AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸಾಹಸ ದೃಶ್ಯದ ಶೂಟಿಂಗ್ ವೇಳೆ ಅಕ್ಷಯ್​ ಕುಮಾರ್​ಗೆ ಪೆಟ್ಟು; ಇಲ್ಲಿದೆ ಹೆಲ್ತ್​ ಅಪ್​ಡೇಟ್​

ವಿದೇಶದಲ್ಲಿ ಶೂಟಿಂಗ್​ ಆಗುತ್ತಿರುವುದರಿಂದ ಖರ್ಚು-ವೆಚ್ಚ ಜಾಸ್ತಿ ಆಗುತ್ತದೆ. ಹಾಗಾಗಿ ಚಿತ್ರೀಕರಣ ನಿಲ್ಲಬಾರದು ಎಂದು ಅಕ್ಷಯ್​ ಕುಮಾರ್​ ಕಾಳಜಿ ವಹಿಸಿದ್ದಾರೆ.

Akshay Kumar: ಸಾಹಸ ದೃಶ್ಯದ ಶೂಟಿಂಗ್ ವೇಳೆ ಅಕ್ಷಯ್​ ಕುಮಾರ್​ಗೆ ಪೆಟ್ಟು; ಇಲ್ಲಿದೆ ಹೆಲ್ತ್​ ಅಪ್​ಡೇಟ್​
ಅಕ್ಷಯ್ ಕುಮಾರ್
ಮದನ್​ ಕುಮಾರ್​
|

Updated on:Mar 24, 2023 | 10:50 AM

Share

ನಟ ಅಕ್ಷಯ್​ ಕುಮಾರ್​ (Akshay Kumar) ಅವರಿಗೆ ಈಗ 55 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಭರ್ಜರಿಯಾಗಿ ಫೈಟಿಂಗ್​ ಮಾಡುತ್ತಾರೆ. ಸಾಹಸ ಸನ್ನಿವೇಶಗಳ ಚಿತ್ರೀಕರಣದ ವೇಳೆ ಬಾಡಿ ಡಬಲ್​ ಬಳಸುವ ಬದಲು ತಾವೇ ಸ್ವತಃ ಫೈಟ್​ ಮಾಡುತ್ತಾರೆ. ಅವರ ಈ ಹುಮ್ಮಸ್ಸಿನಿಂದ ಕೆಲವೊಮ್ಮೆ ತೊಂದರೆ ಆದ ಉದಾಹರಣೆ ಕೂಡ ಇದೆ. ಈಗ ಮತ್ತೆ ಅಂಥ ಘಟನೆ ನಡೆದಿದೆ. ಸ್ಕಾಟ್​ಲ್ಯಾಂ​ಡ್​ನಲ್ಲಿ ಶೂಟಿಂಗ್​ ಮಾಡುತ್ತಿರುವಾಗ ಅಕ್ಷಯ್​ ಕುಮಾರ್​ ಅವರಿಗೆ ಪೆಟ್ಟಾಗಿದೆ. ಅವರ ಮೊಣಕಾಲಿಗೆ ಗಾಯ ಆಗಿದೆ. ‘ಬಡೇ ಮಿಯಾ ಚೋಟೆ ಮಿಯಾ’ (Bade Miyan Chote Miyan) ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮತ್ತು ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಇದರ ಚಿತ್ರೀಕರಣದ ವೇಳೆ ಅಕ್ಷಯ್​ ಕುಮಾರ್​ ಪೆಟ್ಟು (Injury) ಮಾಡಿಕೊಂಡಿದ್ದಾರೆ.

ಸಾಹಸ ಸನ್ನಿವೇಶಗಳ ಶೂಟಿಂಗ್​ ವೇಳೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸಾಮಾನ್ಯವಾಗಿ ಅಕ್ಷಯ್​ ಕುಮಾರ್​ ಅವರು ತುಂಬ ಜಾಗರೂಕತೆ ವಹಿಸುತ್ತಾರೆ. ಆದರೂ ಕೂಡ ಕೆಲವೊಮ್ಮೆ ಅಚಾತುರ್ಯ ಸಂಭವಿಸುತ್ತದೆ. ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾಗೆ ಅಲಿ ಅಬ್ಬಾಸ್​ ಜಫರ್​ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ವೇಳೆ ಪೆಟ್ಟು ಮಾಡಿಕೊಂಡರೂ ಕೂಡ ಅಕ್ಷಯ್​ ಕುಮಾರ್​ ಅವರು ಚಿತ್ರೀಕರಣ ನಿಲ್ಲಿಸಿಲ್ಲ. ಕೆಲವೇ ನಿಮಿಷಗಳ ಕಾಲ ವಿಶ್ರಾಂತಿ ಪಡೆದ ನಂತರ ಅವರು ಶೂಟಿಂಗ್​ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಅಕ್ಷಯ್​ ಕುಮಾರ್​ ಜತೆ ವಿದೇಶ ಸುತ್ತಿದ ಮೌನಿ ರಾಯ್​

ಇದನ್ನೂ ಓದಿ
Image
Salman Khan: ಶ್ರೀಮಂತರ ಮದುವೆಯಲ್ಲಿ ಡ್ಯಾನ್ಸ್​ ಮಾಡಿದ ಅಕ್ಷಯ್​, ಸಲ್ಲು: ಇದಕ್ಕಾಗಿ ಪಡೆದ ಹಣ ಎಷ್ಟು?
Image
Lionel Messi Biopic: ‘ಲಿಯೋನೆಲ್‌ ಮೆಸ್ಸಿ ಬಯೋಪಿಕ್​ನಲ್ಲಿ ಅಕ್ಷಯ್​ ಕುಮಾರ್​ ನಟಿಸಬೇಕು’; ಮೀಮ್ಸ್​ ವೈರಲ್​
Image
Akshay Kumar: ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೋಗಿ ಟ್ರೋಲ್​ ಆದ ಅಕ್ಷಯ್​ ಕುಮಾರ್​; ಇಲ್ಲಿದೆ ಕಾರಣ
Image
Akshay Kumar: ಸತತ ಸೋಲಿನ ಬಳಿಕ ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾ ಮಾಡಲು ಮುಂದಾದ ನಟ ಅಕ್ಷಯ್​ ಕುಮಾರ್​

ಅಕ್ಷಯ್​ ಕುಮಾರ್​ ಅವರಿಗೆ ತೀವ್ರವಾಗಿ ಗಾಯವಾಗಿಲ್ಲ. ಸಣ್ಣದಾಗಿ ಪೆಟ್ಟಾದ್ದರಿಂದ ಮೊಣಗಾಲಿಕೆ ಪಟ್ಟಿ ಹಾಕಲಾಗಿದೆ. ಅದರ ನಡುವೆಯೂ ಅವರು ಚಿತ್ರೀಕರಣ ಮುಂದುವರಿಸಿದ್ದಾರೆ ಎಂದು ವರದಿ ಆಗಿದೆ. ವಿದೇಶದಲ್ಲಿ ಶೂಟಿಂಗ್​ ಆಗುತ್ತಿರುವುದರಿಂದ ಖರ್ಚು-ವೆಚ್ಚ ಜಾಸ್ತಿ ಆಗುತ್ತದೆ. ಹಾಗಾಗಿ ಚಿತ್ರೀಕರಣ ನಿಲ್ಲಬಾರದು ಎಂದು ಅಕ್ಷಯ್​ ಕುಮಾರ್​ ಕಾಳಜಿ ವಹಿಸಿದ್ದಾರೆ.

ಇದನ್ನೂ ಓದಿ: Akshay Kumar: ‘ಸೆಲ್ಫೀ’ ಹೀನಾಯ ಸೋಲು; ‘ಎಲ್ಲ ತಪ್ಪು ನನ್ನದೇ’ ಎಂದು ಹೊಣೆ ಹೊತ್ತುಕೊಂಡ ಅಕ್ಷಯ್​ ಕುಮಾರ್​

ಪೂಜಾ ಎಂಟರ್​ಟೇನ್ಮೆಂಟ್​ ಬ್ಯಾನರ್ ಮೂಲಕ ಜಾಕಿ ಬಗ್ನಾನಿ ಅವರು ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇದು ‘ಫಾಸ್ಟ್​ ಆ್ಯಂಡ್​ ಫ್ಯೂರಿಯಸ್​’ ರೀತಿ ಮೂಡಿಬರಲಿದೆ ಎಂದು ಅವರು ಈ ಹಿಂದೆ ಹೇಳಿಕೆ ನೀಡಿದ್ದರು. ಅಂದರೆ ಇದರಲ್ಲಿ ಚೇಸಿಂಗ್​ ಮತ್ತು ಆ್ಯಕ್ಷನ್​ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂದರ್ಥ. ಆ ಕಾರಣದಿಂದ ಅಭಿಮಾನಿಗಳು ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Selfiee Total Collection: ‘ಸೆಲ್ಫೀ’ ಚಿತ್ರ ಫ್ಲಾಪ್​: 8 ದಿನ ಪ್ರದರ್ಶನ ಕಂಡ ಅಕ್ಷಯ್​ ಕುಮಾರ್​ ಸಿನಿಮಾ ಗಳಿಸಿದ್ದೆಷ್ಟು?

ಅಕ್ಷಯ್​ ಕುಮಾರ್​ ಮತ್ತು ಟೈಗರ್​ ಶ್ರಾಫ್​ ಅವರು ಸಾಹಸಪ್ರಧಾನ ಸಿನಿಮಾಗಳಿಂದಲೇ ಫೇಮಸ್​ ಆದವರು. ಇವರಿಬ್ಬರನ್ನು ಒಂದೇ ಚಿತ್ರದಲ್ಲಿ ನೋಡುವುದು ಎಂದರೆ ಫ್ಯಾನ್ಸ್​ ಪಾಲಿಗೆ ಹಬ್ಬವೇ ಸರಿ. ಈ ವರ್ಷ ಡಿಸೆಂಬರ್​ನಲ್ಲಿ ‘ಬಡೆ ಮಿಯಾ ಚೋಟೆ ಮಿಯಾ’ ಚಿತ್ರ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:50 am, Fri, 24 March 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?