AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಅಕ್ಷಯ್​ ಕುಮಾರ್​ ನಕಲಿ ಮೀಸೆಯೇ ‘ಸಾಮ್ರಾಟ್​ ಪೃಥ್ವಿರಾಜ್​’ ಸೋಲಿಗೆ ಕಾರಣ? ಹೊಸ ಆರೋಪ

Samrat Prithviraj: ಗಡಿಬಿಡಿಯಲ್ಲಿ ಸಿನಿಮಾ ಮಾಡುವುದು ಅಕ್ಷಯ್​ ಕುಮಾರ್ ಅವರ ಜಾಯಮಾನ. ಈ ರೀತಿ ಮಾಡಿದ್ದರಿಂದಲೇ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾದ ಗುಣಮಟ್ಟ ಕುಸಿಯಿತು ಎಂದು ಆರೋಪಿಸಲಾಗುತ್ತಿದೆ.

Akshay Kumar: ಅಕ್ಷಯ್​ ಕುಮಾರ್​ ನಕಲಿ ಮೀಸೆಯೇ ‘ಸಾಮ್ರಾಟ್​ ಪೃಥ್ವಿರಾಜ್​’ ಸೋಲಿಗೆ ಕಾರಣ? ಹೊಸ ಆರೋಪ
ಅಕ್ಷಯ್ ಕುಮಾರ್
TV9 Web
| Edited By: |

Updated on: Jun 24, 2022 | 12:37 PM

Share

ಬಾಲಿವುಡ್​ ನಟ ಅಕ್ಷಯ್​ ಕುಮಾರ್ (Akshay Kumar)​ ಅವರ ಸಿನಿಮಾ ಮೇಲೆ ಬಂಡವಾಳ ಹೂಡಿದರೆ ಖಂಡಿತಾ ನಷ್ಟ ಆಗುವುದಿಲ್ಲ ಎಂಬ ಕಾಲ ಒಂದಿತ್ತು. ಆದರೆ ಇತ್ತೀಚೆಗೆ ಆ ಮಾತು ಸುಳ್ಳಾಗುತ್ತಿದೆ. ‘ಬಚ್ಚನ್​ ಪಾಂಡೆ’, ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಿಲ್ಲ. ಈ ಸಿನಿಮಾಗಳಿಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಿದ ನಿರ್ಮಾಪಕರಿಗೆ ನಷ್ಟ ಆಗಿದೆ. ಹಾಗಾದರೆ ಈ ಸೋಲಿಗೆ ಕಾರಣ ಯಾರು? ಈ ಬಗ್ಗೆ ಬಾಲಿವುಡ್​  (Bollywood) ಅಂಗಳದಲ್ಲಿ ಚರ್ಚೆ ನಡೆಯುತ್ತಿದೆ. ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಹೊರಿಸುತ್ತ ಓಡಾಡುತ್ತಿರುವುದು ವರದಿ ಆಗಿದೆ. ಎಷ್ಟರಮಟ್ಟಿಗೆ ಎಂದರೆ, ಅಕ್ಷಯ್​ ಕುಮಾರ್​ ಅವರ ನಕಲಿ ಮೀಸೆಯೇ ‘ಸಾಮ್ರಾಟ್​ ಪೃಥ್ವಿರಾಜ್​’ (Samrat Prithviraj) ಸಿನಿಮಾದ ಸೋಲಿಗೆ ಕಾರಣ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲ, ಅಕ್ಷಯ್​ ಕುಮಾರ್​ ಮಾಡಿದ ಕೆಲವು ತಪ್ಪುಗಳನ್ನು ಕೂಡ ಎತ್ತಿ ಹಿಡಿಯಲಾಗುತ್ತಿದೆ.

‘ಸಾಮ್ರಾಟ್​ ಪೃಥ್ವಿರಾಜ್​’ ಒಂದು ಐತಿಹಾಸಿಕ ಕಥಾಹಂದರದ ಸಿನಿಮಾ. ಇಂಥ ಸಿನಿಮಾ ಮಾಡುವಾಗ ಹೆಚ್ಚಿನ ಸಮಯ ಬೇಕಾಗುತ್ತದೆ. ಆದರೆ ಅಷ್ಟು ಸಮಯವನ್ನು ನೀಡಲು ಅಕ್ಷಯ್​ ಕುಮಾರ್​ ಸಿದ್ಧರಿರಲಿಲ್ಲ. ಏಕಕಾಲಕ್ಕೆ ಅವರು ಬೇರೆ ಬೇರೆ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಇದ್ದದ್ದರಿಂದ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಕ್ಕೆ ಹೆಚ್ಚು ಸಮಯ ನೀಡಿಲ್ಲ ಎಂದು ಆರೋಪಿಸಲಾಗುತ್ತಿದೆ. ಪೃಥ್ವಿರಾಜ್​ ಪಾತ್ರಕ್ಕಾಗಿ ಅವರು ಅಸಲಿ ಮೀಸೆ ಬಿಡಲು ಕೂಡ ಸಿದ್ಧರಿರಲಿಲ್ಲ. ನಕಲಿ ಮೀಸೆ ಅಂಟಿಸಿಕೊಂಡು ಶೂಟಿಂಗ್​ ಮಾಡಿದರು. ಇದರಿಂದ ಸಿನಿಮಾದ ದೃಶ್ಯಗಳು ನ್ಯಾಚುರಲ್​ ಆಗಿ ಮೂಡಿಬಂದಿಲ್ಲ ಎಂದು ಚಿತ್ರತಂಡದವರೇ ಆರೋಪಿಸಿದ್ದಾರೆ ಎಂದು ಕೆಲವೆಡೆ ವರದಿ ಪ್ರಕಟ ಆಗಿದೆ.

ಗಡಿಬಿಡಿಯಲ್ಲಿ ಸಿನಿಮಾ ಮಾಡುವುದು ಅಕ್ಷಯ್​ ಕುಮಾರ್ ಅವರ ಜಾಯಮಾನ. ಆದರೆ ಈ ರೀತಿ ಮಾಡುವುದರಿಂದ ಸಿನಿಮಾದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಕೆಲವೇ ದಿನಗಳ ಹಿಂದೆ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರದ ಒಂದು ಪೋಸ್ಟರ್​ ಅನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗಿತ್ತು. ಇನ್ನು, ಇತ್ತೀಚಿನ ದಿನಗಳಲ್ಲಿ ಅಕ್ಷಯ್​ ಕುಮಾರ್​ ಅವರು ರಿಯಲ್​ ಲೈಫ್​ನಲ್ಲಿ ಮಾಡಿಕೊಂಡ ಕೆಲವು ವಿವಾದಗಳು ಕೂಡ ಈ ಸಿನಿಮಾದ ಸೋಲಿಗೆ ಕಾರಣ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ವಿಮಲ್​ ಜಾಹೀರಾತಿನಲ್ಲಿ ನಟಿಸಿದ ಅಕ್ಷಯ್​ ಕುಮಾರ್​ಗೆ ಜನರಿಂದ ಭಾರಿ ವಿರೋಧ; ಕ್ಷಮೆ ಕೇಳಿ ಹಿಂದೆ ಸರಿದ ನಟ
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

ಗುಟ್ಕಾ ಜಾಹೀರಾತಿನಲ್ಲಿ ಅಕ್ಷಯ್​ ಕುಮಾರ್ ನಟಿಸಿದ್ದರಿಂದ ಅನೇಕರ ಮನಸ್ಸಿಗೆ ಬೇಸರ ಆಯಿತು. ದೇವರಿಗೆ ಅಭಿಷೇಕ ಮಾಡಲು ಹಾಲು ಬಳಸಬೇಡಿ ಎಂದು ಅವರು ಹೇಳಿಕೆ ನೀಡಿದ್ದಕ್ಕೂ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು. ಹೀಗೆ ಸಾರ್ವಜನಿಕ ಬದುಕಿನಲ್ಲಿ ಅಕ್ಷಯ್​ ಕುಮಾರ್​ ಅವರು ಒಂದು ವರ್ಗದ ಜನರಿಂದ ವಿರೋಧ ಕಟ್ಟಿಕೊಂಡಿದ್ದು ಕೂಡ ‘ಸಾಮ್ರಾಟ್​ ಪೃಥ್ವಿರಾಜ್​’ ಸೋಲಿಗೆ ಕಾರಣ ಆಗಿದೆ ಎಂದು ಕೆಲವರು ವಿಶ್ಲೇಷಿಸುತ್ತಿದ್ದಾರೆ.

ಇದನ್ನೂ ಓದಿ: ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?

Akshay Kumar: ‘ಗುಟ್ಕಾ ತಿಂದರೂ ಅಕ್ಷಯ್​ ಕುಮಾರ್​ ಇಷ್ಟೊಂದು ಫಿಟ್​’: ಲೇವಡಿ ಮಾಡಿದ ನೆಟ್ಟಿಗರು

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ