AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಕ್ ಸುದ್ದಿ ಬಗ್ಗೆ ಕೊನೆಗೂ ಸ್ಪಷ್ಟನೆ ಕೊಟ್ಟ ಬಾಲಿವುಡ್ ನಟ ಅಕ್ಷಯ್ ಕುಮಾರ್

Akshay Kumar: ನಟ ಅಕ್ಷಯ್ ಕುಮಾರ್, ವರ್ಷಕ್ಕೆ ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಸ್ಟಾರ್ ನಟ. ಆದರೆ ಇತ್ತೀಚೆಗೆ ಅಕ್ಷಯ್ ಕುಮಾರ್ ಬಗ್ಗೆ ಸುಳ್ಳು ಸುದ್ದಿಯೊಂದು ಹಬ್ಬಿತ್ತು. ಆ ಬಗ್ಗೆ ಸ್ವತಃ ಅಕ್ಷಯ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಬೇಸರದಿಂದಲೇ ಈ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಫೇಕ್ ಸುದ್ದಿ ಬಗ್ಗೆ ಕೊನೆಗೂ ಸ್ಪಷ್ಟನೆ ಕೊಟ್ಟ ಬಾಲಿವುಡ್ ನಟ ಅಕ್ಷಯ್ ಕುಮಾರ್
ಅಕ್ಷಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 21, 2024 | 4:39 PM

Share

‘ಭೂಲ್ ಭುಲಯ್ಯ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರು ಹೀರೋ ಆಗಿ ನಟಿಸಿದ್ದರು. ಈ ಸಿನಿಮಾ ಯಶಸ್ಸು ಕಂಡಿತ್ತು. ಈ ಚಿತ್ರದ ಸೀಕ್ವೆಲ್​ಗೆ ಅಕ್ಷಯ್ ಕುಮಾರ್ ಬದಲು ಕಾರ್ತಿಕ್ ಆರ್ಯನ್ ಅವರನ್ನು ಹಾಕಿಕೊಳ್ಳಲಾಯಿತು. ಹೀಗಾದಾಗ ಯಾರಿಗಾದರೂ ಬೇಸರ ಆಗಿಯೇ ಆಗುತ್ತದೆ. ಅಕ್ಷಯ್ ಕುಮಾರ್ ಅವರಿಗೂ ಈ ವಿಚಾರದಲ್ಲಿ ಬೇಸರ ಆಗಿದೆ ಎಂದು ಹೇಳಲಾಗುತ್ತಿದೆ. ಈಗ ಅಕ್ಷಯ್ ಕುಮಾರ್ ಬಗ್ಗೆ ಒಂದು ಫೇಕ್ ನ್ಯೂಸ್ ಹರಿದಾಡಿತ್ತು. ಇದಕ್ಕೆ ಅವರು ಸ್ಪಷ್ಟನೆ ನೀಡುವ ಕೆಲಸವನ್ನು ಮಾಡಿದ್ದಾರೆ.

‘ಭೂಲ್ ಭುಲಯ್ಯ 3’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಭೂಲ್ ಭುಲಯ್ಯ’ ಸಿನಿಮಾದಲ್ಲಿ ನಟಿಸಿದ್ದ ವಿದ್ಯಾ ಬಾಲನ್ ಅವರು ಮರಳುತ್ತಿದ್ದಾರೆ. ಅದೇ ರೀತಿ ಅಕ್ಷಯ್ ಕುಮಾರ್ ಅವರ ಆಗಮನವೂ ಆಗಲಿದೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಆ ರೀತಿ ಆಗಿಲ್ಲ. ಈ ವದಂತಿಗೆ ಅಕ್ಷಯ್ ಕುಮಾರ್ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

ಇದನ್ನೂ ಓದಿ:ಅಕ್ಷಯ್ ಕುಮಾರ್ ಸಿನಿಮಾ ಆಯ್ಕೆ ಬಗ್ಗೆ ಆಪ್ತರಿಂದಲೇ ಮೂಡಿದೆ ಪ್ರಶ್ನೆ; ಬೇಸರ ಹೊರಹಾಕಿದ ನಟ

ಸಂದರ್ಶನ ಒಂದರಲ್ಲಿ ಅಕ್ಷಯ್ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದಾರೆ ಎಂದು ವರದಿ ಆಗಿದೆಯಂತೆ. ‘ನಾನು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ. ಅದು ಫೇಕ್ ನ್ಯೂಸ್’ ಎಂದು ಹೇಳಿದ್ದಾರೆ. ಒಮ್ಮೆ ಸರಣಿಯಿಂದ ತೆಗೆದು ಹಾಕಿದ ಬಳಿಕ ಮತ್ತೆ ಅದರಲ್ಲಿ ನಟಿಸೋದು ಸರಿ ಅಲ್ಲ ಅನ್ನೋದು ಅಕ್ಷಯ್ ಕುಮಾರ್ ಅವರ ಅಭಿಪ್ರಾಯ ಎನ್ನಲಾಗಿದೆ.

ಈ ಮೊದಲು ನಿರ್ದೇಶನ ಅನೀಸ್ ಬಾಜ್ಮೀ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ‘ಭೂಲ್ ಭುಲಯ್ಯ 3’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ನಟಿಸೋದಿಲ್ಲ. ಅವರ ಜೊತೆ ಕೆಲಸ ಮಾಡಬೇಕು ಎಂಬುದು ನನ್ನ ಆಸೆ’ ಎಂದಿದ್ದರು ಅವರು.

ಈಗಾಗಲೇ ಅಕ್ಷಯ್ ಕುಮಾರ್ ಬಳಿ ಸಾಕಷ್ಟು ಸಿನಿಮಾಗಳು ಇವೆ. 10 ಸಿನಿಮಾಗಳ ಶೂಟ್​ನಲ್ಲಿ ಅವರು ಬ್ಯುಸಿ ಇದ್ದಾರೆ. ಇದರ ಮಧ್ಯೆ ಹೊಸ ಸಿನಿಮಾ ಒಪ್ಪಿಕೊಳ್ಳಬೇಕು ಎಂದರೆ ಅದು ಕಷ್ಟ. ಹೀಗಾಗಿ ಅವರು ಈ ಸಿನಿಮಾ ಒಪ್ಪಿಕೊಳ್ಳಲು ನಟಿಸಿಲ್ಲ ಎಂದು ಹೇಳಲಾಗುತ್ತಿದೆ. ಅವರ ನಟನೆಯ ‘ಖೇಲ್ ಖೇಲ್ ಮೇ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Wed, 21 August 24

Follow Us
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
Video: ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ
Video: ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ