AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗನ ಬಯೋಪಿಕ್​​ನಲ್ಲಿ ಅಕ್ಷಯ್​ ಕುಮಾರ್​; ಹೇಗಿದೆ ‘ಸರ್ಫಿರಾ’ ಟ್ರೇಲರ್​?

ನಟ ಅಕ್ಷಯ್​ ಕುಮಾರ್​ ಅವರಿಗೆ ಬಯೋಪಿಕ್​ಗಳು ಹೊಸದಲ್ಲ. ಈಗಾಗಲೇ ಅನೇಕ ಸಾಧಕರ ಜೀವನಾಧಾರಿತ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈಗ ಕರ್ನಾಟಕದ ಸಾಧಕನ ಕಥೆಯನ್ನು ಇಟ್ಟುಕೊಂಡು ಅವರು ‘ಸರ್ಫಿರಾ’ ಸಿನಿಮಾ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿ ಸದ್ದು ಮಾಡುತ್ತಿದೆ. ಜುಲೈ 12ರಂದು ರಿಲೀಸ್​ ಆಗಲಿರುವ ಈ ಸಿನಿಮಾಗೆ ಸುಧಾ ಕೊಂಗರಾ ನಿರ್ದೇಶನ ಮಾಡಿದ್ದಾರೆ.

ಕನ್ನಡಿಗನ ಬಯೋಪಿಕ್​​ನಲ್ಲಿ ಅಕ್ಷಯ್​ ಕುಮಾರ್​; ಹೇಗಿದೆ ‘ಸರ್ಫಿರಾ’ ಟ್ರೇಲರ್​?
ಅಕ್ಷಯ್​ ಕುಮಾರ್​
Follow us
ಮದನ್​ ಕುಮಾರ್​
|

Updated on: Jun 18, 2024 | 4:02 PM

ಸೋಲು-ಗೆಲುವು ಏನೇ ಇದ್ದರೂ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಸಿನಿಮಾ ಮಾಡುವ ವೇಗ ಕಡಿಮೆ ಆಗಲ್ಲ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಲೇ ಇದ್ದಾರೆ. ಈಗ ಅವರ ಹೊಸ ಸಿನಿಮಾ ‘ಸರ್ಫಿರಾ’ (Sarfira) ಬಿಡುಗಡೆಗೆ ಸಜ್ಜಾಗಿದೆ. ಜುಲೈ 12ರಂದು ಈ ಸಿನಿಮಾ ತೆರೆಕಾಣಲಿದೆ. ವಿಶೇಷ ಏನೆಂದರೆ, ಇದು ಕನ್ನಡಿಗ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಜೀವನದ ವಿವರಗಳನ್ನು ಆಧರಿಸಿ ತಯಾರಾದ ಸಿನಿಮಾ. ಈ ಸಿನಿಮಾದಲ್ಲಿ ತಮಿಳು ನಟ ಸೂರ್ಯ (Suriya) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಎಲ್ಲ ಕಾರಣಗಳಿಂದ ದಕ್ಷಿಣ ಭಾರತದಲ್ಲೂ ‘ಸರ್ಫಿರಾ’ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಬಡವರಿಗೆ ಕೂಡ ಕಡಿಮೆ ದರದಲ್ಲಿ ವಿಮಾನಯಾನ ಸೇವೆ ಸಿಗಬೇಕು ಎಂಬ ಕನಸು ಕಂಡು ಸಾಧನೆ ಮಾಡಿದ ಕನ್ನಡಿಗ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಅವರ ಜೀವನವನ್ನು ಆಧರಿಸಿ ತಮಿಳಿನಲ್ಲಿ ‘ಸೂರರೈ ಪೋಟ್ರು’ ಸಿನಿಮಾ ಮೂಡಿಬಂದಿತ್ತು. ಈಗ ಅದೇ ಸಿನಿಮಾವನ್ನು ಹಿಂದಿಗೆ ರಿಮೇಕ್​ ಮಾಡಲಾಗಿದೆ. ತಮಿಳಿನಲ್ಲಿ ಸೂರ್ಯ ಮುಖ್ಯಭೂಮಿಕೆ ನಿಭಾಯಿಸಿದ್ದರು. ಈಗ ಹಿಂದಿ ರಿಮೇಕ್​ನಲ್ಲಿ ಆ ಪಾತ್ರವನ್ನು ಅಕ್ಷಯ್​ ಕುಮಾರ್​ ಮಾಡಿದ್ದಾರೆ.

ಕ್ಯಾಪ್ಟನ್​ ಗೋಪಿನಾಥ್​ ಅವರ ಜೀವನದ ಕಥೆ ತುಂಬ ಸ್ಫೂರ್ತಿದಾಯಕವಾಗಿದೆ. ಹಾಗಾಗಿ ನಟ ಸೂರ್ಯ ಅವರು ಬಹಳ ಆಸಕ್ತಿ ವಹಿಸಿ ‘ಸೂರರೈ ಪೋಟ್ರು’ ಸಿನಿಮಾ ಮಾಡಿದ್ದರು. ತಮಿಳಿನ ಆ ಸಿನಿಮಾ ಕನ್ನಡ, ಹಿಂದಿ ಮುಂತಾದ ಭಾಷೆಗಳಿಗೆ ಡಬ್​ ಕೂಡ ಆಗಿತ್ತು. ಹಿಂದಿ ಪ್ರೇಕ್ಷಕರು ಸಹ ಮೂಲ ಸಿನಿಮಾವನ್ನು ಒಟಿಟಿಯಲ್ಲಿ ನೋಡಿದ್ದಾರೆ. ಹಾಗಿದ್ದರೂ ಕೂಡ ಅಕ್ಷಯ್​ ಕುಮಾರ್​ ಈ ಚಿತ್ರವನ್ನು ರಿಮೇಕ್​ ಮಾಡಿದ್ದು ಯಾಕೆ ಎಂಬ ಕೌತುಕ ಎಲ್ಲರಲ್ಲೂ ಇದೆ.

ಇದನ್ನೂ ಓದಿ: ಸೆಕೆಂಡ್​ ಹ್ಯಾಂಡ್ ಬಟ್ಟೆ ಧರಿಸುತ್ತಾರೆ ಅಕ್ಷಯ್​ ಕುಮಾರ್​ ಮಗ ಆರವ್​; ಕಾರಣ ಏನು?

ಸದ್ಯ ಬಿಡುಗಡೆ ಆಗಿರುವ ‘ಸರ್ಫಿರಾ’ ಟ್ರೇಲರ್​ ನೋಡಿದರೆ ‘ಸೂರರೈ ಪೋಟ್ರು’ ಸಿನಿಮಾದ ಪ್ರತಿ ಫ್ರೇಮ್​ ಕೂಡ ನೆನಪಾಗುತ್ತದೆ. ಮೇಕಿಂಗ್​ ದೃಷ್ಟಿಯಲ್ಲಿ ಹೆಚ್ಚೇನೂ ಬದಲಾವಣೆ ಆದಂತಿಲ್ಲ. ಒಟಿಟಿಯಲ್ಲಿ ಜನರು ಈಗಾಗಲೇ ನೋಡಿದ ಕಥೆಯನ್ನು ಮತ್ತೆ ಚಿತ್ರಮಂದಿರದಲ್ಲಿ ನೋಡಲು ಬರುತ್ತಾರಾ ಎಂಬುದು ಜುಲೈ 12ರಂದು ಗೊತ್ತಾಗಲಿದೆ. ಮೂಲ ಸಿನಿಮಾಗೆ ನಿರ್ದೇಶನ ಮಾಡಿದ್ದ ಸುಧಾ ಕೊಂಗರಾ ಅವರೇ ಈಗ ಹಿಂದಿ ರಿಮೇಕ್​ಗೂ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾದ ನಿರ್ಮಾಣದಲ್ಲಿ ಸೂರ್ಯ ಹಾಗೂ ಜ್ಯೋತಿಕಾ ಕೂಡ ಪಾಲುದಾರಿಕೆ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ