AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸಾಹಸ ದೃಶ್ಯದ ಶೂಟಿಂಗ್ ವೇಳೆ ಅಕ್ಷಯ್​ ಕುಮಾರ್​ಗೆ ಪೆಟ್ಟು; ಇಲ್ಲಿದೆ ಹೆಲ್ತ್​ ಅಪ್​ಡೇಟ್​

ವಿದೇಶದಲ್ಲಿ ಶೂಟಿಂಗ್​ ಆಗುತ್ತಿರುವುದರಿಂದ ಖರ್ಚು-ವೆಚ್ಚ ಜಾಸ್ತಿ ಆಗುತ್ತದೆ. ಹಾಗಾಗಿ ಚಿತ್ರೀಕರಣ ನಿಲ್ಲಬಾರದು ಎಂದು ಅಕ್ಷಯ್​ ಕುಮಾರ್​ ಕಾಳಜಿ ವಹಿಸಿದ್ದಾರೆ.

Akshay Kumar: ಸಾಹಸ ದೃಶ್ಯದ ಶೂಟಿಂಗ್ ವೇಳೆ ಅಕ್ಷಯ್​ ಕುಮಾರ್​ಗೆ ಪೆಟ್ಟು; ಇಲ್ಲಿದೆ ಹೆಲ್ತ್​ ಅಪ್​ಡೇಟ್​
ಅಕ್ಷಯ್ ಕುಮಾರ್
ಮದನ್​ ಕುಮಾರ್​
|

Updated on:Mar 24, 2023 | 10:50 AM

Share

ನಟ ಅಕ್ಷಯ್​ ಕುಮಾರ್​ (Akshay Kumar) ಅವರಿಗೆ ಈಗ 55 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಭರ್ಜರಿಯಾಗಿ ಫೈಟಿಂಗ್​ ಮಾಡುತ್ತಾರೆ. ಸಾಹಸ ಸನ್ನಿವೇಶಗಳ ಚಿತ್ರೀಕರಣದ ವೇಳೆ ಬಾಡಿ ಡಬಲ್​ ಬಳಸುವ ಬದಲು ತಾವೇ ಸ್ವತಃ ಫೈಟ್​ ಮಾಡುತ್ತಾರೆ. ಅವರ ಈ ಹುಮ್ಮಸ್ಸಿನಿಂದ ಕೆಲವೊಮ್ಮೆ ತೊಂದರೆ ಆದ ಉದಾಹರಣೆ ಕೂಡ ಇದೆ. ಈಗ ಮತ್ತೆ ಅಂಥ ಘಟನೆ ನಡೆದಿದೆ. ಸ್ಕಾಟ್​ಲ್ಯಾಂ​ಡ್​ನಲ್ಲಿ ಶೂಟಿಂಗ್​ ಮಾಡುತ್ತಿರುವಾಗ ಅಕ್ಷಯ್​ ಕುಮಾರ್​ ಅವರಿಗೆ ಪೆಟ್ಟಾಗಿದೆ. ಅವರ ಮೊಣಕಾಲಿಗೆ ಗಾಯ ಆಗಿದೆ. ‘ಬಡೇ ಮಿಯಾ ಚೋಟೆ ಮಿಯಾ’ (Bade Miyan Chote Miyan) ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮತ್ತು ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಇದರ ಚಿತ್ರೀಕರಣದ ವೇಳೆ ಅಕ್ಷಯ್​ ಕುಮಾರ್​ ಪೆಟ್ಟು (Injury) ಮಾಡಿಕೊಂಡಿದ್ದಾರೆ.

ಸಾಹಸ ಸನ್ನಿವೇಶಗಳ ಶೂಟಿಂಗ್​ ವೇಳೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸಾಮಾನ್ಯವಾಗಿ ಅಕ್ಷಯ್​ ಕುಮಾರ್​ ಅವರು ತುಂಬ ಜಾಗರೂಕತೆ ವಹಿಸುತ್ತಾರೆ. ಆದರೂ ಕೂಡ ಕೆಲವೊಮ್ಮೆ ಅಚಾತುರ್ಯ ಸಂಭವಿಸುತ್ತದೆ. ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾಗೆ ಅಲಿ ಅಬ್ಬಾಸ್​ ಜಫರ್​ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ವೇಳೆ ಪೆಟ್ಟು ಮಾಡಿಕೊಂಡರೂ ಕೂಡ ಅಕ್ಷಯ್​ ಕುಮಾರ್​ ಅವರು ಚಿತ್ರೀಕರಣ ನಿಲ್ಲಿಸಿಲ್ಲ. ಕೆಲವೇ ನಿಮಿಷಗಳ ಕಾಲ ವಿಶ್ರಾಂತಿ ಪಡೆದ ನಂತರ ಅವರು ಶೂಟಿಂಗ್​ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಅಕ್ಷಯ್​ ಕುಮಾರ್​ ಜತೆ ವಿದೇಶ ಸುತ್ತಿದ ಮೌನಿ ರಾಯ್​

ಇದನ್ನೂ ಓದಿ
Image
Salman Khan: ಶ್ರೀಮಂತರ ಮದುವೆಯಲ್ಲಿ ಡ್ಯಾನ್ಸ್​ ಮಾಡಿದ ಅಕ್ಷಯ್​, ಸಲ್ಲು: ಇದಕ್ಕಾಗಿ ಪಡೆದ ಹಣ ಎಷ್ಟು?
Image
Lionel Messi Biopic: ‘ಲಿಯೋನೆಲ್‌ ಮೆಸ್ಸಿ ಬಯೋಪಿಕ್​ನಲ್ಲಿ ಅಕ್ಷಯ್​ ಕುಮಾರ್​ ನಟಿಸಬೇಕು’; ಮೀಮ್ಸ್​ ವೈರಲ್​
Image
Akshay Kumar: ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೋಗಿ ಟ್ರೋಲ್​ ಆದ ಅಕ್ಷಯ್​ ಕುಮಾರ್​; ಇಲ್ಲಿದೆ ಕಾರಣ
Image
Akshay Kumar: ಸತತ ಸೋಲಿನ ಬಳಿಕ ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾ ಮಾಡಲು ಮುಂದಾದ ನಟ ಅಕ್ಷಯ್​ ಕುಮಾರ್​

ಅಕ್ಷಯ್​ ಕುಮಾರ್​ ಅವರಿಗೆ ತೀವ್ರವಾಗಿ ಗಾಯವಾಗಿಲ್ಲ. ಸಣ್ಣದಾಗಿ ಪೆಟ್ಟಾದ್ದರಿಂದ ಮೊಣಗಾಲಿಕೆ ಪಟ್ಟಿ ಹಾಕಲಾಗಿದೆ. ಅದರ ನಡುವೆಯೂ ಅವರು ಚಿತ್ರೀಕರಣ ಮುಂದುವರಿಸಿದ್ದಾರೆ ಎಂದು ವರದಿ ಆಗಿದೆ. ವಿದೇಶದಲ್ಲಿ ಶೂಟಿಂಗ್​ ಆಗುತ್ತಿರುವುದರಿಂದ ಖರ್ಚು-ವೆಚ್ಚ ಜಾಸ್ತಿ ಆಗುತ್ತದೆ. ಹಾಗಾಗಿ ಚಿತ್ರೀಕರಣ ನಿಲ್ಲಬಾರದು ಎಂದು ಅಕ್ಷಯ್​ ಕುಮಾರ್​ ಕಾಳಜಿ ವಹಿಸಿದ್ದಾರೆ.

ಇದನ್ನೂ ಓದಿ: Akshay Kumar: ‘ಸೆಲ್ಫೀ’ ಹೀನಾಯ ಸೋಲು; ‘ಎಲ್ಲ ತಪ್ಪು ನನ್ನದೇ’ ಎಂದು ಹೊಣೆ ಹೊತ್ತುಕೊಂಡ ಅಕ್ಷಯ್​ ಕುಮಾರ್​

ಪೂಜಾ ಎಂಟರ್​ಟೇನ್ಮೆಂಟ್​ ಬ್ಯಾನರ್ ಮೂಲಕ ಜಾಕಿ ಬಗ್ನಾನಿ ಅವರು ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇದು ‘ಫಾಸ್ಟ್​ ಆ್ಯಂಡ್​ ಫ್ಯೂರಿಯಸ್​’ ರೀತಿ ಮೂಡಿಬರಲಿದೆ ಎಂದು ಅವರು ಈ ಹಿಂದೆ ಹೇಳಿಕೆ ನೀಡಿದ್ದರು. ಅಂದರೆ ಇದರಲ್ಲಿ ಚೇಸಿಂಗ್​ ಮತ್ತು ಆ್ಯಕ್ಷನ್​ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂದರ್ಥ. ಆ ಕಾರಣದಿಂದ ಅಭಿಮಾನಿಗಳು ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Selfiee Total Collection: ‘ಸೆಲ್ಫೀ’ ಚಿತ್ರ ಫ್ಲಾಪ್​: 8 ದಿನ ಪ್ರದರ್ಶನ ಕಂಡ ಅಕ್ಷಯ್​ ಕುಮಾರ್​ ಸಿನಿಮಾ ಗಳಿಸಿದ್ದೆಷ್ಟು?

ಅಕ್ಷಯ್​ ಕುಮಾರ್​ ಮತ್ತು ಟೈಗರ್​ ಶ್ರಾಫ್​ ಅವರು ಸಾಹಸಪ್ರಧಾನ ಸಿನಿಮಾಗಳಿಂದಲೇ ಫೇಮಸ್​ ಆದವರು. ಇವರಿಬ್ಬರನ್ನು ಒಂದೇ ಚಿತ್ರದಲ್ಲಿ ನೋಡುವುದು ಎಂದರೆ ಫ್ಯಾನ್ಸ್​ ಪಾಲಿಗೆ ಹಬ್ಬವೇ ಸರಿ. ಈ ವರ್ಷ ಡಿಸೆಂಬರ್​ನಲ್ಲಿ ‘ಬಡೆ ಮಿಯಾ ಚೋಟೆ ಮಿಯಾ’ ಚಿತ್ರ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:50 am, Fri, 24 March 23

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು