AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಭಾರಿ ಸೋಲಿನ ಬಳಿಕ ಮತ್ತೆ ಅದೇ ತಪ್ಪು ಮಾಡಿದ ಅಕ್ಷಯ್​ ಕುಮಾರ್​; ಹಿಗ್ಗಾಮುಗ್ಗಾ ಟ್ರೋಲ್​

Akshay Kumar | Capsule Gill: ಸದ್ಯಕ್ಕೆ ಅಕ್ಷಯ್​ ಕುಮಾರ್​ ಅವರ ಟೈಮ್​ ಚೆನ್ನಾಗಿಲ್ಲ. ನಿರೀಕ್ಷಿತ ಮಟ್ಟದಲ್ಲಿ ಸಿನಿಮಾಗಳು ಕೈ ಹಿಡಿಯುತ್ತಿಲ್ಲ. ಈ ಸಂದರ್ಭದಲ್ಲಿ ಅವರನ್ನು ಟ್ರೋಲಿಗರು ಟಾರ್ಗೆಟ್​ ಮಾಡಿದ್ದಾರೆ.

Akshay Kumar: ಭಾರಿ ಸೋಲಿನ ಬಳಿಕ ಮತ್ತೆ ಅದೇ ತಪ್ಪು ಮಾಡಿದ ಅಕ್ಷಯ್​ ಕುಮಾರ್​; ಹಿಗ್ಗಾಮುಗ್ಗಾ ಟ್ರೋಲ್​
ಅಕ್ಷಯ್ ಕುಮಾರ್
TV9 Web
| Edited By: |

Updated on:Jul 11, 2022 | 9:19 AM

Share

ನಟ ಅಕ್ಷಯ್​ ಕುಮಾರ್​ (Akshay Kumar) ವೃತ್ತಿಜೀವನದಲ್ಲಿ ಇದು ತುಂಬ ಮುಖ್ಯವಾದ ಕಾಲಘಟ್ಟವಾಗಿದೆ. ಒಂದೆಡೆ ದಕ್ಷಿಣ ಭಾರತದ ಸಿನಿಮಾಗಳಿಂದ ಭಾರಿ ಪೈಪೋಟಿ ಎದುರಾಗುತ್ತಿದೆ. ಇನ್ನೊಂದೆಡೆ ಹಿಂದಿಯ ಇತರೆ ಹೀರೋಗಳ ಎದುರಲ್ಲೂ ಸ್ಪರ್ಧೆ ಮಾಡಬೇಕಿದೆ. ಈ ಸಂದರ್ಭಕ್ಕೆ ಸರಿಯಾಗಿ ಅವರ ಕೆಲವು ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಸೋಲು ಕಂಡಿವೆ. ಅಕ್ಷಯ್​ ಕುಮಾರ್​ ನಟನೆಯ ‘ಬಚ್ಚನ್​ ಪಾಂಡೆ’, ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಆದಾಯ ಗಳಿಸಿಲ್ಲ. ಈಗ ಅವರು ಹೊಸ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ‘ಕ್ಯಾಪ್ಸೂಲ್​ ಗಿಲ್​’ (Capsule Gill) ಹೆಸರಿನ ಈ ಸಿನಿಮಾದಲ್ಲಿ ಅವರ ಲುಕ್​ ಹೇಗಿರಲಿದೆ ಎಂಬುದು ಬಹಿರಂಗ ಆಗಿದೆ. ಅದನ್ನು ನೋಡಿದ ನೆಟ್ಟಿಗರು ಹಿಗ್ಗಾಮುಗ್ಗ ಟ್ರೋಲ್​ (Troll) ಮಾಡುತ್ತಿದ್ದಾರೆ. ಅಷ್ಟಕ್ಕೂ ಅಕ್ಷಯ್​ ಕುಮಾರ್​ ಮಾಡಿದ ತಪ್ಪೇನು? ಇಲ್ಲಿದೆ ವಿವರ..

ಅಕ್ಷಯ್​ ಕುಮಾರ್​ ಅವರು ತುಂಬ ಗಡಿಬಿಡಿಯಲ್ಲಿ ಸಿನಿಮಾ ಮಾಡುತ್ತಾರೆ. 45ರಿಂದ 50 ದಿನಗಳ ಒಳಗೆ ತಮ್ಮ ಪ್ರತಿ ಚಿತ್ರದ ಶೂಟಿಂಗ್​ ಮುಗಿಯಬೇಕು ಎಂದು ಅವರು ನಿರೀಕ್ಷಿಸುತ್ತಾರೆ. ಒಂದು ಸಿನಿಮಾದ ಶೂಟಿಂಗ್​ ನಡುವೆ ಇನ್ನೊಂದು ಚಿತ್ರದ ಚಿತ್ರೀಕರಣದಲ್ಲೂ ಭಾಗಿ ಆಗುತ್ತಾರೆ. ಈ ರೀತಿ ಮಾಡಲು ಸಹಕಾರಿ ಆಗಲಿ ಎಂಬ ಉದ್ದೇಶದಿಂದ ಅವರು ರಿಯಲ್​ ಆಗಿ ಗಡ್ಡ, ಮೀಸೆ ಬಿಡುವುದಿಲ್ಲ. ಪಾತ್ರಕ್ಕೆ ಆ ರೀತಿಯ ಗೆಟಪ್ ಅಗತ್ಯವಿದ್ದರೂ ನಕಲಿ ಗಡ್ಡ-ಮೀಸೆ ಅಂಟಿಸಿಕೊಳ್ಳುತ್ತಾರೆ!

‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾದ ಸೋಲಿಗೆ ಅಕ್ಷಯ್​ ಕುಮಾರ್​ ಅವರ ಈ ಗುಣ ಕೂಡ ಕಾರಣ ಎಂದು ಹೇಳಲಾಗಿತ್ತು. ಈಗ ಅವರು ‘ಕ್ಯಾಪ್ಸೂಲ್​ ಗಿಲ್​’ ಚಿತ್ರದಲ್ಲೂ ಅದೇ ತಪ್ಪು ಮಾಡಿದ್ದಾರೆ. ರಿಯಲ್​ ಲೈಫ್​ ಪಾತ್ರವನ್ನು ಆಧರಿಸಿ ಈ ಸಿನಿಮಾ ತಯಾರಾಗುತ್ತಿದೆ. ಸಿಖ್​ ವ್ಯಕ್ತಿಯ ಪಾತ್ರವನ್ನು ಅವರು ನಿಭಾಯಿಸುತ್ತಿದ್ದು, ನಕಲಿ ಗಡ್ಡ-ಮೀಸೆ ಅಂಟಿಸಿಕೊಂಡು ಫೋಟೋಶೂಟ್​ ಮಾಡಿಸಿದ್ದಾರೆ. ಇದನ್ನು ಕಂಡು ನೆಟ್ಟಿಗರು ವ್ಯಂಗ್ಯವಾಡುತ್ತಿದ್ದಾರೆ. ‘ಅಕ್ಷಯ್​ ಕುಮಾರ್​ ಅವರು ಚೀನಾದಲ್ಲಿ ತಯಾರಾದ ನಕಲಿ ವಸ್ತು ರೀತಿ ಕಾಣುತ್ತಿದ್ದಾರೆ’ ಎಂಬಂತಹ ಕಟು ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ
Image
Akshay Kumar: ರಾಜಕೀಯಕ್ಕೆ ಬರುತ್ತಾರಾ ಅಕ್ಷಯ್​ ಕುಮಾರ್​? ನೇರ ಪ್ರಶ್ನೆಗೆ ಉತ್ತರಿಸಿದ ‘ಕಿಲಾಡಿ’ ನಟ
Image
Akshay Kumar: ‘ಗುಟ್ಕಾ ತಿಂದರೂ ಅಕ್ಷಯ್​ ಕುಮಾರ್​ ಇಷ್ಟೊಂದು ಫಿಟ್​’: ಲೇವಡಿ ಮಾಡಿದ ನೆಟ್ಟಿಗರು
Image
Akshay Kumar: ‘ರಾಮ್​ ಸೇತು’ ಬಗ್ಗೆ ಹಬ್ಬಿದ್ದ ಗಾಸಿಪ್​ಗೆ ಕಡೆಗೂ ಸಿಕ್ಕಿತು ಸ್ಪಷ್ಟನೆ; ಅಕ್ಷಯ್​ ಕುಮಾರ್​ ಫ್ಯಾನ್ಸ್​ಗೆ ಸಂತಸ
Image
ಹಿಂಗೂ ಕಟ್ಟಿ ಹಾಕ್ತಾರಾ? ಸಿಲ್ಲಿ ಕಾರಣಕ್ಕೆ ಸಖತ್​ ಟ್ರೋಲ್​ ಆದ ಅಕ್ಷಯ್​ ಕುಮಾರ್​ ಚಿತ್ರ ‘ಸಾಮ್ರಾಟ್​ ಪೃಥ್ವಿರಾಜ್​’

ಇದನ್ನೂ ಓದಿ: ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?

‘ಸಾಮ್ರಾಟ್​ ಪೃಥ್ವಿರಾಜ್​’ ಒಂದು ಐತಿಹಾಸಿಕ ಕಥಾಹಂದರದ ಸಿನಿಮಾ. ಇಂಥ ಸಿನಿಮಾ ಮಾಡುವಾಗ ಹೆಚ್ಚಿನ ಸಮಯ ಬೇಕಾಗುತ್ತದೆ. ಆದರೆ ಅಷ್ಟು ಸಮಯವನ್ನು ನೀಡಲು ಅಕ್ಷಯ್​ ಕುಮಾರ್​ ಸಿದ್ಧರಿರಲಿಲ್ಲ. ಪೃಥ್ವಿರಾಜ್​ ಪಾತ್ರಕ್ಕಾಗಿ ಅವರು ಅಸಲಿ ಮೀಸೆ ಬಿಡಲು ಕೂಡ ಸಿದ್ಧರಿರಲಿಲ್ಲ. ನಕಲಿ ಮೀಸೆ ಅಂಟಿಸಿಕೊಂಡು ಶೂಟಿಂಗ್​ ಮಾಡಿದರು. ಇದರಿಂದ ಸಿನಿಮಾದ ದೃಶ್ಯಗಳು ನ್ಯಾಚುರಲ್​ ಆಗಿ ಮೂಡಿಬಂದಿಲ್ಲ ಅಂತ ಚಿತ್ರತಂಡದವರೇ ಆರೋಪಿಸಿದ್ದಾರೆ ಎಂದು ಕೆಲವೆಡೆ ವರದಿ ಪ್ರಕಟ ಆಗಿತ್ತು.

Published On - 9:19 am, Mon, 11 July 22

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!