AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪರೇಶ್ ರಾವಲ್ ಇಲ್ಲದೆಯೂ ಹೇರಾ ಫೇರಿ ಆಗುತ್ತೆ’; ಧಿಮಾಕಿನಿಂದ ಉತ್ತರಿಸಿದ ಅಕ್ಷಯ್ ಕುಮಾರ್

‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ರಾವಲ್ ಹೊರನಡೆದಿರುವುದು ಚಿತ್ರರಂಗದಲ್ಲಿ ದೊಡ್ಡ ಸುದ್ದಿಯಾಗಿದೆ. ಅಕ್ಷಯ್ ಕುಮಾರ್ ಅವರು ಪರೇಶ್ ಅವರ ನಿರ್ಗಮನದ ಬಗ್ಗೆ ಪ್ರತಿಕ್ರಿಯಿಸಿದ್ದು, ಪರೇಶ್ ಅವರಿಲ್ಲದೆಯೂ ಚಿತ್ರ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ, ಅನೇಕರು ಅಕ್ಷಯ್ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.

‘ಪರೇಶ್ ರಾವಲ್ ಇಲ್ಲದೆಯೂ ಹೇರಾ ಫೇರಿ ಆಗುತ್ತೆ’; ಧಿಮಾಕಿನಿಂದ ಉತ್ತರಿಸಿದ ಅಕ್ಷಯ್ ಕುಮಾರ್
ಅಕ್ಷಯ್-ಪರೇಶ್
ರಾಜೇಶ್ ದುಗ್ಗುಮನೆ
|

Updated on: Jun 18, 2025 | 1:19 PM

Share

‘ಹೇರಾ ಫೇರಿ 3’  (Hera Pheri 3) ಚಿತ್ರದಿಂದ ಅಕ್ಷಯ್ ಕುಮಾರ್ ಹೊರ ನಡೆದಿದ್ದು ಎಲ್ಲರಿಗೂ ಶಾಕಿಂಗ್ ಎನಿಸಿದೆ. ಪರೇಶ್ ರಾವಲ್ ಅವರು ತಂಡಕ್ಕೆ ಈ ಬಗ್ಗೆ ಮಾಹಿತಿ ನೀಡದೆ ನೇರವಾಗಿ ಮಾಧ್ಯಮಗಳ ಎದುರು ಈ ವಿಚಾರ ರಿವೀಲ್ ಮಾಡಿದ್ದರು. ಇದು ಅಕ್ಷಯ್​ಗೆ ಮತ್ತಷ್ಟು ಬೇಸರ ಮೂಡಿಸಿತ್ತು. ಪರೇಶ್ ರಾವಲ್ ವಿರುದ್ಧ ಅಕ್ಷಯ್ ಕೇಸ್ ಕೂಡ ಹಾಕಿದ್ದಾರೆ. ಈ ಮಧ್ಯೆ ಪರೇಶ್ ಇಲ್ಲದೆಯೂ ‘ಹೇರಾ ಫೇರಿ 3’ ಸಿನಿಮಾ ಗೆಲ್ಲಬಹುದು ಎಂದಿದ್ದಾರೆ. ಅನೇಕರು ಇದನ್ನು ಧಿಮಾಕಿನ ಉತ್ತರ ಎಂದು ಹೇಳಿದ್ದಾರೆ.

‘ಹೇರಾ ಫೇರಿ 3’ ಚಿತ್ರಕ್ಕೆ ಈಗಾಗಲೇ ಸ್ಕ್ರಿಪ್ಟ್ ಕೆಲಸಗಳು ನಡೆದಿವೆ. ಇನ್ನೂ ಕೆಲವು ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆದಿದ್ದು, ಇದಕ್ಕಾಗಿ ದೊಡ್ಡ ಮೊತ್ತ ಖರ್ಚು ಮಾಡಲಾಗಿದೆ. ಈ ಸಂದರ್ಭದಲ್ಲಿ ಪರೇಶ್ ರಾವಲ್ ಹೊರ ನಡೆದಿದ್ದು, ತಂಡಕ್ಕೆ ಸಂಕಷ್ಟ ಉಂಟಾಗಿದೆ. ಆದರೆ, ಅವರಿಲ್ಲದೆಯೂ ಸಿನಿಮಾ ಗೆಲ್ಲ ಬಲ್ಲದು ಎಂಬ ನಂಬಿಕೆ ಅಕ್ಷಯ್ ಕುಮಾರ್ ಅವರದ್ದು.

‘ಏನೆಲ್ಲೆ ಆಗುತ್ತಿದೆಯೋ ಅದು ಎಲ್ಲರ ಕಣ್ಣೆದುರೇ ಸಂಭವಿಸುತ್ತಿದೆ. ಧನಾತ್ಮಕವಾಗಿ ಏನಾದರೂ ಸಂಭವಿಸಬಹುದು ಎಂದು ನಂಬಿದ್ದೇನೆ. ಎಲ್ಲವೂ ಸರಿಯಾಗುತ್ತದೆ ಎಂಬುದು ನನ್ನ ಭಾವನೆ. ಹಾಗೆ ಆಗಬೇಕು’ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ. ಅವರು ಪರೋಕ್ಷವಾಗಿ ಪರೇಶ್ ಇಲ್ಲದೆಯೂ ಸಿನಿಮಾ ಆಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ
Image
ಅಂಬಿ ಬೈಕ್ ಮೇಲೆ ಸುದೀಪ್; ಅಪರೂಪದ ಫೋಟೋ ಇಲ್ಲಿದೆ
Image
ಮುಚ್ಚುಮರೆ ಇಲ್ಲ; ಒಂದೇ ಕಾರಲ್ಲಿ ರಶ್ಮಿಕಾ-ವಿಜಯ್ ಜಾಲಿ ರೈಡ್
Image
ಕೇವಲ 25 ಲಕ್ಷ ರೂ. ಗಳಿಸಿದ ‘ಥಗ್ ಲೈಫ್; ಕರ್ನಾಟಕದಲ್ಲಿ ರಿಲೀಸ್ ಆದರೆ ನಷ್ಟ
Image
ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಧನರಾಜ್, ಪತ್ನಿ

‘ಹೇರಾ ಫೇರಿ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರು ರಾಜು ಪಾತ್ರ ಮಾಡಿದರೆ, ಸುನೀಲ್ ಶೆಟ್ಟಿ ಶ್ಯಾಮ್ ಪಾತ್ರ ಮಾಡಿದ್ದರು. ‘ಶ್ಯಾಮ್ ಹಾಗೂ ರಾಜು ಪಾತ್ರವಿಲ್ಲದಿದ್ದರೂ ಈ ಸಿನಿಮಾ ಆಗಬಹುದು. ಆದರೆ ಬಾಬುರಾವ್ ಪಾತ್ರವಿಲ್ಲದೆ ಈ ಸಿನಿಮಾ ಅಸಾಧ್ಯ’ ಎಂದು ಸುನೀಲ್ ಶೆಟ್ಟಿ ಹೇಳಿದ್ದರು. ಆದರೆ, ಅಕ್ಷಯ್ ಕುಮಾರ್ ಅವರು ಬೇರೆಯದೇ ರೀತಿಯ ನಂಬಿಕೆ ಹೊಂದಿದ್ದಾರೆ.

ಇದನ್ನೂ ಓದಿ: ‘ಅವರನ್ನು​​ ಮೂರ್ಖ ಎನ್ನಬೇಡಿ, ಒಳ್ಳೆಯ ಸ್ನೇಹಿತ’; ಪರೇಶ್ ಪರ ಅಕ್ಷಯ್ ಕುಮಾರ್ ಬ್ಯಾಟಿಂಗ್

ಅಕ್ಷಯ್ ಕುಮಾರ್ ಅವರ ಹೇಳಿಕೆಯನ್ನು ಅನೇಕರು ಟೀಕಿಸಿದ್ದಾರೆ. ‘ಹೇರಾ ಫೇರಿ’ ಸಿನಿಮಾದಲ್ಲಿ ಪರೇಶ್ ರಾವಲ್ ಇಲ್ಲದಿದ್ದರೆ ನಾವು ನೋಡೋದಿಲ್ಲ ಎಂದು ಅನೇಕರು ಹೇಳಿದ್ದಾರೆ. ಪರೇಶ್ ರಾವಲ್ ಬದಲು ಪಂಕಜ್ ತ್ರಿಪಾಠಿ ಇರಬೇಕಿತ್ತು ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!