AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಸತ್ತ ಮರುದಿನವೇ ಅಕ್ಷಯ್​ ಕುಮಾರ್​ ಹುಟ್ಟುಹಬ್ಬ; ಅಮ್ಮನ ಬಗ್ಗೆ ನಟನ ಭಾವುಕ ಮಾತು​

ಬುಧವಾರವಷ್ಟೇ (ಸೆ.8) ತಾಯಿಯನ್ನು ಕಳೆದುಕೊಂಡ ಅಕ್ಷಯ್​ ಕುಮಾರ್​ ಅವರಿಗೆ ಇಂದು (ಸೆ.9) ಹುಟ್ಟುಹಬ್ಬ. ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ತಾಯಿಯನ್ನು ನೆನೆದು ಅಕ್ಷಯ್​ ಕುಮಾರ್​ ಭಾವುಕರಾಗಿದ್ದಾರೆ.

ತಾಯಿ ಸತ್ತ ಮರುದಿನವೇ ಅಕ್ಷಯ್​ ಕುಮಾರ್​ ಹುಟ್ಟುಹಬ್ಬ; ಅಮ್ಮನ ಬಗ್ಗೆ ನಟನ ಭಾವುಕ ಮಾತು​
ತಾಯಿ ಅರುಣಾ ಭಾಟಿಯಾ ಜೊತೆ ಅಕ್ಷಯ್​ ಕುಮಾರ್​
TV9 Web
| Edited By: |

Updated on: Sep 09, 2021 | 11:47 AM

Share

ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ನಟ ಅಕ್ಷಯ್​ ಕುಮಾರ್​ ಅವರು ಇಂದು (ಸೆ.9) ಅದ್ದೂರಿಯಾಗಿ ಬರ್ತ್​ಡೇ ಆಚರಣೆ ಮಾಡಿಕೊಳ್ಳಬೇಕಿತ್ತು. ಆದರೆ ಈಗ ಅವರ ಕುಟುಂಬದಲ್ಲಿ ಹುಟ್ಟುಹಬ್ಬದ ಸಂಭ್ರಮವಿಲ್ಲ. ಜನ್ಮದಿನಕ್ಕೂ ಒಂದು ದಿನ ಮುನ್ನ ಅಂದರೆ ಸೆ.8ರಂದು ಮುಂಜಾನೆ ಅಕ್ಷಯ್​ ಕುಮಾರ್​ ತಾಯಿ ಅರುಣಾ ಭಾಟಿಯಾ ನಿಧನರಾದರು. ಹಾಗಾಗಿ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಈ ಸಂದಿಗ್ಧ ಸಂದರ್ಭದಲ್ಲಿ ತಾಯಿಯನ್ನು ನೆನೆದು ಅಕ್ಷಯ್​ ಕುಮಾರ್​ ಭಾವುಕವಾಗಿ ಪೋಸ್ಟ್​ ಮಾಡಿದ್ದಾರೆ. ಅವರ ಮನೆಯಲ್ಲೀಗ ಶೋಕದ ವಾತಾವರಣ ನಿರ್ಮಾಣ ಆಗಿದೆ. ತಾಯಿಯನ್ನು ಕಳೆದುಕೊಂಡ ಅವರಿಗೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಸಾಂತ್ವನ ಹೇಳುತ್ತಿದ್ದಾರೆ.

ಅಕ್ಷಯ್​ ಕುಮಾರ್​ ಕೆನ್ನೆಗೆ ಅರುಣಾ ಭಾಟಿಯಾ ಅವರು ತನ್ಮಯತೆಯಿಂದ ಮುತ್ತಿಡುತ್ತಿರುವ ಕ್ಷಣ ಈ ಫೋಟೋದಲ್ಲಿ ಸೆರೆಯಾಗಿದೆ. ಅದನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಶೇರ್​ ಮಾಡಿಕೊಂಡಿರುವ ಅಕ್ಕಿ, ಅಮ್ಮನನ್ನು ಭಾವುಕವಾಗಿ ಸ್ಮರಿಸಿದ್ದಾರೆ. ‘ಅಮ್ಮ ನನಗಾಗಿ ಮೇಲಿಂದಲೇ ಹ್ಯಾಪಿ ಬರ್ತ್​ಡೇ ಅಂತ ಹಾಡುತ್ತಿದ್ದಾರೆ ಎಂಬ ನಂಬಿಕೆ ನನಗಿದೆ. ಸಾಂತ್ವನ ಹೇಳಿದ ಮತ್ತು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಜೀವನ ಮುಂದೆ ಸಾಗಲೇಬೇಕು’ ಎಂದು ಅಕ್ಷಯ್​ ಕುಮಾರ್​ ಬರೆದುಕೊಂಡಿದ್ದಾರೆ.

ತಾಯಿ ನಿಧನರಾದ ಸುದ್ದಿಯನ್ನು ಸೆ.8ರಂದು ಬೆಳಗ್ಗೆ ಅಕ್ಷಯ್ ಕುಮಾರ್​ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ತಿಳಿಸಿದ್ದರು. ‘ನನ್ನ ತಾಯಿಯೇ ನನ್ನ ಸರ್ವಸ್ವ. ಇಂದು ಅವರನ್ನು ಕಳೆದುಕೊಂಡು ನಾನು ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬದವರು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ’ ಎಂದು ಅವರು ಬರೆದುಕೊಂಡಿದ್ದರು.

ಅಕ್ಷಯ್​ ಕುಮಾರ್​ ಅವರ ಗೆಳೆಯ, ನಿರ್ದೇಶಕ ಆನಂದ್​ ಎಲ್​. ರಾಯ್​ ಅವರ ತಾಯಿ ಕೂಡ ಸೆ.8ರಂದು ನಿಧನರಾದರು. ತಮ್ಮ ತಾಯಿಯ ಅಂತ್ಯ ಸಂಸ್ಕಾರ ಮುಗಿಸಿದ ಬಳಿಕ ಗೆಳೆಯನ ತಾಯಿಯ ಅಂತ್ಯಕ್ರಿಯೆಯಲ್ಲೂ ಅಕ್ಷಯ್​ ಕುಮಾರ್​ ಪಾಲ್ಗೊಂಡಿದ್ದರು. ಅವರ ಈ ನಡೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಫೋಟೋಗಳು ವೈರಲ್​ ಆಗಿವೆ.

ಇದನ್ನೂ ಓದಿ:

Akshay Kumar: ಅಕ್ಷಯ್​ ಕುಮಾರ್​ಗೆ ಮಾತೃ ವಿಯೋಗ; ಅಗಲಿದ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ನಟ

ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ