AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ

ಅಕ್ಷಯ್​ ಕುಮಾರ್ ನಟನೆಯ ಸಾಲು ಸಾಲು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ‘ಪೂಜಾ ಎಂಟರ್​ಟೇನ್ಮೆಂಟ್​’ ಸಂಸ್ಥೆಗೆ ನೂರಾರು ಕೋಟಿ ರೂಪಾಯಿ ನಷ್ಟ ಆಗಿದೆ. ಈ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಅವರು ನಿರ್ಮಾಪಕರ ಬೆಂಬಲಕ್ಕೆ ನಿಂತಿದ್ದಾರೆ. ಸಾಲದ ಸುಳಿಗೆ ಸಿಲುಕಿರುವ ವಶು ಭಗ್ನಾನಿ ಮತ್ತು ಜಾಕಿ ಭಗ್ನಾನಿ ಅವರನ್ನು ಅಕ್ಷಯ್​ ಕುಮಾರ್ ಭೇಟಿ ಮಾಡಿದ್ದಾರೆ.

ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ
ಜಾಕಿ ಭಗ್ನಾನಿ, ಅಕ್ಷಯ್​ ಕುಮಾರ್​
Follow us
ಮದನ್​ ಕುಮಾರ್​
|

Updated on: Jul 01, 2024 | 10:06 PM

ನಟ ಅಕ್ಷಯ್​ ಕುಮಾರ್​ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋಲುತ್ತಿವೆ. ಅವರ ಸಿನಿಮಾಗೆ ಬಂಡವಾಳ ಹೂಡಿದ ನಿರ್ಮಾಪಕರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾಗೆ ಬಾಲಿವುಡ್​ ನಿರ್ಮಾಪಕರಾದ ವಶು ಭಗ್ನಾನಿ ಹಾಗೂ ಜಾಕಿ ಭಗ್ನಾನಿ ಅವರು ಬಂಡವಾಳ ಹೂಡಿದ್ದರು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಆ ಸಿನಿಮಾ ಮುಗ್ಗರಿಸಿತು. ಅದರ ಪರಿಣಾಮವಾಗಿ ನಿರ್ಮಾಪಕರಿಗೆ ಭಾರಿ ನಷ್ಟ ಆಯಿತು. ಈಗ ಅವರ ಸಹಾಯಕ್ಕೆ ಅಕ್ಷಯ್​ ಕುಮಾರ್​ ನಿಂತಿದ್ದಾರೆ. ‘ನನ್ನ ಸಂಭಾವನೆಯನ್ನು ತಡವಾಗಿ ಕೊಡಿ ಪರವಾಗಿಲ್ಲ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಅಂದಾಜು 300 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ನಿರ್ಮಾಣ ಆಗಿತ್ತು. ಆದರೆ ಗಲ್ಲಾಪಟ್ಟೆಗೆಯಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್​ ಆಗಲಿಲ್ಲ. ಆದ್ದರಿಂದ ಈ ಸಿನಿಮಾಗೆ ಕೆಲಸ ಮಾಡಿದ ಅನೇಕರಿಗೆ ನಿರ್ಮಾಪಕರು ಸಂಬಳ ನೀಡಿಲ್ಲ. ಇದು ದೊಡ್ಡ ವಿವಾದ ಸೃಷ್ಟಿ ಮಾಡಿತ್ತು. ಈಗ ಅಕ್ಷಯ್​ ಕುಮಾರ್​ ಅವರು ನಿರ್ಮಾಪಕರನ್ನು ಭೇಟಿ ಆಗಿದ್ದಾರೆ. ಆ ಬಗ್ಗೆ ಜಾಕಿ ಭಗ್ನಾನಿ ಮಾತನಾಡಿದ್ದಾರೆ.

‘ಈ ವಿಚಾರ ಮಾತನಾಡಲು ಅಕ್ಷಯ್​ ಸರ್​ ಇತ್ತೀಚೆಗೆ ಭೇಟಿ ಆಗಿದ್ದರು. ಚಿತ್ರತಂಡದವರಿಗೆ ಸಹಾಯ ಮಾಡಲು ಅವರು ಮುಂದೆ ಬಂದಿದ್ದಾರೆ. ಸಿನಿಮಾಗಾಗಿ ಕೆಲಸ ಮಾಡಿದ ಎಲ್ಲರಿಗೂ ಸಂಬಳ ನೀಡುವ ತನಕ ತಮ್ಮ ಸಂಭಾವನೆಯನ್ನು ನೀಡುವುದು ಬೇಡ ಅಂತ ಅವರು ಹೇಳಿದ್ದಾರೆ. ನಮ್ಮ ಸಂದರ್ಭವನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಅಕ್ಷಯ್​ ಕುಮಾರ್ ಅವರಿಗೆ ಧನ್ಯವಾದಗಳು’ ಎಂದು ಜಾಕಿ ಭಗ್ನಾನಿ ಹೇಳಿದ್ದಾರೆ.

ಇದನ್ನೂ ಓದಿ: ಸ್ಫೂರ್ತಿದಾಯಕ ಕಥೆ ನೀಡಿದ್ದಕ್ಕೆ ಕನ್ನಡಿಗ ಕ್ಯಾಪ್ಟನ್​ ಗೋಪಿನಾಥ್​ಗೆ ಅಕ್ಷಯ್​ ಕುಮಾರ್​ ಧನ್ಯವಾದ

‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಮಾತ್ರವಲ್ಲದೇ, ಅಕ್ಷಯ್​ ಕುಮಾರ್​ ನಟನೆಯ ‘ಮಿಷನ್​ ರಾಣಿಗಂಜ್​’, ‘ಕಟ್​ಪುಟ್ಲಿ’, ‘ಬೆಲ್​ ಬಾಟಂ’ ಸಿನಿಮಾಗಳಿಗೂ ವಶು ಭಗ್ನಾನಿ, ಜಾಕಿ ಭಗ್ನಾನಿ ಅವರು ಹಣ ಹೂಡಿದ್ದರು. ಆ ಸಿನಿಮಾಗಳಿಂದಲೂ ಅವರಿಗೆ ನಷ್ಟ ಆಯಿತು. ಇದರಿಂದಾಗಿ ಅವರು ಮುಂಬೈನಲ್ಲಿ ಇರುವ ಆಸ್ತಿ ಮಾರಾಟ ಮಾಡಿಕೊಂಡರು. ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರನ್ನು ಮನೆಗೆ ಕಳಿಸಿದರು. ಒಟ್ಟಿನಲ್ಲಿ ಅವರು ಭಾರಿ ನಷ್ಟ ಅನುಭವಿಸಿದ್ದಾರೆ. ಅವರ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ಅಕ್ಷಯ್​ ಕುಮಾರ್​ ಅವರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ
ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ