Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಕ್ ಸುದ್ದಿ ಬಗ್ಗೆ ಕೊನೆಗೂ ಸ್ಪಷ್ಟನೆ ಕೊಟ್ಟ ಬಾಲಿವುಡ್ ನಟ ಅಕ್ಷಯ್ ಕುಮಾರ್

Akshay Kumar: ನಟ ಅಕ್ಷಯ್ ಕುಮಾರ್, ವರ್ಷಕ್ಕೆ ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಸ್ಟಾರ್ ನಟ. ಆದರೆ ಇತ್ತೀಚೆಗೆ ಅಕ್ಷಯ್ ಕುಮಾರ್ ಬಗ್ಗೆ ಸುಳ್ಳು ಸುದ್ದಿಯೊಂದು ಹಬ್ಬಿತ್ತು. ಆ ಬಗ್ಗೆ ಸ್ವತಃ ಅಕ್ಷಯ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಬೇಸರದಿಂದಲೇ ಈ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಫೇಕ್ ಸುದ್ದಿ ಬಗ್ಗೆ ಕೊನೆಗೂ ಸ್ಪಷ್ಟನೆ ಕೊಟ್ಟ ಬಾಲಿವುಡ್ ನಟ ಅಕ್ಷಯ್ ಕುಮಾರ್
ಅಕ್ಷಯ್
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on:Aug 21, 2024 | 4:39 PM

‘ಭೂಲ್ ಭುಲಯ್ಯ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರು ಹೀರೋ ಆಗಿ ನಟಿಸಿದ್ದರು. ಈ ಸಿನಿಮಾ ಯಶಸ್ಸು ಕಂಡಿತ್ತು. ಈ ಚಿತ್ರದ ಸೀಕ್ವೆಲ್​ಗೆ ಅಕ್ಷಯ್ ಕುಮಾರ್ ಬದಲು ಕಾರ್ತಿಕ್ ಆರ್ಯನ್ ಅವರನ್ನು ಹಾಕಿಕೊಳ್ಳಲಾಯಿತು. ಹೀಗಾದಾಗ ಯಾರಿಗಾದರೂ ಬೇಸರ ಆಗಿಯೇ ಆಗುತ್ತದೆ. ಅಕ್ಷಯ್ ಕುಮಾರ್ ಅವರಿಗೂ ಈ ವಿಚಾರದಲ್ಲಿ ಬೇಸರ ಆಗಿದೆ ಎಂದು ಹೇಳಲಾಗುತ್ತಿದೆ. ಈಗ ಅಕ್ಷಯ್ ಕುಮಾರ್ ಬಗ್ಗೆ ಒಂದು ಫೇಕ್ ನ್ಯೂಸ್ ಹರಿದಾಡಿತ್ತು. ಇದಕ್ಕೆ ಅವರು ಸ್ಪಷ್ಟನೆ ನೀಡುವ ಕೆಲಸವನ್ನು ಮಾಡಿದ್ದಾರೆ.

‘ಭೂಲ್ ಭುಲಯ್ಯ 3’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಭೂಲ್ ಭುಲಯ್ಯ’ ಸಿನಿಮಾದಲ್ಲಿ ನಟಿಸಿದ್ದ ವಿದ್ಯಾ ಬಾಲನ್ ಅವರು ಮರಳುತ್ತಿದ್ದಾರೆ. ಅದೇ ರೀತಿ ಅಕ್ಷಯ್ ಕುಮಾರ್ ಅವರ ಆಗಮನವೂ ಆಗಲಿದೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಆ ರೀತಿ ಆಗಿಲ್ಲ. ಈ ವದಂತಿಗೆ ಅಕ್ಷಯ್ ಕುಮಾರ್ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

ಇದನ್ನೂ ಓದಿ:ಅಕ್ಷಯ್ ಕುಮಾರ್ ಸಿನಿಮಾ ಆಯ್ಕೆ ಬಗ್ಗೆ ಆಪ್ತರಿಂದಲೇ ಮೂಡಿದೆ ಪ್ರಶ್ನೆ; ಬೇಸರ ಹೊರಹಾಕಿದ ನಟ

ಸಂದರ್ಶನ ಒಂದರಲ್ಲಿ ಅಕ್ಷಯ್ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದಾರೆ ಎಂದು ವರದಿ ಆಗಿದೆಯಂತೆ. ‘ನಾನು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ. ಅದು ಫೇಕ್ ನ್ಯೂಸ್’ ಎಂದು ಹೇಳಿದ್ದಾರೆ. ಒಮ್ಮೆ ಸರಣಿಯಿಂದ ತೆಗೆದು ಹಾಕಿದ ಬಳಿಕ ಮತ್ತೆ ಅದರಲ್ಲಿ ನಟಿಸೋದು ಸರಿ ಅಲ್ಲ ಅನ್ನೋದು ಅಕ್ಷಯ್ ಕುಮಾರ್ ಅವರ ಅಭಿಪ್ರಾಯ ಎನ್ನಲಾಗಿದೆ.

ಈ ಮೊದಲು ನಿರ್ದೇಶನ ಅನೀಸ್ ಬಾಜ್ಮೀ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ‘ಭೂಲ್ ಭುಲಯ್ಯ 3’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ನಟಿಸೋದಿಲ್ಲ. ಅವರ ಜೊತೆ ಕೆಲಸ ಮಾಡಬೇಕು ಎಂಬುದು ನನ್ನ ಆಸೆ’ ಎಂದಿದ್ದರು ಅವರು.

ಈಗಾಗಲೇ ಅಕ್ಷಯ್ ಕುಮಾರ್ ಬಳಿ ಸಾಕಷ್ಟು ಸಿನಿಮಾಗಳು ಇವೆ. 10 ಸಿನಿಮಾಗಳ ಶೂಟ್​ನಲ್ಲಿ ಅವರು ಬ್ಯುಸಿ ಇದ್ದಾರೆ. ಇದರ ಮಧ್ಯೆ ಹೊಸ ಸಿನಿಮಾ ಒಪ್ಪಿಕೊಳ್ಳಬೇಕು ಎಂದರೆ ಅದು ಕಷ್ಟ. ಹೀಗಾಗಿ ಅವರು ಈ ಸಿನಿಮಾ ಒಪ್ಪಿಕೊಳ್ಳಲು ನಟಿಸಿಲ್ಲ ಎಂದು ಹೇಳಲಾಗುತ್ತಿದೆ. ಅವರ ನಟನೆಯ ‘ಖೇಲ್ ಖೇಲ್ ಮೇ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Wed, 21 August 24

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್