AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sooryavanshi Box Office Collection: 3 ದಿನಕ್ಕೆ 75 ಕೋಟಿ ರೂ. ಗಳಿಸಿದ ಅಕ್ಷಯ್​ ಕುಮಾರ್​ ಸಿನಿಮಾ ‘ಸೂರ್ಯವಂಶಿ’

Akshay Kumar: ಅಕ್ಷಯ್​ ಕುಮಾರ್​-ಕತ್ರಿನಾ ಕೈಫ್​ ಜೋಡಿಯ ‘ಸೂರ್ಯವಂಶಿ’ ಚಿತ್ರ ಮೂರನೇ ದಿನಕ್ಕೆ 75 ಕೋಟಿ ರೂ. ಕಲೆಕ್ಷನ್​ ಮಾಡಿದೆ. ಇನ್ನೆರಡು ದಿನಗಳಲ್ಲಿ ಈ ಸಿನಿಮಾ ಅನಾಯಾಸವಾಗಿ 100 ಕೋಟಿ ರೂ. ಕ್ಲಬ್​ ಸೇರಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

Sooryavanshi Box Office Collection: 3 ದಿನಕ್ಕೆ 75 ಕೋಟಿ ರೂ. ಗಳಿಸಿದ ಅಕ್ಷಯ್​ ಕುಮಾರ್​ ಸಿನಿಮಾ ‘ಸೂರ್ಯವಂಶಿ’
‘ಸೂರ್ಯವಂಶಿ’ ಸಿನಿಮಾ ಪೋಸ್ಟರ್​
TV9 Web
| Updated By: ಮದನ್​ ಕುಮಾರ್​|

Updated on: Nov 08, 2021 | 11:31 AM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದ್ದ ‘ಸೂರ್ಯವಂಶಿ’ ಚಿತ್ರ ನ.5ರಂದು ಬಿಡುಗಡೆ ಆಯಿತು. ಅಕ್ಷಯ್​ ಕುಮಾರ್​, ಕತ್ರಿನಾ ಕೈಫ್​ ಜೋಡಿಯಾಗಿ ನಟಿಸಿರುವ ಈ ಸಿನಿಮಾಗೆ ನಿರ್ದೇಶನ ಮಾಡಿರುವುದು ರೋಹಿತ್​ ಶೆಟ್ಟಿ. ಗಲ್ಲಾಪೆಟ್ಟಿಗೆಯಲ್ಲಿ ‘ಸೂರ್ಯವಂಶಿ’ ಭರ್ಜರಿ ಸಾಧನೆ ಮಾಡುತ್ತಿದೆ. ಮೂರೇ ದಿನಕ್ಕೆ 75 ಕೋಟಿ ರೂ. ಗಳಿಸಿರುವುದು ಈ ಸಿನಿಮಾದ ಸಾಧನೆ. ಆ ಮೂಲಕ ಅಕ್ಷಯ್​ ಕುಮಾರ್​ ಅವರ ಖಾತೆಗೆ ಮತ್ತೊಂದು ಸೂಪರ್​ ಹಿಟ್​ ಸಿನಿಮಾ ಸೇರ್ಪಡೆ ಆದಂತಾಗಿದೆ. ನಿರ್ದೇಶಕ ರೋಹಿತ್​ ಶೆಟ್ಟಿ ಗೆಲುವಿನ ನಗು ಬೀರುತ್ತಿದ್ದಾರೆ. ಬಣ್ಣದ ಲೋಕದಲ್ಲಿ ಕತ್ರಿನಾ ಕೈಫ್​ ಚಾರ್ಮ್​ ಇನ್ನಷ್ಟು ಹೆಚ್ಚುವಂತಾಗಿದೆ.

ಬಿಡುಗಡೆಯಾದ ಮೊದಲ ದಿನೇ (ನ.5) ಭಾರತೀಯ ಮಾರುಕಟ್ಟೆಯಲ್ಲಿ ‘ಸೂರ್ಯವಂಶಿ’ ಗಳಿಸಿದ್ದು ಬರೋಬ್ಬರಿ 26.38 ಕೋಟಿ ರೂಪಾಯಿ. ಅಂದು ದೀಪಾವಳಿ ಹಬ್ಬದ ರಜೆ ಇದ್ದಿದ್ದರಿಂದ ಭಾರಿ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿದ್ದರು. ಎರಡನೇ ದಿನ 24.53 ರೂ. ಕಲೆಕ್ಷನ್​ ಆಗಿದೆ. ಮೂರನೇ ದಿನವಾದ ಭಾನುವಾರ ಕೂಡ ಅಷ್ಟೇ ಪ್ರಮಾಣದ ಆದಾಯ ಹರಿದು ಬಂದಿದೆ ಎಂದು ಅಂದಾಜಿಸಲಾಗಿದೆ. ಆ ಮೂಲಕ ಮೂರನೇ ದಿನಕ್ಕೆ 75 ಕೋಟಿ ರೂ. ಕಲೆಕ್ಷನ್​ ಆಗಿದೆ ಎನ್ನುತ್ತಿವೆ ಬಾಕ್ಸ್​ ಆಫೀಸ್​ ಮೂಲಗಳು.

ಇನ್ನೆರಡು ದಿನಗಳಲ್ಲಿ ‘ಸೂರ್ಯವಂಶಿ’ ಅನಾಯಾಸವಾಗಿ 100 ಕೋಟಿ ರೂ. ಕ್ಲಬ್​ ಸೇರಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಮಹಾರಾಷ್ಟ್ರ, ಗೋವಾ, ಜಾರ್ಖಾಂಡ್​ ಮುಂತಾದ ರಾಜ್ಯಗಳ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಕ್ಯುಪೆನ್ಸಿಗೆ ಮಾತ್ರ ಅವಕಾಶ ನೀಡಲಾಗಿದೆ. ಹಾಗಿದ್ದರೂ ಕೂಡ ಈ ಸಿನಿಮಾ ಈ ಪರಿ ಕಲೆಕ್ಷನ್​ ಮಾಡಿರುವುದು ಸಾಧನೆಯೇ ಸರಿ.

ಈ ಸಿನಿಮಾದ ಗೆಲುವಿಗೆ ಹಲವು ಕಾರಣಗಳಿವೆ. ಬಹುದಿನಗಳ ಬಳಿಕ ಚಿತ್ರಮಂದಿರದಲ್ಲಿ ಒಂದು ಬಿಗ್​ ಬಜೆಟ್​ ಸಿನಿಮಾ ರಿಲೀಸ್​ ಆಗಿರುವುದರಿಂದ ಉತ್ತರ ಭಾರತದ ಮಂದಿ ಮುಗಿಬಿದ್ದು ನೋಡಿದ್ದಾರೆ. ಅಕ್ಷಯ್​ ಕುಮಾರ್​ ಮತ್ತು ಕತ್ರಿನಾ ಕೈಫ್​ ಕಾಂಬಿನೇಷನ್​ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಆ್ಯಕ್ಷನ್​ ಸಿನಿಮಾಗಳ ಮೂಲಕ ಜನಮೆಚ್ಚುಗೆ ಗಳಿಸಿದ್ದ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಜನರ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ಸಾಹಸ ದೃಶ್ಯಗಳು ಅದ್ದೂರಿಯಾಗಿ ಮೂಡಿಬಂದಿವೆ. ಈ ಎಲ್ಲ ಕಾರಣಗಳಿಂದ ‘ಸೂರ್ಯವಂಶಿ’ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಬಂಪರ್​ ಬೆಳೆ ತೆಗೆಯುತ್ತಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಹಲವು ತಿಂಗಳ ಹಿಂದೆಯೇ ‘ಸೂರ್ಯವಂಶಿ’ ತೆರೆಕಾಣಬೇಕಿತ್ತು. ಆದರೆ ಕೊರೊನಾ ವೈರಸ್​ ಲಾಕ್​ಡೌನ್ ಕಾರಣದಿಂದ ಪದೇಪದೇ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿತ್ತು. ಈ ನಡುವೆ ಓಟಿಟಿಯಲ್ಲಿ ರಿಲೀಸ್​ ಮಾಡಲು ಆಫರ್​ ಬಂದಿದ್ದರೂ ಕೂಡ ಅದಕ್ಕೆ ನಿರ್ಮಾಪಕರು ಒಪ್ಪಿಕೊಂಡಿರಲಿಲ್ಲ. ಅಂತಿಮವಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದ್ದಕ್ಕೆ ಸೂಕ್ತ ಪ್ರತಿಫಲ ಸಿಗುತ್ತಿದೆ.

ಇದನ್ನೂ ಓದಿ:

Sooryavanshi: ಅಭಿಮಾನಿಗಳಲ್ಲಿ ಹುಚ್ಚೆಬ್ಬಿಸಿದ ‘ಸೂರ್ಯವಂಶಿ’; ದಿನದ 24 ಗಂಟೆಯೂ ಅಕ್ಷಯ್​ ಕುಮಾರ್​ ಚಿತ್ರ ಪ್ರದರ್ಶನ

2 ಬಾರಿ ಅಕ್ಷಯ್​ ಕುಮಾರ್​ ಕೆನ್ನೆಗೆ ಬಾರಿಸಿದ ಕತ್ರಿನಾ ಕೈಫ್​; ಇದನ್ನೆಲ್ಲ ಅಕ್ಕಿ ಸಹಿಸಿಕೊಂಡಿದ್ದೇಕೆ?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!