AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗನ ಬಯೋಪಿಕ್​​ನಲ್ಲಿ ಅಕ್ಷಯ್​ ಕುಮಾರ್​; ಹೇಗಿದೆ ‘ಸರ್ಫಿರಾ’ ಟ್ರೇಲರ್​?

ನಟ ಅಕ್ಷಯ್​ ಕುಮಾರ್​ ಅವರಿಗೆ ಬಯೋಪಿಕ್​ಗಳು ಹೊಸದಲ್ಲ. ಈಗಾಗಲೇ ಅನೇಕ ಸಾಧಕರ ಜೀವನಾಧಾರಿತ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈಗ ಕರ್ನಾಟಕದ ಸಾಧಕನ ಕಥೆಯನ್ನು ಇಟ್ಟುಕೊಂಡು ಅವರು ‘ಸರ್ಫಿರಾ’ ಸಿನಿಮಾ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿ ಸದ್ದು ಮಾಡುತ್ತಿದೆ. ಜುಲೈ 12ರಂದು ರಿಲೀಸ್​ ಆಗಲಿರುವ ಈ ಸಿನಿಮಾಗೆ ಸುಧಾ ಕೊಂಗರಾ ನಿರ್ದೇಶನ ಮಾಡಿದ್ದಾರೆ.

ಕನ್ನಡಿಗನ ಬಯೋಪಿಕ್​​ನಲ್ಲಿ ಅಕ್ಷಯ್​ ಕುಮಾರ್​; ಹೇಗಿದೆ ‘ಸರ್ಫಿರಾ’ ಟ್ರೇಲರ್​?
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 18, 2024 | 4:02 PM

Share

ಸೋಲು-ಗೆಲುವು ಏನೇ ಇದ್ದರೂ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಸಿನಿಮಾ ಮಾಡುವ ವೇಗ ಕಡಿಮೆ ಆಗಲ್ಲ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಲೇ ಇದ್ದಾರೆ. ಈಗ ಅವರ ಹೊಸ ಸಿನಿಮಾ ‘ಸರ್ಫಿರಾ’ (Sarfira) ಬಿಡುಗಡೆಗೆ ಸಜ್ಜಾಗಿದೆ. ಜುಲೈ 12ರಂದು ಈ ಸಿನಿಮಾ ತೆರೆಕಾಣಲಿದೆ. ವಿಶೇಷ ಏನೆಂದರೆ, ಇದು ಕನ್ನಡಿಗ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಜೀವನದ ವಿವರಗಳನ್ನು ಆಧರಿಸಿ ತಯಾರಾದ ಸಿನಿಮಾ. ಈ ಸಿನಿಮಾದಲ್ಲಿ ತಮಿಳು ನಟ ಸೂರ್ಯ (Suriya) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಎಲ್ಲ ಕಾರಣಗಳಿಂದ ದಕ್ಷಿಣ ಭಾರತದಲ್ಲೂ ‘ಸರ್ಫಿರಾ’ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಬಡವರಿಗೆ ಕೂಡ ಕಡಿಮೆ ದರದಲ್ಲಿ ವಿಮಾನಯಾನ ಸೇವೆ ಸಿಗಬೇಕು ಎಂಬ ಕನಸು ಕಂಡು ಸಾಧನೆ ಮಾಡಿದ ಕನ್ನಡಿಗ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಅವರ ಜೀವನವನ್ನು ಆಧರಿಸಿ ತಮಿಳಿನಲ್ಲಿ ‘ಸೂರರೈ ಪೋಟ್ರು’ ಸಿನಿಮಾ ಮೂಡಿಬಂದಿತ್ತು. ಈಗ ಅದೇ ಸಿನಿಮಾವನ್ನು ಹಿಂದಿಗೆ ರಿಮೇಕ್​ ಮಾಡಲಾಗಿದೆ. ತಮಿಳಿನಲ್ಲಿ ಸೂರ್ಯ ಮುಖ್ಯಭೂಮಿಕೆ ನಿಭಾಯಿಸಿದ್ದರು. ಈಗ ಹಿಂದಿ ರಿಮೇಕ್​ನಲ್ಲಿ ಆ ಪಾತ್ರವನ್ನು ಅಕ್ಷಯ್​ ಕುಮಾರ್​ ಮಾಡಿದ್ದಾರೆ.

ಕ್ಯಾಪ್ಟನ್​ ಗೋಪಿನಾಥ್​ ಅವರ ಜೀವನದ ಕಥೆ ತುಂಬ ಸ್ಫೂರ್ತಿದಾಯಕವಾಗಿದೆ. ಹಾಗಾಗಿ ನಟ ಸೂರ್ಯ ಅವರು ಬಹಳ ಆಸಕ್ತಿ ವಹಿಸಿ ‘ಸೂರರೈ ಪೋಟ್ರು’ ಸಿನಿಮಾ ಮಾಡಿದ್ದರು. ತಮಿಳಿನ ಆ ಸಿನಿಮಾ ಕನ್ನಡ, ಹಿಂದಿ ಮುಂತಾದ ಭಾಷೆಗಳಿಗೆ ಡಬ್​ ಕೂಡ ಆಗಿತ್ತು. ಹಿಂದಿ ಪ್ರೇಕ್ಷಕರು ಸಹ ಮೂಲ ಸಿನಿಮಾವನ್ನು ಒಟಿಟಿಯಲ್ಲಿ ನೋಡಿದ್ದಾರೆ. ಹಾಗಿದ್ದರೂ ಕೂಡ ಅಕ್ಷಯ್​ ಕುಮಾರ್​ ಈ ಚಿತ್ರವನ್ನು ರಿಮೇಕ್​ ಮಾಡಿದ್ದು ಯಾಕೆ ಎಂಬ ಕೌತುಕ ಎಲ್ಲರಲ್ಲೂ ಇದೆ.

ಇದನ್ನೂ ಓದಿ: ಸೆಕೆಂಡ್​ ಹ್ಯಾಂಡ್ ಬಟ್ಟೆ ಧರಿಸುತ್ತಾರೆ ಅಕ್ಷಯ್​ ಕುಮಾರ್​ ಮಗ ಆರವ್​; ಕಾರಣ ಏನು?

ಸದ್ಯ ಬಿಡುಗಡೆ ಆಗಿರುವ ‘ಸರ್ಫಿರಾ’ ಟ್ರೇಲರ್​ ನೋಡಿದರೆ ‘ಸೂರರೈ ಪೋಟ್ರು’ ಸಿನಿಮಾದ ಪ್ರತಿ ಫ್ರೇಮ್​ ಕೂಡ ನೆನಪಾಗುತ್ತದೆ. ಮೇಕಿಂಗ್​ ದೃಷ್ಟಿಯಲ್ಲಿ ಹೆಚ್ಚೇನೂ ಬದಲಾವಣೆ ಆದಂತಿಲ್ಲ. ಒಟಿಟಿಯಲ್ಲಿ ಜನರು ಈಗಾಗಲೇ ನೋಡಿದ ಕಥೆಯನ್ನು ಮತ್ತೆ ಚಿತ್ರಮಂದಿರದಲ್ಲಿ ನೋಡಲು ಬರುತ್ತಾರಾ ಎಂಬುದು ಜುಲೈ 12ರಂದು ಗೊತ್ತಾಗಲಿದೆ. ಮೂಲ ಸಿನಿಮಾಗೆ ನಿರ್ದೇಶನ ಮಾಡಿದ್ದ ಸುಧಾ ಕೊಂಗರಾ ಅವರೇ ಈಗ ಹಿಂದಿ ರಿಮೇಕ್​ಗೂ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾದ ನಿರ್ಮಾಣದಲ್ಲಿ ಸೂರ್ಯ ಹಾಗೂ ಜ್ಯೋತಿಕಾ ಕೂಡ ಪಾಲುದಾರಿಕೆ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!