AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಸತ್ತ ಮರುದಿನವೇ ಅಕ್ಷಯ್​ ಕುಮಾರ್​ ಹುಟ್ಟುಹಬ್ಬ; ಅಮ್ಮನ ಬಗ್ಗೆ ನಟನ ಭಾವುಕ ಮಾತು​

ಬುಧವಾರವಷ್ಟೇ (ಸೆ.8) ತಾಯಿಯನ್ನು ಕಳೆದುಕೊಂಡ ಅಕ್ಷಯ್​ ಕುಮಾರ್​ ಅವರಿಗೆ ಇಂದು (ಸೆ.9) ಹುಟ್ಟುಹಬ್ಬ. ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ತಾಯಿಯನ್ನು ನೆನೆದು ಅಕ್ಷಯ್​ ಕುಮಾರ್​ ಭಾವುಕರಾಗಿದ್ದಾರೆ.

ತಾಯಿ ಸತ್ತ ಮರುದಿನವೇ ಅಕ್ಷಯ್​ ಕುಮಾರ್​ ಹುಟ್ಟುಹಬ್ಬ; ಅಮ್ಮನ ಬಗ್ಗೆ ನಟನ ಭಾವುಕ ಮಾತು​
ತಾಯಿ ಅರುಣಾ ಭಾಟಿಯಾ ಜೊತೆ ಅಕ್ಷಯ್​ ಕುಮಾರ್​
TV9 Web
| Edited By: |

Updated on: Sep 09, 2021 | 11:47 AM

Share

ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ನಟ ಅಕ್ಷಯ್​ ಕುಮಾರ್​ ಅವರು ಇಂದು (ಸೆ.9) ಅದ್ದೂರಿಯಾಗಿ ಬರ್ತ್​ಡೇ ಆಚರಣೆ ಮಾಡಿಕೊಳ್ಳಬೇಕಿತ್ತು. ಆದರೆ ಈಗ ಅವರ ಕುಟುಂಬದಲ್ಲಿ ಹುಟ್ಟುಹಬ್ಬದ ಸಂಭ್ರಮವಿಲ್ಲ. ಜನ್ಮದಿನಕ್ಕೂ ಒಂದು ದಿನ ಮುನ್ನ ಅಂದರೆ ಸೆ.8ರಂದು ಮುಂಜಾನೆ ಅಕ್ಷಯ್​ ಕುಮಾರ್​ ತಾಯಿ ಅರುಣಾ ಭಾಟಿಯಾ ನಿಧನರಾದರು. ಹಾಗಾಗಿ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಈ ಸಂದಿಗ್ಧ ಸಂದರ್ಭದಲ್ಲಿ ತಾಯಿಯನ್ನು ನೆನೆದು ಅಕ್ಷಯ್​ ಕುಮಾರ್​ ಭಾವುಕವಾಗಿ ಪೋಸ್ಟ್​ ಮಾಡಿದ್ದಾರೆ. ಅವರ ಮನೆಯಲ್ಲೀಗ ಶೋಕದ ವಾತಾವರಣ ನಿರ್ಮಾಣ ಆಗಿದೆ. ತಾಯಿಯನ್ನು ಕಳೆದುಕೊಂಡ ಅವರಿಗೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಸಾಂತ್ವನ ಹೇಳುತ್ತಿದ್ದಾರೆ.

ಅಕ್ಷಯ್​ ಕುಮಾರ್​ ಕೆನ್ನೆಗೆ ಅರುಣಾ ಭಾಟಿಯಾ ಅವರು ತನ್ಮಯತೆಯಿಂದ ಮುತ್ತಿಡುತ್ತಿರುವ ಕ್ಷಣ ಈ ಫೋಟೋದಲ್ಲಿ ಸೆರೆಯಾಗಿದೆ. ಅದನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಶೇರ್​ ಮಾಡಿಕೊಂಡಿರುವ ಅಕ್ಕಿ, ಅಮ್ಮನನ್ನು ಭಾವುಕವಾಗಿ ಸ್ಮರಿಸಿದ್ದಾರೆ. ‘ಅಮ್ಮ ನನಗಾಗಿ ಮೇಲಿಂದಲೇ ಹ್ಯಾಪಿ ಬರ್ತ್​ಡೇ ಅಂತ ಹಾಡುತ್ತಿದ್ದಾರೆ ಎಂಬ ನಂಬಿಕೆ ನನಗಿದೆ. ಸಾಂತ್ವನ ಹೇಳಿದ ಮತ್ತು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಜೀವನ ಮುಂದೆ ಸಾಗಲೇಬೇಕು’ ಎಂದು ಅಕ್ಷಯ್​ ಕುಮಾರ್​ ಬರೆದುಕೊಂಡಿದ್ದಾರೆ.

ತಾಯಿ ನಿಧನರಾದ ಸುದ್ದಿಯನ್ನು ಸೆ.8ರಂದು ಬೆಳಗ್ಗೆ ಅಕ್ಷಯ್ ಕುಮಾರ್​ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ತಿಳಿಸಿದ್ದರು. ‘ನನ್ನ ತಾಯಿಯೇ ನನ್ನ ಸರ್ವಸ್ವ. ಇಂದು ಅವರನ್ನು ಕಳೆದುಕೊಂಡು ನಾನು ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬದವರು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ’ ಎಂದು ಅವರು ಬರೆದುಕೊಂಡಿದ್ದರು.

ಅಕ್ಷಯ್​ ಕುಮಾರ್​ ಅವರ ಗೆಳೆಯ, ನಿರ್ದೇಶಕ ಆನಂದ್​ ಎಲ್​. ರಾಯ್​ ಅವರ ತಾಯಿ ಕೂಡ ಸೆ.8ರಂದು ನಿಧನರಾದರು. ತಮ್ಮ ತಾಯಿಯ ಅಂತ್ಯ ಸಂಸ್ಕಾರ ಮುಗಿಸಿದ ಬಳಿಕ ಗೆಳೆಯನ ತಾಯಿಯ ಅಂತ್ಯಕ್ರಿಯೆಯಲ್ಲೂ ಅಕ್ಷಯ್​ ಕುಮಾರ್​ ಪಾಲ್ಗೊಂಡಿದ್ದರು. ಅವರ ಈ ನಡೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಫೋಟೋಗಳು ವೈರಲ್​ ಆಗಿವೆ.

ಇದನ್ನೂ ಓದಿ:

Akshay Kumar: ಅಕ್ಷಯ್​ ಕುಮಾರ್​ಗೆ ಮಾತೃ ವಿಯೋಗ; ಅಗಲಿದ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ನಟ

ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ