು ಸ್ಟಾರ್ ಹೀರೋಗಳು; ಯಾರೆಂದು ಪತ್ತೆಹಚ್ಚಿ ನೋಡೋಣ..
ವೈರಲ್​ ಫೋಟೋ
ಮದನ್​ ಕುಮಾರ್​
|

Updated on: Feb 01, 2024 | 7:21 PM

Share

ಸಿನಿಮಾ ಪ್ರಮೋಷನ್​ಗಾಗಿ ಸಿಕ್ಕಾಪಟ್ಟೆ ಸರ್ಕಸ್​ ಮಾಡಲಾಗುತ್ತದೆ. ಈಗಿನ ಕಾಲದಲ್ಲಿ ಹೇಗಾದರೂ ಕಷ್ಟಪಟ್ಟು ಒಂದು ಸಿನಿಮಾ ಮಾಡಬಹುದು. ಆದರೆ ಅದನ್ನು ಜನರಿಗೆ ತಲುಪಿಸುವುದು ನಿಜಕ್ಕೂ ಸವಾಲಿನ ಕೆಲಸ. ಹಾಗಾಗಿ ಇಷ್ಟೆಲ್ಲ ಕಸರತ್ತು ಮಾಡಬೇಕಾಗುತ್ತದೆ. ಅದಕ್ಕೆ ಬೆಸ್ಟ್​ ಉದಾಹರಣೆಯೇ ಈ ಫೋಟೋ. ಸೋಶಿಯಲ್​ ಮೀಡಿಯಾದಲ್ಲಿ ಸಿನಿಪ್ರಿಯರ ಗಮನ ಸೆಳೆಯುತ್ತಿರುವ ಈ ಫೋಟೋದಲ್ಲಿ (Viral Photo) ಇಬ್ಬರು ಸ್ಟಾರ್​ ನಟರು ಇದ್ದಾರೆ. ಬಾಲಿವುಡ್​ನ (Bollywood) ಟಾಪ್​ ಹೀರೋಗಳ ಪಟ್ಟಿಯಲ್ಲಿ ಅವರ ಹೆಸರು ಕೂಡ ಇದೆ. ಮೈಗೆ ಕೆಸರು ಮೆತ್ತಿಕೊಂಡು ನಿಂತಿರುವ ಆ ಇಬ್ಬರು ಖ್ಯಾತ ನಟರು (Bollywood Actors) ಯಾರೆಂಬುದು ಪತ್ತೆ ಹಚ್ಚಬೇಕು.

ಇದು ಬೇರೆ ಯಾರೂ ಅಲ್ಲ. ಹಿಂದಿ ಚಿತ್ರರಂಗದ ಜನಪ್ರಿಯ ನಟರಾದ ಅಕ್ಷಯ್​ ಕುಮಾರ್​ ಮತ್ತು ಟೈಗರ್​ ಶ್ರಾಫ್​! ನಟರ ಹೆಸರು ಹೇಳಿದ ನಂತರವೂ ಈ ಫೋಟೋದಲ್ಲಿ ಅವರು ಎಲ್ಲಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದು ಕೂಡ ಒಂದು ಕಷ್ಟದ ಟಾಸ್ಕ್​. ಯಾಕೆಂದರೆ, ಮೈಗೆಲ್ಲ ಕೆಸರು ಮೆತ್ತಿಕೊಂಡಿರುವ ಅವರನ್ನು ಗುರುತು ಹಿಡಿಯಲು ಸ್ವಲ್ಪ ಸೂಕ್ಷ್ಮವಾಗಿ ಗಮನಿಸಬೇಕು.

View this post on Instagram

A post shared by Akshay Kumar (@akshaykumar)

ಫೋಟೋದಲ್ಲಿ ಎಡಗಡೆಯಿಂದ ಇರುವ ಮೂರನೆಯವರೇ ಅಕ್ಷಯ್​ ಕುಮಾರ್​. ಅವರ ಎಡಭಾಗದಲ್ಲಿ ನಿಂತಿರುವುದು ಟೈಗರ್​ ಶ್ರಾಫ್​. ಸೋಶಿಯಲ್​ ಮೀಡಿಯಾದಲ್ಲಿ ಅಕ್ಷಯ್​ ಕುಮಾರ್​ ಅವರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಂದಹಾಗೆ, ಇದು ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಕ್ಲಿಕ್ಕಿಸಿದ ಫೋಟೋ. ಒಂದು ಹಂತದ ಶೂಟಿಂಗ್​ ಮುಗಿದಿದೆ ಎಂಬುದನ್ನು ಈ ಫೋಟೋ ಹಂಚಿಕೊಳ್ಳುವ ಮೂಲಕ ಅಕ್ಷಯ್​ ಕುಮಾರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದೇ ಫ್ರೇಮ್​ನಲ್ಲಿ ಸೂರ್ಯ, ಅಮಿತಾಭ್​, ಅಕ್ಷಯ್​ ಕುಮಾರ್​; ಏನ್​ ಸಮಾಚಾರ?

ಈ ವರ್ಷ ಈದ್​ ಹಬ್ಬದ ಪ್ರಯುಕ್ತ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಬಿಡುಗಡೆ ಆಗಲಿದೆ. ಮುಂಬೈ, ಲಂಡನ್​, ಸ್ಕಾಟ್ಲೆಂಡ್​, ಅಬು ಧಾಬಿ, ಜೋರ್ಡನ್​ ಮುಂತಾದ ಕಡೆಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಅಲಿ ಅಬ್ಬಾಸ್​ ಜಾಫರ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸೋನಾಕ್ಷಿ ಸಿನ್ಹಾ, ಪೃಥ್ವಿರಾಜ್​ ಸುಕುಮಾರನ್​ ಅವರು ಕೂಡ ‘ಬಡೇ ಮಿಯಾ ಚೋಟೆ ಮಿಯಾ’ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಬಹುಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ