AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಕುಮಾರ್​ಗೆ 3ನೇ ಸೋಲು; ಭಾರತ ಬಿಟ್ಟು ಕೆನಡಾಗೆ ಪಲಾಯನ ಮಾಡುವ ಪ್ಲ್ಯಾನ್​ ನೆನಪಿಸಿದ ನೆಟ್ಟಿಗರು

Akshay Kumar | Raksha Bandhan: ಅಕ್ಷಯ್​ ಕುಮಾರ್​ ಅವರಿಗೆ ಹ್ಯಾಟ್ರಿಕ್ ಸೋಲು ಉಂಟಾಗಿದೆ. ಇದರಿಂದ ಅವರು ಕೆನಡಾ ಕಡೆಗೆ ಮುಖ ಮಾಡುತ್ತಾರಾ ಎಂದು ಟ್ರೋಲ್​ ಮಂದಿ ಪ್ರಶ್ನೆ ಮಾಡುತ್ತಿದ್ದಾರೆ.

ಅಕ್ಷಯ್​ ಕುಮಾರ್​ಗೆ 3ನೇ ಸೋಲು; ಭಾರತ ಬಿಟ್ಟು ಕೆನಡಾಗೆ ಪಲಾಯನ ಮಾಡುವ ಪ್ಲ್ಯಾನ್​ ನೆನಪಿಸಿದ ನೆಟ್ಟಿಗರು
ಅಕ್ಷಯ್ ಕುಮಾರ್
TV9 Web
| Edited By: |

Updated on:Aug 16, 2022 | 9:45 AM

Share

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಮೊದಲಿನಂತೆ ಫಾರ್ಮ್​ನಲ್ಲಿ ಇಲ್ಲ. ಅವರು ನಟಿಸಿದ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋಲು ಕಾಣುತ್ತಿವೆ. 2022ರ ವರ್ಷ ಅವರ ಪಾಲಿಗೆ ಆಶಾದಾಯಕವಾಗಿಲ್ಲ. ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಸಿನಿಮಾಗಳೆಲ್ಲವೂ ಮಕಾಡೆ ಮಲಗುತ್ತಿವೆ. ‘ಬಚ್ಚನ್​ ಪಾಂಡೆ’, ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾಗಳ ಸೋಲಿನ ಬಳಿಕ ಇತ್ತೀಚಿಗೆ ಬಿಡುಗಡೆ ಆಗಿರುವ ‘ರಕ್ಷಾ ಬಂಧನ್​’ (Raksha Bandhan) ಸಿನಿಮಾ ಕೂಡ ಸೋತಿದೆ. ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಿಲ್ಲ. ಇದರಿಂದಾಗಿ ಅಕ್ಷಯ್​ ಕುಮಾರ್​ ಅವರನ್ನು ಕೆಲವರು ಟ್ರೋಲ್​ ಮಾಡುತ್ತಿದ್ದಾರೆ. ಈ ಹಿಂದೆ ಸಿನಿಮಾಗಳು ಸೋತಾಗ ಭಾರತ ಬಿಟ್ಟು ಕೆನಡಾಗೆ (Canada) ಹೋಗಲು ಅಕ್ಷಯ್​ ಕುಮಾರ್​ ಪ್ಲ್ಯಾನ್​ ಮಾಡಿದ್ದರು. ಈಗ ಅವರಿಗೆ ಮತ್ತೆ ಅದೇ ಪರಿಸ್ಥಿತಿ ಬಂದಿದೆ ಎಂದು ನೆಟ್ಟಿಗರು ಅಣಕಿಸುತ್ತಿದ್ದಾರೆ.

ಅಕ್ಷಯ್​ ಕುಮಾರ್​ ಅವರನ್ನು ಕೆಲವರು ‘ಕೆನಡಾ ಕುಮಾರ್​’ ಎಂದು ಕರೆಯುತ್ತಾರೆ. ಅದರ ಬಗ್ಗೆ ಬಹಳ ಸಾರಿ ಚರ್ಚೆ ಆಗಿದೆ. ವೃತ್ತಿಜೀವನದಲ್ಲಿ ಅಕ್ಷಯ್​ ಕುಮಾರ್​ ಅವರು ಸತತ ಸೋಲು ಕಂಡಿದ್ದರು. 14-15 ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋತಾಗ ಅವರು ಭಾರತ ಬಿಟ್ಟು ಕೆನಡಾಗೆ ತೆರಳಲು ನಿರ್ಧರಿಸಿದ್ದರು. ಅಲ್ಲಿನ ಪೌರತ್ವ ಪಡೆಯುಲ್ಲಿಯೂ ಯಶಸ್ವಿ ಆಗಿದ್ದರು. ಕಷ್ಟದ ಸಂದರ್ಭದಲ್ಲಿ ಭಾರತ ತೊರೆಯುವ ನಿರ್ಧಾರ ಮಾಡಿದ್ದಕ್ಕೆ ಅವರನ್ನು ಇಂದಿಗೂ ಜನರು ಟ್ರೋಲ್​ ಮಾಡುತ್ತಲೇ ಇದ್ದಾರೆ.

ಈಗ ಅಕ್ಷಯ್​ ಕುಮಾರ್​ ಅವರಿಗೆ ಹ್ಯಾಟ್ರಿಕ್ ಸೋಲು ಉಂಟಾಗಿದೆ. ಮಾರ್ಚ್​ 18ರಂದು ಬಿಡುಗಡೆಯಾದ ಬಚ್ಚನ್​ ಪಾಂಡೆ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಮೋಡಿ ಮಾಡಲಿಲ್ಲ. ಎಷ್ಟೇ ಪ್ರಯತ್ನಪಟ್ಟರೂ ಈ ಚಿತ್ರದಿಂದ ಅಕ್ಷಯ್​ ಕುಮಾರ್​ಗೆ ಗೆಲುವು ಸಿಗಲಿಲ್ಲ. ಆ ನಂತರ ಅವರ ಅಭಿಮಾನಿಗಳು ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೂಡ ಆ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದರು. ಹಾಗಿದ್ದರೂ ಸಹ ಆ ಸಿನಿಮಾ ಸೋತಿತು.

ಇದನ್ನೂ ಓದಿ
Image
Akshay Kumar: ಸೋದರಿಯನ್ನು ನೆನೆದು ಎಲ್ಲರ ಎದುರು ಕಣ್ಣೀರು ಹಾಕಿದ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​
Image
Akshay Kumar: ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸಿದ ಅಕ್ಷಯ್​ ಕುಮಾರ್​; ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ
Image
Akshay Kumar: ರಾಜಕೀಯಕ್ಕೆ ಬರುತ್ತಾರಾ ಅಕ್ಷಯ್​ ಕುಮಾರ್​? ನೇರ ಪ್ರಶ್ನೆಗೆ ಉತ್ತರಿಸಿದ ‘ಕಿಲಾಡಿ’ ನಟ
Image
Akshay Kumar: ಅಕ್ಷಯ್​ ಕುಮಾರ್​ ನಕಲಿ ಮೀಸೆಯೇ ‘ಸಾಮ್ರಾಟ್​ ಪೃಥ್ವಿರಾಜ್​’ ಸೋಲಿಗೆ ಕಾರಣ? ಹೊಸ ಆರೋಪ

ಆಗಸ್ಟ್​ 11ರಂದು ಬಿಡುಗಡೆಯಾದ ‘ರಕ್ಷಾ ಬಂಧನ್​’ ಸಿನಿಮಾದಲ್ಲಿ ಫ್ಯಾಮಿಲಿ ಕಥಾಹಂದರ ಇದೆ. ರಕ್ಷಾ ಬಂಧನ ಹಬ್ಬ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಈ ಚಿತ್ರಕ್ಕೆ ಒಳ್ಳೆಯ ಕಲೆಕ್ಷನ್​ ಆಗಬಹುದು ಎಂದೇ ಎಲ್ಲರೂ ಊಹಿಸಿದ್ದರು. ಆದರೆ ನಾಲ್ಕು ದಿನಕ್ಕೆ ಈ ಚಿತ್ರ ಗಳಿಸಿದ್ದು 28 ಕೋಟಿ ರೂಪಾಯಿ ಮಾತ್ರ. ಸತತ ಸೋಲಿನ ಸುಳಿಗೆ ಸಿಲುಕಿದ ಅಕ್ಷಯ್​ ಕುಮಾರ್​ ಮತ್ತೆ ಕೆನಡಾ ಕಡೆಗೆ ಮುಖ ಮಾಡುತ್ತಾರಾ ಎಂದು ಟ್ರೋಲ್​ ಮಂದಿ ಪ್ರಶ್ನೆ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:45 am, Tue, 16 August 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ