AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ಆಫರ್ ಕಳೆದುಕೊಂಡ ಅಕ್ಷಯ್ ಕುಮಾರ್; ದುರಾಸೆಯೇ ಕಾರಣ ಎಂದ ಫ್ಯಾನ್ಸ್

ಇತ್ತೀಚೆಗೆ ಮಾತನಾಡಿದ್ದ ಅಕ್ಷಯ್ ಕುಮಾರ್ ಅವರು ‘ಹೇರಾ ಫೇರಿ’ ಸರಣಿಯಿಂದ ಹೊರ ಬಂದಿದ್ದಕ್ಕೆ ಕಾರಣ ತಿಳಿಸಿದ್ದರು. ತಮಗೆ ಸ್ಕ್ರಿಪ್ಟ್ ಇಷ್ಟ ಆಗಿಲ್ಲ. ಹೀಗಾಗಿ ಹೊರ ಬಂದೆ ಎನ್ನುವ ಮಾತನ್ನು ಅವರು ಹೇಳಿದ್ದರು.

ಸಾಲು ಸಾಲು ಆಫರ್ ಕಳೆದುಕೊಂಡ ಅಕ್ಷಯ್ ಕುಮಾರ್; ದುರಾಸೆಯೇ ಕಾರಣ ಎಂದ ಫ್ಯಾನ್ಸ್
ಅಕ್ಷಯ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 22, 2022 | 2:21 PM

ನಟ ಅಕ್ಷಯ್ ಕುಮಾರ್ (Akshay Kumar) ಅವರಿಗೆ ಇತ್ತೀಚೆಗೆ ಅದೃಷ್ಟ ಕೈಕೊಟ್ಟಿದೆ. ಅಂದುಕೊಂಡಂತೆ ಯಾವುದೂ ನಡೆಯುತ್ತಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ. ಫ್ಯಾನ್ಸ್ ಕೂಡ ಬೇಸರಗೊಂಡಿದ್ದಾರೆ. ಈಗ ಅಕ್ಷಯ್ ಕುಮಾರ್ ಅವರು ಸಾಲು ಸಾಲು ಸಿನಿಮಾ ಆಫರ್ ಕಳೆದುಕೊಂಡ ಬಗ್ಗೆ ವರದಿ ಆಗಿದೆ. ಈ ವಿಚಾರ ಕೇಳಿ ಅಕ್ಕಿ ಫ್ಯಾನ್ಸ್ ಸಖತ್ ಬೇಸರಗೊಂಡಿದ್ದಾರೆ. ಅಷ್ಟಕ್ಕೂ ಅಕ್ಷಯ್ ಕುಮಾರ್ ಆಫರ್ ಕಳೆದುಕೊಂಡಿದ್ದೇಕೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಹೇರಾ ಫೇರಿ’ ಸರಣಿಯ ಎರಡು ಚಿತ್ರಗಳು ಹಿಟ್ ಆಗಿವೆ. ಈ ಕಾರಣಕ್ಕೆ ನಿರ್ಮಾಪಕ ಫಿರೋಜ್ ನಾಡಿಯಾದ್ವಾಲಾ ‘ಹೇರಾ ಫೇರಿ 3’ ಸಿನಿಮಾ ಮಾಡಲು ಆಲೋಚನೆ ಮಾಡಿದ್ದಾರೆ. ಆದರೆ, ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಟಿಸುತ್ತಿಲ್ಲ. ಅವರ ಬದಲಿಗೆ ಕಾರ್ತಿಕ್ ಆರ್ಯನ್ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ಮಾತನಾಡಿದ್ದ ಅಕ್ಷಯ್ ಕುಮಾರ್ ಅವರು ‘ಹೇರಾ ಫೇರಿ’ ಸರಣಿಯಿಂದ ಹೊರ ಬಂದಿದ್ದಕ್ಕೆ ಕಾರಣ ತಿಳಿಸಿದ್ದರು. ತಮಗೆ ಸ್ಕ್ರಿಪ್ಟ್ ಇಷ್ಟ ಆಗಿಲ್ಲ. ಹೀಗಾಗಿ ಹೊರ ಬಂದೆ ಎನ್ನುವ ಮಾತನ್ನು ಅವರು ಹೇಳಿದ್ದರು. ಆದರೆ, ಇದರ ಅಸಲಿಯತ್ತು ಬೇರೆ ಇದೆ ಎನ್ನಲಾಗುತ್ತಿದೆ. ಅಕ್ಷಯ್ ಕುಮಾರ್ ಅವರು ಈ ಚಿತ್ರಕ್ಕಾಗಿ ಬರೋಬ್ಬರಿ 90 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಿದ್ದರು. ಆದರೆ, ಇದನ್ನು ನೀಡಲು ಫಿರೋಜ್ ನಿರಾಕರಿಸಿದ್ದಾರೆ.

ಸ್ಕ್ರಿಪ್ಟ್ ಇಷ್ಟವಾಗಿಲ್ಲ ಎಂಬ ಅಕ್ಷಯ್ ಕುಮಾರ್ ಹೇಳಿಕೆಯಿಂದ ಫಿರೋಜ್ ಅವರು ಅಪ್ಸೆಟ್ ಆಗಿದ್ದಾರೆ. ‘ಹೇರಾ ಫೇರಿ 3’ ಚಿತ್ರದಿಂದ ಕೈ ಬಿಟ್ಟಿದ್ದು ಅಲ್ಲದೆ, ‘ವೆಲ್​ಕಮ್​ 3’ ಹಾಗೂ ‘ಆವಾರಾ ಪಾಗಲ್ ದೀವಾನಾ 2’ ಚಿತ್ರದಿಂದಲೂ ಅಕ್ಷಯ್ ಅವರನ್ನು ಕೈಬಿಡುವ ನಿರ್ಧಾರಕ್ಕೆ ಫಿರೋಜ್ ಬಂದಿದ್ದಾರೆ.  ಅಕ್ಷಯ್ ಕುಮಾರ್ ಅವರು ಹೆಚ್ಚಿನ ಸಂಭಾವನೆ ಕೇಳಿ ದುರಾಸೆ ಮಾಡಿದಕ್ಕಾಗಿಯೇ ಈ ರೀತಿ ಆಯಿತು ಎಂದು ಫ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದ ‘ದೃಶ್ಯಂ 2’; ಅಕ್ಷಯ್ ಕುಮಾರ್ ದಾಖಲೆ ಉಡೀಸ್

ಇತ್ತೀಚೆಗೆ ತೆರೆಗೆ ಬಂದ ‘ಭೂಲ್ ಭುಲಯ್ಯ 2’ ಸಿನಿಮಾ ಸೂಪರ್ ಹಿಟ್ ಆಯಿತು. ‘ಭೂಲ್ ಭುಲಯ್ಯ ’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದರು. ಇದರ ಸೀಕ್ವೆಲ್​ನಲ್ಲಿ ಕಾರ್ತಿಕ್ ಆರ್ಯನ್ ನಟಿಸಿದ ಹೊರತಾಗಿಯೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ಇದು ಕೂಡ ಫಿರೋಜ್ ಅವರ ನಿರ್ಧಾರದ ಮೇಲೆ ಪ್ರಭಾವ ಬೀರಿದೆ.

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ