ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ

ಅಕ್ಷಯ್​ ಕುಮಾರ್ ನಟನೆಯ ಸಾಲು ಸಾಲು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ‘ಪೂಜಾ ಎಂಟರ್​ಟೇನ್ಮೆಂಟ್​’ ಸಂಸ್ಥೆಗೆ ನೂರಾರು ಕೋಟಿ ರೂಪಾಯಿ ನಷ್ಟ ಆಗಿದೆ. ಈ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಅವರು ನಿರ್ಮಾಪಕರ ಬೆಂಬಲಕ್ಕೆ ನಿಂತಿದ್ದಾರೆ. ಸಾಲದ ಸುಳಿಗೆ ಸಿಲುಕಿರುವ ವಶು ಭಗ್ನಾನಿ ಮತ್ತು ಜಾಕಿ ಭಗ್ನಾನಿ ಅವರನ್ನು ಅಕ್ಷಯ್​ ಕುಮಾರ್ ಭೇಟಿ ಮಾಡಿದ್ದಾರೆ.

ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ
ಜಾಕಿ ಭಗ್ನಾನಿ, ಅಕ್ಷಯ್​ ಕುಮಾರ್​
Follow us
|

Updated on: Jul 01, 2024 | 10:06 PM

ನಟ ಅಕ್ಷಯ್​ ಕುಮಾರ್​ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋಲುತ್ತಿವೆ. ಅವರ ಸಿನಿಮಾಗೆ ಬಂಡವಾಳ ಹೂಡಿದ ನಿರ್ಮಾಪಕರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾಗೆ ಬಾಲಿವುಡ್​ ನಿರ್ಮಾಪಕರಾದ ವಶು ಭಗ್ನಾನಿ ಹಾಗೂ ಜಾಕಿ ಭಗ್ನಾನಿ ಅವರು ಬಂಡವಾಳ ಹೂಡಿದ್ದರು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಆ ಸಿನಿಮಾ ಮುಗ್ಗರಿಸಿತು. ಅದರ ಪರಿಣಾಮವಾಗಿ ನಿರ್ಮಾಪಕರಿಗೆ ಭಾರಿ ನಷ್ಟ ಆಯಿತು. ಈಗ ಅವರ ಸಹಾಯಕ್ಕೆ ಅಕ್ಷಯ್​ ಕುಮಾರ್​ ನಿಂತಿದ್ದಾರೆ. ‘ನನ್ನ ಸಂಭಾವನೆಯನ್ನು ತಡವಾಗಿ ಕೊಡಿ ಪರವಾಗಿಲ್ಲ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಅಂದಾಜು 300 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ನಿರ್ಮಾಣ ಆಗಿತ್ತು. ಆದರೆ ಗಲ್ಲಾಪಟ್ಟೆಗೆಯಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್​ ಆಗಲಿಲ್ಲ. ಆದ್ದರಿಂದ ಈ ಸಿನಿಮಾಗೆ ಕೆಲಸ ಮಾಡಿದ ಅನೇಕರಿಗೆ ನಿರ್ಮಾಪಕರು ಸಂಬಳ ನೀಡಿಲ್ಲ. ಇದು ದೊಡ್ಡ ವಿವಾದ ಸೃಷ್ಟಿ ಮಾಡಿತ್ತು. ಈಗ ಅಕ್ಷಯ್​ ಕುಮಾರ್​ ಅವರು ನಿರ್ಮಾಪಕರನ್ನು ಭೇಟಿ ಆಗಿದ್ದಾರೆ. ಆ ಬಗ್ಗೆ ಜಾಕಿ ಭಗ್ನಾನಿ ಮಾತನಾಡಿದ್ದಾರೆ.

‘ಈ ವಿಚಾರ ಮಾತನಾಡಲು ಅಕ್ಷಯ್​ ಸರ್​ ಇತ್ತೀಚೆಗೆ ಭೇಟಿ ಆಗಿದ್ದರು. ಚಿತ್ರತಂಡದವರಿಗೆ ಸಹಾಯ ಮಾಡಲು ಅವರು ಮುಂದೆ ಬಂದಿದ್ದಾರೆ. ಸಿನಿಮಾಗಾಗಿ ಕೆಲಸ ಮಾಡಿದ ಎಲ್ಲರಿಗೂ ಸಂಬಳ ನೀಡುವ ತನಕ ತಮ್ಮ ಸಂಭಾವನೆಯನ್ನು ನೀಡುವುದು ಬೇಡ ಅಂತ ಅವರು ಹೇಳಿದ್ದಾರೆ. ನಮ್ಮ ಸಂದರ್ಭವನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಅಕ್ಷಯ್​ ಕುಮಾರ್ ಅವರಿಗೆ ಧನ್ಯವಾದಗಳು’ ಎಂದು ಜಾಕಿ ಭಗ್ನಾನಿ ಹೇಳಿದ್ದಾರೆ.

ಇದನ್ನೂ ಓದಿ: ಸ್ಫೂರ್ತಿದಾಯಕ ಕಥೆ ನೀಡಿದ್ದಕ್ಕೆ ಕನ್ನಡಿಗ ಕ್ಯಾಪ್ಟನ್​ ಗೋಪಿನಾಥ್​ಗೆ ಅಕ್ಷಯ್​ ಕುಮಾರ್​ ಧನ್ಯವಾದ

‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಮಾತ್ರವಲ್ಲದೇ, ಅಕ್ಷಯ್​ ಕುಮಾರ್​ ನಟನೆಯ ‘ಮಿಷನ್​ ರಾಣಿಗಂಜ್​’, ‘ಕಟ್​ಪುಟ್ಲಿ’, ‘ಬೆಲ್​ ಬಾಟಂ’ ಸಿನಿಮಾಗಳಿಗೂ ವಶು ಭಗ್ನಾನಿ, ಜಾಕಿ ಭಗ್ನಾನಿ ಅವರು ಹಣ ಹೂಡಿದ್ದರು. ಆ ಸಿನಿಮಾಗಳಿಂದಲೂ ಅವರಿಗೆ ನಷ್ಟ ಆಯಿತು. ಇದರಿಂದಾಗಿ ಅವರು ಮುಂಬೈನಲ್ಲಿ ಇರುವ ಆಸ್ತಿ ಮಾರಾಟ ಮಾಡಿಕೊಂಡರು. ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರನ್ನು ಮನೆಗೆ ಕಳಿಸಿದರು. ಒಟ್ಟಿನಲ್ಲಿ ಅವರು ಭಾರಿ ನಷ್ಟ ಅನುಭವಿಸಿದ್ದಾರೆ. ಅವರ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ಅಕ್ಷಯ್​ ಕುಮಾರ್​ ಅವರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!