AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಕ್ಕಾಚಾರದಲ್ಲಿ ಯಾಮಾರಿದ ಅಕ್ಷಯ್ ಕುಮಾರ್​​; ಅಕ್ಕಿ ತೆಗೆದುಕೊಂಡ್ರು ಮಹತ್ವದ ನಿರ್ಧಾರ

ಕೊವಿಡ್ ಎರಡನೇ ಅಲೆ ಜೋರಾದ ನಂತರದಲ್ಲಿ ಚಿತ್ರಮಂದಿರಕ್ಕೆ ಬೀಗ ಹಾಕಲಾಗಿತ್ತು. ಈಗ ಚಿತ್ರಮಂದಿರ ತೆರೆದಿದೆಯಾದರೂ ಅನೇಕ ರಾಜ್ಯಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ.

ಲೆಕ್ಕಾಚಾರದಲ್ಲಿ ಯಾಮಾರಿದ ಅಕ್ಷಯ್ ಕುಮಾರ್​​; ಅಕ್ಕಿ ತೆಗೆದುಕೊಂಡ್ರು ಮಹತ್ವದ ನಿರ್ಧಾರ
ಲೆಕ್ಕಾಚಾರದಲ್ಲಿ ಯಾಮಾರಿದ ಅಕ್ಷಯ್ ಕುಮಾರ್​​; ಅಕ್ಕಿ ತೆಗೆದುಕೊಂಡ್ರು ಮಹತ್ವದ ನಿರ್ಧಾರ
TV9 Web
| Edited By: |

Updated on:Aug 22, 2021 | 8:47 AM

Share

ಅಕ್ಷಯ್​ ಕುಮಾರ್ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುತ್ತವೆ. ಅವರ ಅನೇಕ ಚಿತ್ರಗಳು ನೂರ ಕೋಟಿ ಕಲೆಕ್ಷನ್​ ಮಾಡಿವೆ. ಸಿನಿಮಾ ಉತ್ತಮವಾಗಿದ್ದರೆ ವೀಕ್ಷಕರು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆ ಅವರದ್ದು. ‘ಬೆಲ್​ ಬಾಟಮ್​’ ವಿಚಾರದಲ್ಲಿ ಈ ಲೆಕ್ಕಾಚಾರ ತಪ್ಪಿದೆ. ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿದ್ದರೂ ಚಿತ್ರಮಂದಿರದತ್ತ ಯಾರೂ ಹೆಜ್ಜೆ ಹಾಕುತ್ತಿಲ್ಲ. ಪರಿಣಾಮ ‘ಬೆಲ್​ ಬಾಟಮ್​’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೊರಗಿದೆ. ಇದು ಅಕ್ಷಯ್​ ಚಿಂತೆಗೆ ಕಾರಣವಾಗಿದೆ.

ಕೊವಿಡ್ ಎರಡನೇ ಅಲೆ ಜೋರಾದ ನಂತರದಲ್ಲಿ ಚಿತ್ರಮಂದಿರಕ್ಕೆ ಬೀಗ ಹಾಕಲಾಗಿತ್ತು. ಈಗ ಚಿತ್ರಮಂದಿರ ತೆರೆದಿದೆಯಾದರೂ ಅನೇಕ ರಾಜ್ಯಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ. ಅಂದರೆ, ಅಕ್ಕಪಕ್ಕ ಕೂರುವಂತಿಲ್ಲ. ಹೀಗಿರುವಾಗ ಫ್ಯಾಮಿಲಿ ಆಡಿಯನ್ಸ್​ ಚಿತ್ರಮಂದಿರದತ್ತ ಮುಖ ಮಾಡುವ ಸಾಧ್ಯತೆ ಕಡಿಮೆ. ಇದೇ ಕಾರಣಕ್ಕೆ ‘ಬೆಲ್​ ಬಾಟಮ್​’ ಸಿನಿಮಾ ವೀಕ್ಷಣೆಗೆ ಪ್ರೇಕ್ಷಕರು ಚಿತ್ರಮಂದಿರದತ್ತ ಮುಖ ಮಾಡುತ್ತಿಲ್ಲ. ಇದು ಸಿನಿಮಾ ಕಲೆಕ್ಷನ್​ಗೆ ಹೊಡೆತ ನೀಡಿದೆ.

ಬಾಕ್ಸ್​ ಆಫೀಸ್​ ಮೂಲಗಳ ಪ್ರಕಾರ ಈ ಚಿತ್ರ ಶುಕ್ರವಾರ 2.75 ಕೋಟಿ ರೂಪಾಯಿ ಹಾಗೂ ಶನಿವಾರ 2.40 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ ಎನ್ನಲಾಗಿದೆ. ಕಲೆಕ್ಷನ್​ ವಿಚಾರದಲ್ಲಿ ಈ ಸಿನಿಮಾಗೆ ತೀವ್ರ ಹಿನ್ನಡೆ ಆಗಿದೆ ಎನ್ನಬಹುದು. ಹೀಗಾಗಿ ಈ ಸಿನಿಮಾ ಕೆಲವೇ ವಾರಗಳಲ್ಲಿ ಅಮೇಜಾನ್​ ಪ್ರೈಮ್​ನಲ್ಲಿ ಪ್ರಸಾರವಾಗಲಿದೆ ಎನ್ನುವ ಮಾತು ಕೇಳಿ ಬಂದಿದೆ. ಒಟಿಟಿಯವರು ದೊಡ್ಡ ಮೊತ್ತಕ್ಕೆ ಆಫರ್​ ಮಾಡಿದ್ದರಿಂದ ಚಿತ್ರತಂಡ ಇದಕ್ಕೆ ಒಕೆ ಎಂದಿದೆ. ಅಕ್ಷಯ್ ಕೂಡ ಇದಕ್ಕೆ ತಲೆ ಆಡಿಸಿದ್ದಾರೆ.

ಇನ್ನು, ಅಕ್ಷಯ್​ ಕುಮಾರ್​ ಹಾಗೂ ನಿರ್ದೇಶಕ ರೋಹಿತ್​ ಶೆಟ್ಟಿ ಕಾಂಬಿನೇಷನ್​ ‘ಸೂರ್ಯವಂಶಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಆದರೆ, ಕೊವಿಡ್​ ಎರಡನೇ ಅಲೆ ಇದಕ್ಕೆ ಆಸ್ಪದ ನೀಡಿಲ್ಲ. ಈಗ ಚಿತ್ರತಂಡದವರು ಸಿನಿಮಾ ರಿಲೀಸ್​ಗೆ ಪ್ಲ್ಯಾನ್​ ಮಾಡಿಕೊಂಡಿದ್ದರು. ಆದರೆ, ಈಗ ಇನ್ನೂ ಸ್ವಲ್ಪ ಸಮಯ ಕಾದು ಸಿನಿಮಾ ರಿಲೀಸ್​ ಮಾಡುವಂತೆ ಅಕ್ಷಯ್​ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bell Bottom: ಬಾಕ್ಸಾಫೀಸ್​ನಲ್ಲಿ ಹಿಂದೆ ಬಿತ್ತು ಬಹು ನಿರೀಕ್ಷಿತ ‘ಬೆಲ್​ಬಾಟಂ’; ಅಕ್ಷಯ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು?

ಅಕ್ಷಯ್​ ಕುಮಾರ್ ಸಿನಿಮಾ ಬ್ಯಾನ್​ ಮಾಡಿದ ಮೂರು ಪ್ರಮುಖ ರಾಷ್ಟ್ರಗಳು; ಬಾಕ್ಸ್​ ಆಫೀಸ್​ ಕಲೆಕ್ಷನ್​ಗೆ ಹೊಡೆತ

Published On - 7:14 am, Sun, 22 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್