ಸದ್ಗುರುಗಾಗಿ ‘ಒಎಂಜಿ 2’ ವಿಶೇಷ ಶೋ; ವಿಮರ್ಶೆ ಕೇಳಿ ಹಿಗ್ಗಿದ ಅಕ್ಷಯ್ ಕುಮಾರ್

‘ಒಎಂಜಿ 2’ ಸಿನಿಮಾ ಲೈಂಗಿಕ ಶಿಕ್ಷಣದ ಬಗ್ಗೆ ಇರುವುದರಿಂದ ಇದನ್ನು ಎಲ್ಲರೂ ನೋಡಲೇಬೇಕು ಎಂದು ತಂಡ ಹೇಳುತ್ತಿದೆ. ಸದ್ಗುರು ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸದ್ಗುರುಗಾಗಿ ‘ಒಎಂಜಿ 2’ ವಿಶೇಷ ಶೋ; ವಿಮರ್ಶೆ ಕೇಳಿ ಹಿಗ್ಗಿದ ಅಕ್ಷಯ್ ಕುಮಾರ್
ವಾಸುದೇವ-ಅಕ್ಷಯ್ ಕುಮಾರ್
Follow us
|

Updated on: Aug 08, 2023 | 8:16 AM

ಇತ್ತೀಚೆಗೆ ಅಕ್ಷಯ್ ಕುಮಾರ್ (Akshay Kumar) ಅವರು ಸಿನಿಮಾಗಳ ಆಯ್ಕೆಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದಾರೆ. ಕೇವಲ ಹಾಸ್ಯಪ್ರಧಾನ ಸಿನಿಮಾಗಳನ್ನು ಅವರು ಒಪ್ಪಿಕೊಳ್ಳುತ್ತಿಲ್ಲ. ಸಮಾಜಕ್ಕೆ ಸಂದೇಶ ರವಾನೆ ಆಗುವಂಥ ಚಿತ್ರಗಳನ್ನೂ ಅವರು ಮಾಡುತ್ತಿದ್ದಾರೆ. ಈಗ ಅವರ ನಟನೆಯ ‘ಒಹ್ ಮೈ ಗಾಡ್ 2’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಇದರ ಭಾಗವಾಗಿ ಸದ್ಗುರು ಅವರಿಗೆ ಅಕ್ಷಯ್ ಕುಮಾರ್ ಅವರು ಸಿನಿಮಾ ತೋರಿಸಿದ್ದಾರೆ. ಸದ್ಗುರು ಅವರು ಈ ಚಿತ್ರದ ವಿಮರ್ಶೆ ತಿಳಿಸಿದ್ದಾರೆ.

‘ಒಎಂಜಿ 2’ ಸಿನಿಮಾ ಆಗಸ್ಟ್ 11ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಎ ಸರ್ಟಿಫಿಕೇಟ್​ (ವಯಸ್ಕರು ಮಾತ್ರ ನೋಡಬಹುದಾದ ಸಿನಿಮಾ) ಸಿಕ್ಕಿರುವುದರಿಂದ ಸಿನಿಮಾಗೆ ಹಿನ್ನಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಚಿತ್ರ ಲೈಂಗಿಕ ಶಿಕ್ಷಣದ ಬಗ್ಗೆ ಇರುವುದರಿಂದ ಇದನ್ನು ಎಲ್ಲರೂ ನೋಡಲೇಬೇಕು ಎಂದು ತಂಡ ಹೇಳುತ್ತಿದೆ. ಸದ್ಗುರು ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೊಯಿಮತ್ತೂರಿನಲ್ಲಿರುವ ಇಶಾ ಫೌಂಡೇಷನ್​ಗೆ ಅಕ್ಷಯ್ ಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸದ್ಗುರುಗೆ ‘ಒಎಂಜಿ 2’ ಚಿತ್ರವನ್ನು ಅವರು ತೋರಿಸಿದ್ದಾರೆ. ‘ನಮಸ್ಕಾರ ಅಕ್ಷಯ್ ಕುಮಾರ್. ನೀವು ಇಶಾ ಯೋಗ ಕೇಂದ್ರದಲ್ಲಿ ಇರುವುದು ಖುಷಿ ನೀಡಿದೆ. ದೈಹಿಕ ಅಗತ್ಯಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಯುವಜನರಿಗೆ ಶಿಕ್ಷಣ ನೀಡುವುದು ಅತ್ಯಗತ್ಯ. ನಮ್ಮ ಯುವಕರಿಗೆ ಅವರ ದೇಹ, ಮನಸ್ಸು ಮತ್ತು ಭಾವನೆಗಳನ್ನು ನಿಭಾಯಿಸಲು ಸಜ್ಜುಗೊಳಿಸುವ ಸಮಯವಾಗಿದೆ’ ಎಂದು ಸದ್ಗುರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಲೈಂಗಿಕ ಶಿಕ್ಷಣದ ಬಗ್ಗೆ ಹೇಳಲು ಬಂದ ‘ಒಎಂಜಿ 2’; ವಿವಾದ ಸೃಷ್ಟಿಸಲಿದೆ ಅಕ್ಷಯ್ ಕುಮಾರ್ ಸಿನಿಮಾ?

ಇದನ್ನು ರೀಟ್ವೀಟ್ ಮಾಡಿರುವ ಅಕ್ಷಯ್, ‘ನಮಸ್ಕಾರ ಸದ್ಗುರು. ಇಶಾ ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದು ಸಂತಸ ತಂದಿದೆ. ಇದು ಅತ್ಯುತ್ತಮ ಅನುಭವ. ಒಎಂಜಿ 2 ವೀಕ್ಷಿಸಿದ್ದಕ್ಕೆ ಮತ್ತು ಫೀಡ್​ಬ್ಯಾಕ್ ನೀಡಿದ್ದಕ್ಕೆ ಧನ್ಯವಾದ. ನಮ್ಮ ಪ್ರಯತ್ನಕ್ಕೆ ನಿಮ್ಮ ಆಶೀರ್ವಾದ ಸಿಕ್ಕಿದ್ದಕ್ಕೆ ಇಡೀ ತಂಡ ಆಭಾರಿಯಾಗಿದೆ’ ಎಂದು ಅಕ್ಷಯ್ ಪ್ರತಿಕ್ರಿಯೆ ನೀಡಿದ್ದಾರೆ.

‘ಒಎಂಜಿ’ ಸಿನಿಮಾ 2012ರಲ್ಲಿ ರಿಲೀಸ್ ಆಯಿತು. ಇದಾದ 11 ವರ್ಷಗಳ ಬಳಿಕ ಸೀಕ್ವೆಲ್ ಸಿದ್ಧವಾಗಿದೆ. ಶಿವನ ಪಾತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದಾರೆ. ಪಂಕಜ್ ತ್ರಿಪಾಠಿ ಕೂಡ ಸಿನಿಮಾದಲ್ಲಿದ್ದಾರೆ. ಈ ಚಿತ್ರ ರಿಲೀಸ್​ಗೂ ಮೊದಲೇ ವಿವಾದ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ