AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ

ಅಕ್ಷಯ್​ ಕುಮಾರ್ ನಟನೆಯ ಸಾಲು ಸಾಲು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ‘ಪೂಜಾ ಎಂಟರ್​ಟೇನ್ಮೆಂಟ್​’ ಸಂಸ್ಥೆಗೆ ನೂರಾರು ಕೋಟಿ ರೂಪಾಯಿ ನಷ್ಟ ಆಗಿದೆ. ಈ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಅವರು ನಿರ್ಮಾಪಕರ ಬೆಂಬಲಕ್ಕೆ ನಿಂತಿದ್ದಾರೆ. ಸಾಲದ ಸುಳಿಗೆ ಸಿಲುಕಿರುವ ವಶು ಭಗ್ನಾನಿ ಮತ್ತು ಜಾಕಿ ಭಗ್ನಾನಿ ಅವರನ್ನು ಅಕ್ಷಯ್​ ಕುಮಾರ್ ಭೇಟಿ ಮಾಡಿದ್ದಾರೆ.

ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ
ಜಾಕಿ ಭಗ್ನಾನಿ, ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jul 01, 2024 | 10:06 PM

Share

ನಟ ಅಕ್ಷಯ್​ ಕುಮಾರ್​ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋಲುತ್ತಿವೆ. ಅವರ ಸಿನಿಮಾಗೆ ಬಂಡವಾಳ ಹೂಡಿದ ನಿರ್ಮಾಪಕರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾಗೆ ಬಾಲಿವುಡ್​ ನಿರ್ಮಾಪಕರಾದ ವಶು ಭಗ್ನಾನಿ ಹಾಗೂ ಜಾಕಿ ಭಗ್ನಾನಿ ಅವರು ಬಂಡವಾಳ ಹೂಡಿದ್ದರು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಆ ಸಿನಿಮಾ ಮುಗ್ಗರಿಸಿತು. ಅದರ ಪರಿಣಾಮವಾಗಿ ನಿರ್ಮಾಪಕರಿಗೆ ಭಾರಿ ನಷ್ಟ ಆಯಿತು. ಈಗ ಅವರ ಸಹಾಯಕ್ಕೆ ಅಕ್ಷಯ್​ ಕುಮಾರ್​ ನಿಂತಿದ್ದಾರೆ. ‘ನನ್ನ ಸಂಭಾವನೆಯನ್ನು ತಡವಾಗಿ ಕೊಡಿ ಪರವಾಗಿಲ್ಲ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಅಂದಾಜು 300 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ನಿರ್ಮಾಣ ಆಗಿತ್ತು. ಆದರೆ ಗಲ್ಲಾಪಟ್ಟೆಗೆಯಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್​ ಆಗಲಿಲ್ಲ. ಆದ್ದರಿಂದ ಈ ಸಿನಿಮಾಗೆ ಕೆಲಸ ಮಾಡಿದ ಅನೇಕರಿಗೆ ನಿರ್ಮಾಪಕರು ಸಂಬಳ ನೀಡಿಲ್ಲ. ಇದು ದೊಡ್ಡ ವಿವಾದ ಸೃಷ್ಟಿ ಮಾಡಿತ್ತು. ಈಗ ಅಕ್ಷಯ್​ ಕುಮಾರ್​ ಅವರು ನಿರ್ಮಾಪಕರನ್ನು ಭೇಟಿ ಆಗಿದ್ದಾರೆ. ಆ ಬಗ್ಗೆ ಜಾಕಿ ಭಗ್ನಾನಿ ಮಾತನಾಡಿದ್ದಾರೆ.

‘ಈ ವಿಚಾರ ಮಾತನಾಡಲು ಅಕ್ಷಯ್​ ಸರ್​ ಇತ್ತೀಚೆಗೆ ಭೇಟಿ ಆಗಿದ್ದರು. ಚಿತ್ರತಂಡದವರಿಗೆ ಸಹಾಯ ಮಾಡಲು ಅವರು ಮುಂದೆ ಬಂದಿದ್ದಾರೆ. ಸಿನಿಮಾಗಾಗಿ ಕೆಲಸ ಮಾಡಿದ ಎಲ್ಲರಿಗೂ ಸಂಬಳ ನೀಡುವ ತನಕ ತಮ್ಮ ಸಂಭಾವನೆಯನ್ನು ನೀಡುವುದು ಬೇಡ ಅಂತ ಅವರು ಹೇಳಿದ್ದಾರೆ. ನಮ್ಮ ಸಂದರ್ಭವನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಅಕ್ಷಯ್​ ಕುಮಾರ್ ಅವರಿಗೆ ಧನ್ಯವಾದಗಳು’ ಎಂದು ಜಾಕಿ ಭಗ್ನಾನಿ ಹೇಳಿದ್ದಾರೆ.

ಇದನ್ನೂ ಓದಿ: ಸ್ಫೂರ್ತಿದಾಯಕ ಕಥೆ ನೀಡಿದ್ದಕ್ಕೆ ಕನ್ನಡಿಗ ಕ್ಯಾಪ್ಟನ್​ ಗೋಪಿನಾಥ್​ಗೆ ಅಕ್ಷಯ್​ ಕುಮಾರ್​ ಧನ್ಯವಾದ

‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಮಾತ್ರವಲ್ಲದೇ, ಅಕ್ಷಯ್​ ಕುಮಾರ್​ ನಟನೆಯ ‘ಮಿಷನ್​ ರಾಣಿಗಂಜ್​’, ‘ಕಟ್​ಪುಟ್ಲಿ’, ‘ಬೆಲ್​ ಬಾಟಂ’ ಸಿನಿಮಾಗಳಿಗೂ ವಶು ಭಗ್ನಾನಿ, ಜಾಕಿ ಭಗ್ನಾನಿ ಅವರು ಹಣ ಹೂಡಿದ್ದರು. ಆ ಸಿನಿಮಾಗಳಿಂದಲೂ ಅವರಿಗೆ ನಷ್ಟ ಆಯಿತು. ಇದರಿಂದಾಗಿ ಅವರು ಮುಂಬೈನಲ್ಲಿ ಇರುವ ಆಸ್ತಿ ಮಾರಾಟ ಮಾಡಿಕೊಂಡರು. ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರನ್ನು ಮನೆಗೆ ಕಳಿಸಿದರು. ಒಟ್ಟಿನಲ್ಲಿ ಅವರು ಭಾರಿ ನಷ್ಟ ಅನುಭವಿಸಿದ್ದಾರೆ. ಅವರ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ಅಕ್ಷಯ್​ ಕುಮಾರ್​ ಅವರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ