ಅಕ್ಷಯ್​ ಕುಮಾರ್​ಗೆ 3ನೇ ಸೋಲು; ಭಾರತ ಬಿಟ್ಟು ಕೆನಡಾಗೆ ಪಲಾಯನ ಮಾಡುವ ಪ್ಲ್ಯಾನ್​ ನೆನಪಿಸಿದ ನೆಟ್ಟಿಗರು

Akshay Kumar | Raksha Bandhan: ಅಕ್ಷಯ್​ ಕುಮಾರ್​ ಅವರಿಗೆ ಹ್ಯಾಟ್ರಿಕ್ ಸೋಲು ಉಂಟಾಗಿದೆ. ಇದರಿಂದ ಅವರು ಕೆನಡಾ ಕಡೆಗೆ ಮುಖ ಮಾಡುತ್ತಾರಾ ಎಂದು ಟ್ರೋಲ್​ ಮಂದಿ ಪ್ರಶ್ನೆ ಮಾಡುತ್ತಿದ್ದಾರೆ.

ಅಕ್ಷಯ್​ ಕುಮಾರ್​ಗೆ 3ನೇ ಸೋಲು; ಭಾರತ ಬಿಟ್ಟು ಕೆನಡಾಗೆ ಪಲಾಯನ ಮಾಡುವ ಪ್ಲ್ಯಾನ್​ ನೆನಪಿಸಿದ ನೆಟ್ಟಿಗರು
ಅಕ್ಷಯ್ ಕುಮಾರ್
Follow us
| Updated By: ಮದನ್​ ಕುಮಾರ್​

Updated on:Aug 16, 2022 | 9:45 AM

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಮೊದಲಿನಂತೆ ಫಾರ್ಮ್​ನಲ್ಲಿ ಇಲ್ಲ. ಅವರು ನಟಿಸಿದ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋಲು ಕಾಣುತ್ತಿವೆ. 2022ರ ವರ್ಷ ಅವರ ಪಾಲಿಗೆ ಆಶಾದಾಯಕವಾಗಿಲ್ಲ. ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಸಿನಿಮಾಗಳೆಲ್ಲವೂ ಮಕಾಡೆ ಮಲಗುತ್ತಿವೆ. ‘ಬಚ್ಚನ್​ ಪಾಂಡೆ’, ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾಗಳ ಸೋಲಿನ ಬಳಿಕ ಇತ್ತೀಚಿಗೆ ಬಿಡುಗಡೆ ಆಗಿರುವ ‘ರಕ್ಷಾ ಬಂಧನ್​’ (Raksha Bandhan) ಸಿನಿಮಾ ಕೂಡ ಸೋತಿದೆ. ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಿಲ್ಲ. ಇದರಿಂದಾಗಿ ಅಕ್ಷಯ್​ ಕುಮಾರ್​ ಅವರನ್ನು ಕೆಲವರು ಟ್ರೋಲ್​ ಮಾಡುತ್ತಿದ್ದಾರೆ. ಈ ಹಿಂದೆ ಸಿನಿಮಾಗಳು ಸೋತಾಗ ಭಾರತ ಬಿಟ್ಟು ಕೆನಡಾಗೆ (Canada) ಹೋಗಲು ಅಕ್ಷಯ್​ ಕುಮಾರ್​ ಪ್ಲ್ಯಾನ್​ ಮಾಡಿದ್ದರು. ಈಗ ಅವರಿಗೆ ಮತ್ತೆ ಅದೇ ಪರಿಸ್ಥಿತಿ ಬಂದಿದೆ ಎಂದು ನೆಟ್ಟಿಗರು ಅಣಕಿಸುತ್ತಿದ್ದಾರೆ.

ಅಕ್ಷಯ್​ ಕುಮಾರ್​ ಅವರನ್ನು ಕೆಲವರು ‘ಕೆನಡಾ ಕುಮಾರ್​’ ಎಂದು ಕರೆಯುತ್ತಾರೆ. ಅದರ ಬಗ್ಗೆ ಬಹಳ ಸಾರಿ ಚರ್ಚೆ ಆಗಿದೆ. ವೃತ್ತಿಜೀವನದಲ್ಲಿ ಅಕ್ಷಯ್​ ಕುಮಾರ್​ ಅವರು ಸತತ ಸೋಲು ಕಂಡಿದ್ದರು. 14-15 ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋತಾಗ ಅವರು ಭಾರತ ಬಿಟ್ಟು ಕೆನಡಾಗೆ ತೆರಳಲು ನಿರ್ಧರಿಸಿದ್ದರು. ಅಲ್ಲಿನ ಪೌರತ್ವ ಪಡೆಯುಲ್ಲಿಯೂ ಯಶಸ್ವಿ ಆಗಿದ್ದರು. ಕಷ್ಟದ ಸಂದರ್ಭದಲ್ಲಿ ಭಾರತ ತೊರೆಯುವ ನಿರ್ಧಾರ ಮಾಡಿದ್ದಕ್ಕೆ ಅವರನ್ನು ಇಂದಿಗೂ ಜನರು ಟ್ರೋಲ್​ ಮಾಡುತ್ತಲೇ ಇದ್ದಾರೆ.

ಈಗ ಅಕ್ಷಯ್​ ಕುಮಾರ್​ ಅವರಿಗೆ ಹ್ಯಾಟ್ರಿಕ್ ಸೋಲು ಉಂಟಾಗಿದೆ. ಮಾರ್ಚ್​ 18ರಂದು ಬಿಡುಗಡೆಯಾದ ಬಚ್ಚನ್​ ಪಾಂಡೆ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಮೋಡಿ ಮಾಡಲಿಲ್ಲ. ಎಷ್ಟೇ ಪ್ರಯತ್ನಪಟ್ಟರೂ ಈ ಚಿತ್ರದಿಂದ ಅಕ್ಷಯ್​ ಕುಮಾರ್​ಗೆ ಗೆಲುವು ಸಿಗಲಿಲ್ಲ. ಆ ನಂತರ ಅವರ ಅಭಿಮಾನಿಗಳು ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೂಡ ಆ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದರು. ಹಾಗಿದ್ದರೂ ಸಹ ಆ ಸಿನಿಮಾ ಸೋತಿತು.

ಇದನ್ನೂ ಓದಿ
Image
Akshay Kumar: ಸೋದರಿಯನ್ನು ನೆನೆದು ಎಲ್ಲರ ಎದುರು ಕಣ್ಣೀರು ಹಾಕಿದ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​
Image
Akshay Kumar: ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸಿದ ಅಕ್ಷಯ್​ ಕುಮಾರ್​; ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ
Image
Akshay Kumar: ರಾಜಕೀಯಕ್ಕೆ ಬರುತ್ತಾರಾ ಅಕ್ಷಯ್​ ಕುಮಾರ್​? ನೇರ ಪ್ರಶ್ನೆಗೆ ಉತ್ತರಿಸಿದ ‘ಕಿಲಾಡಿ’ ನಟ
Image
Akshay Kumar: ಅಕ್ಷಯ್​ ಕುಮಾರ್​ ನಕಲಿ ಮೀಸೆಯೇ ‘ಸಾಮ್ರಾಟ್​ ಪೃಥ್ವಿರಾಜ್​’ ಸೋಲಿಗೆ ಕಾರಣ? ಹೊಸ ಆರೋಪ

ಆಗಸ್ಟ್​ 11ರಂದು ಬಿಡುಗಡೆಯಾದ ‘ರಕ್ಷಾ ಬಂಧನ್​’ ಸಿನಿಮಾದಲ್ಲಿ ಫ್ಯಾಮಿಲಿ ಕಥಾಹಂದರ ಇದೆ. ರಕ್ಷಾ ಬಂಧನ ಹಬ್ಬ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಈ ಚಿತ್ರಕ್ಕೆ ಒಳ್ಳೆಯ ಕಲೆಕ್ಷನ್​ ಆಗಬಹುದು ಎಂದೇ ಎಲ್ಲರೂ ಊಹಿಸಿದ್ದರು. ಆದರೆ ನಾಲ್ಕು ದಿನಕ್ಕೆ ಈ ಚಿತ್ರ ಗಳಿಸಿದ್ದು 28 ಕೋಟಿ ರೂಪಾಯಿ ಮಾತ್ರ. ಸತತ ಸೋಲಿನ ಸುಳಿಗೆ ಸಿಲುಕಿದ ಅಕ್ಷಯ್​ ಕುಮಾರ್​ ಮತ್ತೆ ಕೆನಡಾ ಕಡೆಗೆ ಮುಖ ಮಾಡುತ್ತಾರಾ ಎಂದು ಟ್ರೋಲ್​ ಮಂದಿ ಪ್ರಶ್ನೆ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:45 am, Tue, 16 August 22

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್