AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸಾಹಸ ದೃಶ್ಯದ ಶೂಟಿಂಗ್ ವೇಳೆ ಅಕ್ಷಯ್​ ಕುಮಾರ್​ಗೆ ಪೆಟ್ಟು; ಇಲ್ಲಿದೆ ಹೆಲ್ತ್​ ಅಪ್​ಡೇಟ್​

ವಿದೇಶದಲ್ಲಿ ಶೂಟಿಂಗ್​ ಆಗುತ್ತಿರುವುದರಿಂದ ಖರ್ಚು-ವೆಚ್ಚ ಜಾಸ್ತಿ ಆಗುತ್ತದೆ. ಹಾಗಾಗಿ ಚಿತ್ರೀಕರಣ ನಿಲ್ಲಬಾರದು ಎಂದು ಅಕ್ಷಯ್​ ಕುಮಾರ್​ ಕಾಳಜಿ ವಹಿಸಿದ್ದಾರೆ.

Akshay Kumar: ಸಾಹಸ ದೃಶ್ಯದ ಶೂಟಿಂಗ್ ವೇಳೆ ಅಕ್ಷಯ್​ ಕುಮಾರ್​ಗೆ ಪೆಟ್ಟು; ಇಲ್ಲಿದೆ ಹೆಲ್ತ್​ ಅಪ್​ಡೇಟ್​
ಅಕ್ಷಯ್ ಕುಮಾರ್
ಮದನ್​ ಕುಮಾರ್​
|

Updated on:Mar 24, 2023 | 10:50 AM

Share

ನಟ ಅಕ್ಷಯ್​ ಕುಮಾರ್​ (Akshay Kumar) ಅವರಿಗೆ ಈಗ 55 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಭರ್ಜರಿಯಾಗಿ ಫೈಟಿಂಗ್​ ಮಾಡುತ್ತಾರೆ. ಸಾಹಸ ಸನ್ನಿವೇಶಗಳ ಚಿತ್ರೀಕರಣದ ವೇಳೆ ಬಾಡಿ ಡಬಲ್​ ಬಳಸುವ ಬದಲು ತಾವೇ ಸ್ವತಃ ಫೈಟ್​ ಮಾಡುತ್ತಾರೆ. ಅವರ ಈ ಹುಮ್ಮಸ್ಸಿನಿಂದ ಕೆಲವೊಮ್ಮೆ ತೊಂದರೆ ಆದ ಉದಾಹರಣೆ ಕೂಡ ಇದೆ. ಈಗ ಮತ್ತೆ ಅಂಥ ಘಟನೆ ನಡೆದಿದೆ. ಸ್ಕಾಟ್​ಲ್ಯಾಂ​ಡ್​ನಲ್ಲಿ ಶೂಟಿಂಗ್​ ಮಾಡುತ್ತಿರುವಾಗ ಅಕ್ಷಯ್​ ಕುಮಾರ್​ ಅವರಿಗೆ ಪೆಟ್ಟಾಗಿದೆ. ಅವರ ಮೊಣಕಾಲಿಗೆ ಗಾಯ ಆಗಿದೆ. ‘ಬಡೇ ಮಿಯಾ ಚೋಟೆ ಮಿಯಾ’ (Bade Miyan Chote Miyan) ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮತ್ತು ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಇದರ ಚಿತ್ರೀಕರಣದ ವೇಳೆ ಅಕ್ಷಯ್​ ಕುಮಾರ್​ ಪೆಟ್ಟು (Injury) ಮಾಡಿಕೊಂಡಿದ್ದಾರೆ.

ಸಾಹಸ ಸನ್ನಿವೇಶಗಳ ಶೂಟಿಂಗ್​ ವೇಳೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸಾಮಾನ್ಯವಾಗಿ ಅಕ್ಷಯ್​ ಕುಮಾರ್​ ಅವರು ತುಂಬ ಜಾಗರೂಕತೆ ವಹಿಸುತ್ತಾರೆ. ಆದರೂ ಕೂಡ ಕೆಲವೊಮ್ಮೆ ಅಚಾತುರ್ಯ ಸಂಭವಿಸುತ್ತದೆ. ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾಗೆ ಅಲಿ ಅಬ್ಬಾಸ್​ ಜಫರ್​ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ವೇಳೆ ಪೆಟ್ಟು ಮಾಡಿಕೊಂಡರೂ ಕೂಡ ಅಕ್ಷಯ್​ ಕುಮಾರ್​ ಅವರು ಚಿತ್ರೀಕರಣ ನಿಲ್ಲಿಸಿಲ್ಲ. ಕೆಲವೇ ನಿಮಿಷಗಳ ಕಾಲ ವಿಶ್ರಾಂತಿ ಪಡೆದ ನಂತರ ಅವರು ಶೂಟಿಂಗ್​ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಅಕ್ಷಯ್​ ಕುಮಾರ್​ ಜತೆ ವಿದೇಶ ಸುತ್ತಿದ ಮೌನಿ ರಾಯ್​

ಇದನ್ನೂ ಓದಿ
Image
Salman Khan: ಶ್ರೀಮಂತರ ಮದುವೆಯಲ್ಲಿ ಡ್ಯಾನ್ಸ್​ ಮಾಡಿದ ಅಕ್ಷಯ್​, ಸಲ್ಲು: ಇದಕ್ಕಾಗಿ ಪಡೆದ ಹಣ ಎಷ್ಟು?
Image
Lionel Messi Biopic: ‘ಲಿಯೋನೆಲ್‌ ಮೆಸ್ಸಿ ಬಯೋಪಿಕ್​ನಲ್ಲಿ ಅಕ್ಷಯ್​ ಕುಮಾರ್​ ನಟಿಸಬೇಕು’; ಮೀಮ್ಸ್​ ವೈರಲ್​
Image
Akshay Kumar: ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೋಗಿ ಟ್ರೋಲ್​ ಆದ ಅಕ್ಷಯ್​ ಕುಮಾರ್​; ಇಲ್ಲಿದೆ ಕಾರಣ
Image
Akshay Kumar: ಸತತ ಸೋಲಿನ ಬಳಿಕ ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾ ಮಾಡಲು ಮುಂದಾದ ನಟ ಅಕ್ಷಯ್​ ಕುಮಾರ್​

ಅಕ್ಷಯ್​ ಕುಮಾರ್​ ಅವರಿಗೆ ತೀವ್ರವಾಗಿ ಗಾಯವಾಗಿಲ್ಲ. ಸಣ್ಣದಾಗಿ ಪೆಟ್ಟಾದ್ದರಿಂದ ಮೊಣಗಾಲಿಕೆ ಪಟ್ಟಿ ಹಾಕಲಾಗಿದೆ. ಅದರ ನಡುವೆಯೂ ಅವರು ಚಿತ್ರೀಕರಣ ಮುಂದುವರಿಸಿದ್ದಾರೆ ಎಂದು ವರದಿ ಆಗಿದೆ. ವಿದೇಶದಲ್ಲಿ ಶೂಟಿಂಗ್​ ಆಗುತ್ತಿರುವುದರಿಂದ ಖರ್ಚು-ವೆಚ್ಚ ಜಾಸ್ತಿ ಆಗುತ್ತದೆ. ಹಾಗಾಗಿ ಚಿತ್ರೀಕರಣ ನಿಲ್ಲಬಾರದು ಎಂದು ಅಕ್ಷಯ್​ ಕುಮಾರ್​ ಕಾಳಜಿ ವಹಿಸಿದ್ದಾರೆ.

ಇದನ್ನೂ ಓದಿ: Akshay Kumar: ‘ಸೆಲ್ಫೀ’ ಹೀನಾಯ ಸೋಲು; ‘ಎಲ್ಲ ತಪ್ಪು ನನ್ನದೇ’ ಎಂದು ಹೊಣೆ ಹೊತ್ತುಕೊಂಡ ಅಕ್ಷಯ್​ ಕುಮಾರ್​

ಪೂಜಾ ಎಂಟರ್​ಟೇನ್ಮೆಂಟ್​ ಬ್ಯಾನರ್ ಮೂಲಕ ಜಾಕಿ ಬಗ್ನಾನಿ ಅವರು ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇದು ‘ಫಾಸ್ಟ್​ ಆ್ಯಂಡ್​ ಫ್ಯೂರಿಯಸ್​’ ರೀತಿ ಮೂಡಿಬರಲಿದೆ ಎಂದು ಅವರು ಈ ಹಿಂದೆ ಹೇಳಿಕೆ ನೀಡಿದ್ದರು. ಅಂದರೆ ಇದರಲ್ಲಿ ಚೇಸಿಂಗ್​ ಮತ್ತು ಆ್ಯಕ್ಷನ್​ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂದರ್ಥ. ಆ ಕಾರಣದಿಂದ ಅಭಿಮಾನಿಗಳು ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Selfiee Total Collection: ‘ಸೆಲ್ಫೀ’ ಚಿತ್ರ ಫ್ಲಾಪ್​: 8 ದಿನ ಪ್ರದರ್ಶನ ಕಂಡ ಅಕ್ಷಯ್​ ಕುಮಾರ್​ ಸಿನಿಮಾ ಗಳಿಸಿದ್ದೆಷ್ಟು?

ಅಕ್ಷಯ್​ ಕುಮಾರ್​ ಮತ್ತು ಟೈಗರ್​ ಶ್ರಾಫ್​ ಅವರು ಸಾಹಸಪ್ರಧಾನ ಸಿನಿಮಾಗಳಿಂದಲೇ ಫೇಮಸ್​ ಆದವರು. ಇವರಿಬ್ಬರನ್ನು ಒಂದೇ ಚಿತ್ರದಲ್ಲಿ ನೋಡುವುದು ಎಂದರೆ ಫ್ಯಾನ್ಸ್​ ಪಾಲಿಗೆ ಹಬ್ಬವೇ ಸರಿ. ಈ ವರ್ಷ ಡಿಸೆಂಬರ್​ನಲ್ಲಿ ‘ಬಡೆ ಮಿಯಾ ಚೋಟೆ ಮಿಯಾ’ ಚಿತ್ರ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:50 am, Fri, 24 March 23

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ