AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗನ ಬಯೋಪಿಕ್​​ನಲ್ಲಿ ಅಕ್ಷಯ್​ ಕುಮಾರ್​; ಹೇಗಿದೆ ‘ಸರ್ಫಿರಾ’ ಟ್ರೇಲರ್​?

ನಟ ಅಕ್ಷಯ್​ ಕುಮಾರ್​ ಅವರಿಗೆ ಬಯೋಪಿಕ್​ಗಳು ಹೊಸದಲ್ಲ. ಈಗಾಗಲೇ ಅನೇಕ ಸಾಧಕರ ಜೀವನಾಧಾರಿತ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈಗ ಕರ್ನಾಟಕದ ಸಾಧಕನ ಕಥೆಯನ್ನು ಇಟ್ಟುಕೊಂಡು ಅವರು ‘ಸರ್ಫಿರಾ’ ಸಿನಿಮಾ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿ ಸದ್ದು ಮಾಡುತ್ತಿದೆ. ಜುಲೈ 12ರಂದು ರಿಲೀಸ್​ ಆಗಲಿರುವ ಈ ಸಿನಿಮಾಗೆ ಸುಧಾ ಕೊಂಗರಾ ನಿರ್ದೇಶನ ಮಾಡಿದ್ದಾರೆ.

ಕನ್ನಡಿಗನ ಬಯೋಪಿಕ್​​ನಲ್ಲಿ ಅಕ್ಷಯ್​ ಕುಮಾರ್​; ಹೇಗಿದೆ ‘ಸರ್ಫಿರಾ’ ಟ್ರೇಲರ್​?
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 18, 2024 | 4:02 PM

Share

ಸೋಲು-ಗೆಲುವು ಏನೇ ಇದ್ದರೂ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಸಿನಿಮಾ ಮಾಡುವ ವೇಗ ಕಡಿಮೆ ಆಗಲ್ಲ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಲೇ ಇದ್ದಾರೆ. ಈಗ ಅವರ ಹೊಸ ಸಿನಿಮಾ ‘ಸರ್ಫಿರಾ’ (Sarfira) ಬಿಡುಗಡೆಗೆ ಸಜ್ಜಾಗಿದೆ. ಜುಲೈ 12ರಂದು ಈ ಸಿನಿಮಾ ತೆರೆಕಾಣಲಿದೆ. ವಿಶೇಷ ಏನೆಂದರೆ, ಇದು ಕನ್ನಡಿಗ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಜೀವನದ ವಿವರಗಳನ್ನು ಆಧರಿಸಿ ತಯಾರಾದ ಸಿನಿಮಾ. ಈ ಸಿನಿಮಾದಲ್ಲಿ ತಮಿಳು ನಟ ಸೂರ್ಯ (Suriya) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಎಲ್ಲ ಕಾರಣಗಳಿಂದ ದಕ್ಷಿಣ ಭಾರತದಲ್ಲೂ ‘ಸರ್ಫಿರಾ’ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಬಡವರಿಗೆ ಕೂಡ ಕಡಿಮೆ ದರದಲ್ಲಿ ವಿಮಾನಯಾನ ಸೇವೆ ಸಿಗಬೇಕು ಎಂಬ ಕನಸು ಕಂಡು ಸಾಧನೆ ಮಾಡಿದ ಕನ್ನಡಿಗ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಅವರ ಜೀವನವನ್ನು ಆಧರಿಸಿ ತಮಿಳಿನಲ್ಲಿ ‘ಸೂರರೈ ಪೋಟ್ರು’ ಸಿನಿಮಾ ಮೂಡಿಬಂದಿತ್ತು. ಈಗ ಅದೇ ಸಿನಿಮಾವನ್ನು ಹಿಂದಿಗೆ ರಿಮೇಕ್​ ಮಾಡಲಾಗಿದೆ. ತಮಿಳಿನಲ್ಲಿ ಸೂರ್ಯ ಮುಖ್ಯಭೂಮಿಕೆ ನಿಭಾಯಿಸಿದ್ದರು. ಈಗ ಹಿಂದಿ ರಿಮೇಕ್​ನಲ್ಲಿ ಆ ಪಾತ್ರವನ್ನು ಅಕ್ಷಯ್​ ಕುಮಾರ್​ ಮಾಡಿದ್ದಾರೆ.

ಕ್ಯಾಪ್ಟನ್​ ಗೋಪಿನಾಥ್​ ಅವರ ಜೀವನದ ಕಥೆ ತುಂಬ ಸ್ಫೂರ್ತಿದಾಯಕವಾಗಿದೆ. ಹಾಗಾಗಿ ನಟ ಸೂರ್ಯ ಅವರು ಬಹಳ ಆಸಕ್ತಿ ವಹಿಸಿ ‘ಸೂರರೈ ಪೋಟ್ರು’ ಸಿನಿಮಾ ಮಾಡಿದ್ದರು. ತಮಿಳಿನ ಆ ಸಿನಿಮಾ ಕನ್ನಡ, ಹಿಂದಿ ಮುಂತಾದ ಭಾಷೆಗಳಿಗೆ ಡಬ್​ ಕೂಡ ಆಗಿತ್ತು. ಹಿಂದಿ ಪ್ರೇಕ್ಷಕರು ಸಹ ಮೂಲ ಸಿನಿಮಾವನ್ನು ಒಟಿಟಿಯಲ್ಲಿ ನೋಡಿದ್ದಾರೆ. ಹಾಗಿದ್ದರೂ ಕೂಡ ಅಕ್ಷಯ್​ ಕುಮಾರ್​ ಈ ಚಿತ್ರವನ್ನು ರಿಮೇಕ್​ ಮಾಡಿದ್ದು ಯಾಕೆ ಎಂಬ ಕೌತುಕ ಎಲ್ಲರಲ್ಲೂ ಇದೆ.

ಇದನ್ನೂ ಓದಿ: ಸೆಕೆಂಡ್​ ಹ್ಯಾಂಡ್ ಬಟ್ಟೆ ಧರಿಸುತ್ತಾರೆ ಅಕ್ಷಯ್​ ಕುಮಾರ್​ ಮಗ ಆರವ್​; ಕಾರಣ ಏನು?

ಸದ್ಯ ಬಿಡುಗಡೆ ಆಗಿರುವ ‘ಸರ್ಫಿರಾ’ ಟ್ರೇಲರ್​ ನೋಡಿದರೆ ‘ಸೂರರೈ ಪೋಟ್ರು’ ಸಿನಿಮಾದ ಪ್ರತಿ ಫ್ರೇಮ್​ ಕೂಡ ನೆನಪಾಗುತ್ತದೆ. ಮೇಕಿಂಗ್​ ದೃಷ್ಟಿಯಲ್ಲಿ ಹೆಚ್ಚೇನೂ ಬದಲಾವಣೆ ಆದಂತಿಲ್ಲ. ಒಟಿಟಿಯಲ್ಲಿ ಜನರು ಈಗಾಗಲೇ ನೋಡಿದ ಕಥೆಯನ್ನು ಮತ್ತೆ ಚಿತ್ರಮಂದಿರದಲ್ಲಿ ನೋಡಲು ಬರುತ್ತಾರಾ ಎಂಬುದು ಜುಲೈ 12ರಂದು ಗೊತ್ತಾಗಲಿದೆ. ಮೂಲ ಸಿನಿಮಾಗೆ ನಿರ್ದೇಶನ ಮಾಡಿದ್ದ ಸುಧಾ ಕೊಂಗರಾ ಅವರೇ ಈಗ ಹಿಂದಿ ರಿಮೇಕ್​ಗೂ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾದ ನಿರ್ಮಾಣದಲ್ಲಿ ಸೂರ್ಯ ಹಾಗೂ ಜ್ಯೋತಿಕಾ ಕೂಡ ಪಾಲುದಾರಿಕೆ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ