AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್ ಘಟನೆ ಬಗ್ಗೆ ಅಕ್ಷಯ್ ಕುಮಾರ್ ಮಾತಾಡುವಾಗ ಅಶ್ಲೀಲ ಪದ ಬಳಸಿದ ಪ್ರೇಕ್ಷಕರು; ವಿಡಿಯೋ ವೈರಲ್

‘ಕೇಸರಿ: ಚಾಪ್ಟರ್ 2’ ಸಿನಿಮಾ ಪ್ರದರ್ಶನ ಆಗುತ್ತಿರುವ ಚಿತ್ರಮಂದಿರಕ್ಕೆ ಅಕ್ಷಯ್ ಕುಮಾರ್ ಭೇಟಿ ನೀಡಿದ್ದಾರೆ. ಅಲ್ಲಿ ನೆರೆದಿದ್ದ ಪ್ರೇಕ್ಷಕರನ್ನು ಉದ್ದೇಶಿಸಿ ಅಕ್ಷಯ್ ಕುಮಾರ್ ಮಾತನಾಡುವಾಗ ಈ ಘಟನೆ ನಡೆದಿದೆ. ಸಿನಿಮಾದಲ್ಲಿ ಬಳಸಿದ ಒಂದು ಅಶ್ಲೀಲ ಪದವನ್ನೇ ಮತ್ತೆ ಪ್ರಸ್ತಾಪಿಸುವ ಮೂಲಕ ಪಹಲ್ಗಾಮ್ ಉಗ್ರರ ದಾಳಿಯನ್ನು ಅವರು ಖಂಡಿಸಿದ್ದಾರೆ.

ಪಹಲ್ಗಾಮ್ ಘಟನೆ ಬಗ್ಗೆ ಅಕ್ಷಯ್ ಕುಮಾರ್ ಮಾತಾಡುವಾಗ ಅಶ್ಲೀಲ ಪದ ಬಳಸಿದ ಪ್ರೇಕ್ಷಕರು; ವಿಡಿಯೋ ವೈರಲ್
Akshay Kumar
ಮದನ್​ ಕುಮಾರ್​
|

Updated on: Apr 27, 2025 | 9:40 AM

Share

ನಟ ಅಕ್ಷಯ್ ಕುಮಾರ್ (Akshay Kumar) ಅವರು ಅನೇಕ ದೇಶಭಕ್ತಿ ಸಿನಿಮಾಗಳನ್ನು ಮಾಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿರುವ ‘ಕೇಸರಿ: ಚಾಪ್ಟರ್ 2’ (Kesari: Chapter 2) ಸಿನಿಮಾದಲ್ಲಿ ಕೂಡ ಅಂಥದ್ದೇ ಕಥೆ ಇದೆ. ಜಲಿಯನ್​ವಾಲಾ ಬಾಗ್ ಹತ್ಯಾಕಾಂಡದ ಬಗ್ಗೆ ಈ ಸಿನಿಮಾ ಮಾಡಲಾಗಿದೆ. ಬೇಸರದ ಸಂಗತಿ ಏನೆಂದರೆ, ಈ ಸಿನಿಮಾ ಬಿಡುಗಡೆಯಾದ ಸಂದರ್ಭದಲ್ಲೇ ಪಹಲ್ಗಾಮ್ (Pahalgam) ಹತ್ಯಾಕಾಂಡ ನಡೆದಿದೆ. ಇತ್ತೀಚೆಗೆ ಅಕ್ಷಯ್​ ಕುಮಾರ್ ಅವರು ಪ್ರೇಕ್ಷಕರ ಜೊತೆ ಮಾತನಾಡುವಾಗ ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ಪ್ರಸ್ತಾಪ ಮಾಡಿದರು. ಆಗ ಪ್ರೇಕ್ಷಕರು ಅಶ್ಲೀಲ ಪದ (F*** you) ಬಳಕೆ ಮಾಡಿದರು. ಆ ಸಂದರ್ಭದ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

‘ಕೇಸರಿ: ಚಾಪ್ಟರ್ 2’ ಸಿನಿಮಾದಲ್ಲಿ ಅಕ್ಷಯ್ ಕುಮಾರ್, ಆರ್, ಮಾಧವನ್, ಅನನ್ಯಾ ಪಾಂಡೆ ಮುಂತಾದವರು ನಟಿಸಿದ್ದಾರೆ. ಹಲವು ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಆ ಪೈಕಿ ಕೆಲವು ಚಿತ್ರಮಂದಿರಗಳಿಗೆ ಈ ಕಲಾವಿದರು ಭೇಟಿ ನೀಡುತ್ತಿದ್ದಾರೆ. ಅಕ್ಷಯ್ ಕುಮಾರ್​ ಮತ್ತು ಆರ್. ಮಾಧವನ್ ಅವರು ಚಿತ್ರಮಂದಿರವೊಂದಕ್ಕೆ ತೆರಳಿ ಮಾತನಾಡುವಾಗ ಈ ಘಟನೆ ನಡೆದಿದೆ. ಹಾಗಂತ ಪ್ರೇಕ್ಷಕರು ಅಕ್ಷಯ್​ ಕುಮಾರ್​ಗೆ ವಿರುದ್ಧವಾಗಿ ಇಂಥ ಪದ ಬಳಕೆ ಮಾಡಿಲ್ಲ.

ಇದನ್ನೂ ಓದಿ
Image
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ
Image
ಪಾಕ್ ಸೇನೆಗೆ ನಡುಕ ಶುರು: ಉಪಗ್ರಹ ಚಿತ್ರಗಳಿಂದ ಬಹಿರಂಗವಾಯ್ತು ರಹಸ್ಯ
Image
ಮೆಹಂದಿ ಮಾಸುವ ಮುನ್ನವೇ ನವವಿವಾಹಿತೆಯ ಕುಂಕುಮ ಅಳಿಸಿದ ಉಗ್ರರು
Image
ಪಹಲ್ಗಾಮ್ ದಾಳಿ: ಅಜಿತ್ ದೋವಲ್, ಜೈಶಂಕರ್ ಭೇಟಿಯಾದ ಪ್ರಧಾನಿ ಮೋದಿ

ಅಕ್ಷಯ್ ಕುಮಾರ್ ಅವರು ಇದೇ ಮೊದಲ ಬಾರಿಗೆ ತೆರೆಮೇಲೆ ‘F*** you’ ಎಂಬ ಪದ ಬಳಕೆ ಮಾಡಿದ್ದಾರೆ. ಬ್ರಿಟಿಷ್ ಅಧಿಕಾರಿಗೆ ಬೈಯ್ಯುವ ದೃಶ್ಯದಲ್ಲಿ ಈ ಸಂಭಾಷಣೆ ಇದೆ. ಅದನ್ನೇ ಉಲ್ಲೇಖಿಸಿ ಅವರು ಈಗ ಪಹಲ್ಗಾಮ್ ಉಗ್ರರ ದಾಳಿಯನ್ನು ಕೂಡ ಖಂಡಿಸಿದ್ದಾರೆ.

‘ಅಂಥವರ ಬಗ್ಗೆ ನಮಗೆಲ್ಲ ಕೋಪ ಇದೆ. ಈಗ ಆ ಸಿಟ್ಟು ಮತ್ತೆ ಎಚ್ಚರಗೊಂಡಿದೆ. ನಾನು ಯಾರ ಬಗ್ಗೆ ಮಾತನಾಡುತ್ತಿದ್ದೇನೆ ಎಂಬುದು ನಿಮಗೆಲ್ಲ ಚೆನ್ನಾಗಿ ಗೊತ್ತು. ಇಂದು ನಾನು ಆ ಭಯೋತ್ಪಾದಕರಿಗೆ ಒಂದೇ ಮಾತು ಹೇಳಲು ಬಯಸುತ್ತೇನೆ. ಸಿನಿಮಾದಲ್ಲೂ ಅದನ್ನು ಹೇಳಿದ್ದೇನೆ. ಅದೇನು?’ ಎಂದು ಪ್ರಶ್ನಿಸುತ್ತ ಅಕ್ಷಯ್ ಕುಮಾರ್​ ಅವರು ಪ್ರೇಕ್ಷಕರ ಕಡೆಗೆ ಮೈಕ್ ಹಿಡಿದರು. ಆಗ ಚಿತ್ರಮಂದಿರದಲ್ಲಿ ಇದ್ದ ಪ್ರೇಕ್ಷಕರೆಲ್ಲರೂ ‘F*** you’ ಎಂದು ಜೋರಾಗಿ ಕೂಗಿದರು.

ಇದನ್ನೂ ಓದಿ: ‘ಕರೀನಾ ಕಪೂರ್ ಸಹವಾಸ ಮಾಡಬೇಡ’: ಸೈಫ್​ಗೆ ಎಚ್ಚರಿಕೆ ನೀಡಿದ್ದ ಅಕ್ಷಯ್ ಕುಮಾರ್

ಅಂದಹಾಗೆ, ‘ಕೇಸರಿ 2’ ಸಿನಿಮಾದಲ್ಲಿ ಇಂಥ ಪದ ಬಳಕೆ ಮಾಡಿದ್ದರ ಬಗ್ಗೆ ಅಕ್ಷಯ್ ಕುಮಾರ್ ಅವರು ಈ ಮೊದಲು ಸಮರ್ಥನೆ ನೀಡಿದ್ದರು. ‘ಹೌದು, ನಾನು ಆ ಪದ ಬಳಸಿದ್ದೇನೆ. ಆದರೆ ಅದೇ ದೃಶ್ಯದಲ್ಲಿ ಬ್ರಿಟಿಷ್ ಅಧಿಕಾರಿ ನಮ್ಮನ್ನು ಗುಲಾಮ ಅಂತ ಕರೆದಿದ್ದು ತಪ್ಪು ಅಂತ ನಿಮಗೆ ಅನಿಸುತ್ತಿಲ್ಲವೇ? ನನ್ನ ಪ್ರಕಾರ ಅದಕ್ಕಿಂತ ಕೆಟ್ಟ ಪದ ಬೇರೊಂದಿಲ್ಲ’ ಎಂದು ಅಕ್ಷಯ್ ಕುಮಾರ್ ಅವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?