AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬೆಳಿಗ್ಗೆ ಬೇಗ ಏಳೋದೇ ಸಮಸ್ಯೆನಾ’; ಅಕ್ಷಯ್ ಕುಮಾರ್ ನೇರ ಪ್ರಶ್ನೆ

ಇತ್ತೀಚೆಗೆ ಅಕ್ಷಯ್ ಸಿನಿಮಾ ಸೋಲುತ್ತಿದೆ. ಈ ಕಾರಣಕ್ಕೆ ಅವರನ್ನು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಅಕ್ಷಯ್ ಮಾಡಿದ ಪ್ರತಿ ವಿಚಾರಕ್ಕೂ ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಸ್ವತಃ ಅಕ್ಷಯ್ ಕುಮಾರ್ಗೂ ಈ ಬಗ್ಗೆ ಬೇಸರ ಇದೆ. ಅವರು ಎಲ್ಲರ ಪ್ರಶ್ನೆಗೆ ನೇರವಾಗಿ ಉತ್ತರ ನೀಡಿದ್ದರು. 

‘ನಾನು ಬೆಳಿಗ್ಗೆ ಬೇಗ ಏಳೋದೇ ಸಮಸ್ಯೆನಾ’; ಅಕ್ಷಯ್ ಕುಮಾರ್ ನೇರ ಪ್ರಶ್ನೆ
ಅಕ್ಷಯ್ ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 03, 2024 | 7:20 AM

Share

ಅಕ್ಷಯ್ ಕುಮಾರ್ ಅವರಿಗೆ ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಗುತ್ತಿಲ್ಲ. ಅವರು ಮಾಡಿದ ಚಿತ್ರಗಳೆಲ್ಲವೂ ಸೋಲು ಕಾಣುತ್ತಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಅವರ ಬಳಿಯೂ ಸಾಧ್ಯವಾಗಿಲ್ಲ. ವರ್ಷಕ್ಕೆ ನಾಲ್ಕು ಸಿನಿಮಾ ಮಾಡುತ್ತಿರುವುದಕ್ಕೇ ಚಿತ್ರಗಳ ಸೋಲುತ್ತಿವೆಯೇ ಎನ್ನುವ ಪ್ರಶ್ನೆ ಅವರಿಗೆ ಬಂದಿಲ್ಲ. ಅವರು ಈಗಲೂ ಅದೇ ಪದ್ಧತಿ ಮುಂದುವರಿಸಿಕೊಂಡು ಹೋಗಿದ್ದಾರೆ. ಈ ಮೊದಲು ಅಕ್ಷಯ್ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದ್ದರು.

ಇತ್ತೀಚೆಗೆ ಅಕ್ಷಯ್ ಸಿನಿಮಾ ಸೋಲುತ್ತಿದೆ. ಈ ಕಾರಣಕ್ಕೆ ಅವರನ್ನು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಅಕ್ಷಯ್ ಮಾಡಿದ ಪ್ರತಿ ವಿಚಾರಕ್ಕೂ ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಸ್ವತಃ ಅಕ್ಷಯ್ ಕುಮಾರ್ಗೂ ಈ ಬಗ್ಗೆ ಬೇಸರ ಇದೆ. ಅವರು ಎಲ್ಲರ ಪ್ರಶ್ನೆಗೆ ನೇರವಾಗಿ ಉತ್ತರ ನೀಡಿದ್ದರು.

‘ನಾನು ಕೆಲಸ ಮಾಡುತ್ತಿದ್ದೇನೆ, ಕಳ್ಳತನ ಮಾಡುತ್ತಿಲ್ಲ. ಅಷ್ಟು ಬೇಗ ಏಕೆ ಎದ್ದೇಳುತ್ತೀರೀ ಎಂದು ಕೇಳುತ್ತಾರೆ. ಬೆಳಿಗ್ಗೆ ಇರೋದೇ ಏಳೋಕೆ. ರಾತ್ರಿ ಅಷ್ಟು ಬೇಗೆ ಏಕೆ ನಿದ್ರಿಸುತ್ತೀರಿ ಎಂದು ಕೇಳುತ್ತಾರೆ. ರಾತ್ರಿ ಇರೋದೆ ನಿದ್ರಿಸೋಕೆ. ಏಕೇ ಇಷ್ಟು ಕೆಲಸ ಮಾಡುತ್ತೀರಿ ಎಂದು ಕೇಳುತ್ತಾರೆ’ ಎಂದು ಅವರು ಹೇಳಿದ್ದಾರೆ.

‘ನಾನು ಒಟ್ಟಿಗೆ ನಾಲ್ಕು ಸಿನಿಮಾ ಮಾಡುತ್ತೇನೆ. 50 ದಿನ ಬೇಕಿದ್ದರೆ 50 ದಿನ ಕೊಡುತ್ತೇನೆ. ನಾನು ಈ ಬಗ್ಗೆ ಎಂದಿಗೂ ಹೇಳಿಲ್ಲ. ಈಗ ಹೇಳುತ್ತಿದ್ದೇನೆ. ಇಷ್ಟೊಂದು ಕೆಲಸ ಮಾಡುತ್ತೇನೆ ಎಂದು ಏಕೆ ಎಲ್ಲರೂ ಕೇಳುತ್ತಾರೆ’ ಎಂದು ಪ್ರಶ್ನೆ ಮಾಡಿದ್ದಾರು ಅವರು.

ಇದನ್ನೂ ಓದಿ: ‘ಭೂಲ್ ಭುಲಯ್ಯ 3’ ಚಿತ್ರದಲ್ಲಿ ಇರಲಿದೆ ಅಕ್ಷಯ್ ಕುಮಾರ್ ಅತಿಥಿ ಪಾತ್ರ?

ಅಕ್ಷಯ್ ಕುಮಾರ್ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ‘ಬಡೇ ಮಿಯಾ ಚೋಟೆ ಮಿಯಾ’, ‘ಸರ್ಫಿರಾ’, ‘ಖೇಲ್ ಖೇಲ್ ಮೇ’ ಚಿತ್ರಗಳು ರಿಲೀಸ್ ಆಗಿ ಸೋತಿವೆ. ಅವರು ‘ಸ್ತ್ರೀ 2’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು. ‘ಸ್ತ್ರೀ 3’ ಚಿತ್ರದಲ್ಲಿ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಅವರು ‘ಸಿಂಗಂ ಅಗೇನ್’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ಕಣ್ಣಪ್ಪ’  ಚಿತ್ರದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:00 pm, Sat, 2 November 24

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ