AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ

ಅಕ್ಷಯ್​ ಕುಮಾರ್ ನಟನೆಯ ಸಾಲು ಸಾಲು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ‘ಪೂಜಾ ಎಂಟರ್​ಟೇನ್ಮೆಂಟ್​’ ಸಂಸ್ಥೆಗೆ ನೂರಾರು ಕೋಟಿ ರೂಪಾಯಿ ನಷ್ಟ ಆಗಿದೆ. ಈ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಅವರು ನಿರ್ಮಾಪಕರ ಬೆಂಬಲಕ್ಕೆ ನಿಂತಿದ್ದಾರೆ. ಸಾಲದ ಸುಳಿಗೆ ಸಿಲುಕಿರುವ ವಶು ಭಗ್ನಾನಿ ಮತ್ತು ಜಾಕಿ ಭಗ್ನಾನಿ ಅವರನ್ನು ಅಕ್ಷಯ್​ ಕುಮಾರ್ ಭೇಟಿ ಮಾಡಿದ್ದಾರೆ.

ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ
ಜಾಕಿ ಭಗ್ನಾನಿ, ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jul 01, 2024 | 10:06 PM

Share

ನಟ ಅಕ್ಷಯ್​ ಕುಮಾರ್​ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋಲುತ್ತಿವೆ. ಅವರ ಸಿನಿಮಾಗೆ ಬಂಡವಾಳ ಹೂಡಿದ ನಿರ್ಮಾಪಕರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾಗೆ ಬಾಲಿವುಡ್​ ನಿರ್ಮಾಪಕರಾದ ವಶು ಭಗ್ನಾನಿ ಹಾಗೂ ಜಾಕಿ ಭಗ್ನಾನಿ ಅವರು ಬಂಡವಾಳ ಹೂಡಿದ್ದರು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಆ ಸಿನಿಮಾ ಮುಗ್ಗರಿಸಿತು. ಅದರ ಪರಿಣಾಮವಾಗಿ ನಿರ್ಮಾಪಕರಿಗೆ ಭಾರಿ ನಷ್ಟ ಆಯಿತು. ಈಗ ಅವರ ಸಹಾಯಕ್ಕೆ ಅಕ್ಷಯ್​ ಕುಮಾರ್​ ನಿಂತಿದ್ದಾರೆ. ‘ನನ್ನ ಸಂಭಾವನೆಯನ್ನು ತಡವಾಗಿ ಕೊಡಿ ಪರವಾಗಿಲ್ಲ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಅಂದಾಜು 300 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ನಿರ್ಮಾಣ ಆಗಿತ್ತು. ಆದರೆ ಗಲ್ಲಾಪಟ್ಟೆಗೆಯಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್​ ಆಗಲಿಲ್ಲ. ಆದ್ದರಿಂದ ಈ ಸಿನಿಮಾಗೆ ಕೆಲಸ ಮಾಡಿದ ಅನೇಕರಿಗೆ ನಿರ್ಮಾಪಕರು ಸಂಬಳ ನೀಡಿಲ್ಲ. ಇದು ದೊಡ್ಡ ವಿವಾದ ಸೃಷ್ಟಿ ಮಾಡಿತ್ತು. ಈಗ ಅಕ್ಷಯ್​ ಕುಮಾರ್​ ಅವರು ನಿರ್ಮಾಪಕರನ್ನು ಭೇಟಿ ಆಗಿದ್ದಾರೆ. ಆ ಬಗ್ಗೆ ಜಾಕಿ ಭಗ್ನಾನಿ ಮಾತನಾಡಿದ್ದಾರೆ.

‘ಈ ವಿಚಾರ ಮಾತನಾಡಲು ಅಕ್ಷಯ್​ ಸರ್​ ಇತ್ತೀಚೆಗೆ ಭೇಟಿ ಆಗಿದ್ದರು. ಚಿತ್ರತಂಡದವರಿಗೆ ಸಹಾಯ ಮಾಡಲು ಅವರು ಮುಂದೆ ಬಂದಿದ್ದಾರೆ. ಸಿನಿಮಾಗಾಗಿ ಕೆಲಸ ಮಾಡಿದ ಎಲ್ಲರಿಗೂ ಸಂಬಳ ನೀಡುವ ತನಕ ತಮ್ಮ ಸಂಭಾವನೆಯನ್ನು ನೀಡುವುದು ಬೇಡ ಅಂತ ಅವರು ಹೇಳಿದ್ದಾರೆ. ನಮ್ಮ ಸಂದರ್ಭವನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಅಕ್ಷಯ್​ ಕುಮಾರ್ ಅವರಿಗೆ ಧನ್ಯವಾದಗಳು’ ಎಂದು ಜಾಕಿ ಭಗ್ನಾನಿ ಹೇಳಿದ್ದಾರೆ.

ಇದನ್ನೂ ಓದಿ: ಸ್ಫೂರ್ತಿದಾಯಕ ಕಥೆ ನೀಡಿದ್ದಕ್ಕೆ ಕನ್ನಡಿಗ ಕ್ಯಾಪ್ಟನ್​ ಗೋಪಿನಾಥ್​ಗೆ ಅಕ್ಷಯ್​ ಕುಮಾರ್​ ಧನ್ಯವಾದ

‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಮಾತ್ರವಲ್ಲದೇ, ಅಕ್ಷಯ್​ ಕುಮಾರ್​ ನಟನೆಯ ‘ಮಿಷನ್​ ರಾಣಿಗಂಜ್​’, ‘ಕಟ್​ಪುಟ್ಲಿ’, ‘ಬೆಲ್​ ಬಾಟಂ’ ಸಿನಿಮಾಗಳಿಗೂ ವಶು ಭಗ್ನಾನಿ, ಜಾಕಿ ಭಗ್ನಾನಿ ಅವರು ಹಣ ಹೂಡಿದ್ದರು. ಆ ಸಿನಿಮಾಗಳಿಂದಲೂ ಅವರಿಗೆ ನಷ್ಟ ಆಯಿತು. ಇದರಿಂದಾಗಿ ಅವರು ಮುಂಬೈನಲ್ಲಿ ಇರುವ ಆಸ್ತಿ ಮಾರಾಟ ಮಾಡಿಕೊಂಡರು. ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರನ್ನು ಮನೆಗೆ ಕಳಿಸಿದರು. ಒಟ್ಟಿನಲ್ಲಿ ಅವರು ಭಾರಿ ನಷ್ಟ ಅನುಭವಿಸಿದ್ದಾರೆ. ಅವರ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ಅಕ್ಷಯ್​ ಕುಮಾರ್​ ಅವರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?