AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬೆಳಿಗ್ಗೆ ಬೇಗ ಏಳೋದೇ ಸಮಸ್ಯೆನಾ’; ಅಕ್ಷಯ್ ಕುಮಾರ್ ನೇರ ಪ್ರಶ್ನೆ

ಇತ್ತೀಚೆಗೆ ಅಕ್ಷಯ್ ಸಿನಿಮಾ ಸೋಲುತ್ತಿದೆ. ಈ ಕಾರಣಕ್ಕೆ ಅವರನ್ನು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಅಕ್ಷಯ್ ಮಾಡಿದ ಪ್ರತಿ ವಿಚಾರಕ್ಕೂ ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಸ್ವತಃ ಅಕ್ಷಯ್ ಕುಮಾರ್ಗೂ ಈ ಬಗ್ಗೆ ಬೇಸರ ಇದೆ. ಅವರು ಎಲ್ಲರ ಪ್ರಶ್ನೆಗೆ ನೇರವಾಗಿ ಉತ್ತರ ನೀಡಿದ್ದರು. 

‘ನಾನು ಬೆಳಿಗ್ಗೆ ಬೇಗ ಏಳೋದೇ ಸಮಸ್ಯೆನಾ’; ಅಕ್ಷಯ್ ಕುಮಾರ್ ನೇರ ಪ್ರಶ್ನೆ
ಅಕ್ಷಯ್ ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 03, 2024 | 7:20 AM

Share

ಅಕ್ಷಯ್ ಕುಮಾರ್ ಅವರಿಗೆ ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಗುತ್ತಿಲ್ಲ. ಅವರು ಮಾಡಿದ ಚಿತ್ರಗಳೆಲ್ಲವೂ ಸೋಲು ಕಾಣುತ್ತಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಅವರ ಬಳಿಯೂ ಸಾಧ್ಯವಾಗಿಲ್ಲ. ವರ್ಷಕ್ಕೆ ನಾಲ್ಕು ಸಿನಿಮಾ ಮಾಡುತ್ತಿರುವುದಕ್ಕೇ ಚಿತ್ರಗಳ ಸೋಲುತ್ತಿವೆಯೇ ಎನ್ನುವ ಪ್ರಶ್ನೆ ಅವರಿಗೆ ಬಂದಿಲ್ಲ. ಅವರು ಈಗಲೂ ಅದೇ ಪದ್ಧತಿ ಮುಂದುವರಿಸಿಕೊಂಡು ಹೋಗಿದ್ದಾರೆ. ಈ ಮೊದಲು ಅಕ್ಷಯ್ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದ್ದರು.

ಇತ್ತೀಚೆಗೆ ಅಕ್ಷಯ್ ಸಿನಿಮಾ ಸೋಲುತ್ತಿದೆ. ಈ ಕಾರಣಕ್ಕೆ ಅವರನ್ನು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಅಕ್ಷಯ್ ಮಾಡಿದ ಪ್ರತಿ ವಿಚಾರಕ್ಕೂ ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಸ್ವತಃ ಅಕ್ಷಯ್ ಕುಮಾರ್ಗೂ ಈ ಬಗ್ಗೆ ಬೇಸರ ಇದೆ. ಅವರು ಎಲ್ಲರ ಪ್ರಶ್ನೆಗೆ ನೇರವಾಗಿ ಉತ್ತರ ನೀಡಿದ್ದರು.

‘ನಾನು ಕೆಲಸ ಮಾಡುತ್ತಿದ್ದೇನೆ, ಕಳ್ಳತನ ಮಾಡುತ್ತಿಲ್ಲ. ಅಷ್ಟು ಬೇಗ ಏಕೆ ಎದ್ದೇಳುತ್ತೀರೀ ಎಂದು ಕೇಳುತ್ತಾರೆ. ಬೆಳಿಗ್ಗೆ ಇರೋದೇ ಏಳೋಕೆ. ರಾತ್ರಿ ಅಷ್ಟು ಬೇಗೆ ಏಕೆ ನಿದ್ರಿಸುತ್ತೀರಿ ಎಂದು ಕೇಳುತ್ತಾರೆ. ರಾತ್ರಿ ಇರೋದೆ ನಿದ್ರಿಸೋಕೆ. ಏಕೇ ಇಷ್ಟು ಕೆಲಸ ಮಾಡುತ್ತೀರಿ ಎಂದು ಕೇಳುತ್ತಾರೆ’ ಎಂದು ಅವರು ಹೇಳಿದ್ದಾರೆ.

‘ನಾನು ಒಟ್ಟಿಗೆ ನಾಲ್ಕು ಸಿನಿಮಾ ಮಾಡುತ್ತೇನೆ. 50 ದಿನ ಬೇಕಿದ್ದರೆ 50 ದಿನ ಕೊಡುತ್ತೇನೆ. ನಾನು ಈ ಬಗ್ಗೆ ಎಂದಿಗೂ ಹೇಳಿಲ್ಲ. ಈಗ ಹೇಳುತ್ತಿದ್ದೇನೆ. ಇಷ್ಟೊಂದು ಕೆಲಸ ಮಾಡುತ್ತೇನೆ ಎಂದು ಏಕೆ ಎಲ್ಲರೂ ಕೇಳುತ್ತಾರೆ’ ಎಂದು ಪ್ರಶ್ನೆ ಮಾಡಿದ್ದಾರು ಅವರು.

ಇದನ್ನೂ ಓದಿ: ‘ಭೂಲ್ ಭುಲಯ್ಯ 3’ ಚಿತ್ರದಲ್ಲಿ ಇರಲಿದೆ ಅಕ್ಷಯ್ ಕುಮಾರ್ ಅತಿಥಿ ಪಾತ್ರ?

ಅಕ್ಷಯ್ ಕುಮಾರ್ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ‘ಬಡೇ ಮಿಯಾ ಚೋಟೆ ಮಿಯಾ’, ‘ಸರ್ಫಿರಾ’, ‘ಖೇಲ್ ಖೇಲ್ ಮೇ’ ಚಿತ್ರಗಳು ರಿಲೀಸ್ ಆಗಿ ಸೋತಿವೆ. ಅವರು ‘ಸ್ತ್ರೀ 2’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು. ‘ಸ್ತ್ರೀ 3’ ಚಿತ್ರದಲ್ಲಿ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಅವರು ‘ಸಿಂಗಂ ಅಗೇನ್’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ಕಣ್ಣಪ್ಪ’  ಚಿತ್ರದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:00 pm, Sat, 2 November 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ