AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮನ ಆರಾಧಿಸುವವರಿಗೆ ದೊಡ್ಡ ದಿನ’; ಕಾರ್ಯಕ್ರಮ ಮಿಸ್ ಮಾಡಿಕೊಂಡು ಸಂದೇಶ ಕೊಟ್ಟ ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಅವರು ಹಲವು ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾರೆ. ಅವರಿಗೆ ಅಯೋಧ್ಯೆಗೆ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಆಗಮಿಸುತ್ತಿಲ್ಲ. ಈ ಬಗ್ಗೆ ಅವರು ವಿಡಿಯೋ ಮಾಡಿದ್ದಾರೆ.

‘ರಾಮನ ಆರಾಧಿಸುವವರಿಗೆ ದೊಡ್ಡ ದಿನ’; ಕಾರ್ಯಕ್ರಮ ಮಿಸ್ ಮಾಡಿಕೊಂಡು ಸಂದೇಶ ಕೊಟ್ಟ ಅಕ್ಷಯ್ ಕುಮಾರ್
ಅಕ್ಷಯ್​ ಕುಮಾರ್​
Follow us
ರಾಜೇಶ್ ದುಗ್ಗುಮನೆ
|

Updated on: Jan 22, 2024 | 12:36 PM

ಅಯೋಧ್ಯೆಯ (Ayodhye) ರಾಮ ಮಂದಿರದಲ್ಲಿ ನಡೆಯುತ್ತಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ನಟ ಅಕ್ಷಯ್ ಕುಮಾರ್ ಅವರಿಗೆ ಆಹ್ವಾನ ಸಿಕ್ಕಿತ್ತು. ಆದರೆ, ಶೂಟಿಂಗ್​ ಹಿನ್ನೆಲೆಯಲ್ಲಿ ಅವರಿಗೆ ಕಾರ್ಯಕ್ರಮದಲ್ಲಿ ಭಾಗಿ ಆಗೋಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಅವರು ಒಟ್ಟಾಗಿ ವಿಶ್ ಮಾಡಿದ್ದಾರೆ. ಅವರು ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದಾರೆ.

ಅಕ್ಷಯ್ ಕುಮಾರ್ ಅವರು ಹಲವು ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾರೆ. ಅವರಿಗೆ ಅಯೋಧ್ಯೆಗೆ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಆಗಮಿಸುತ್ತಿಲ್ಲ. ಈ ಬಗ್ಗೆ ಅವರು ವಿಡಿಯೋ ಮಾಡಿದ್ದಾರೆ. ‘ನಮ್ಮಿಬ್ಬರ ಕಡೆಯಿಂದ ಜೈ ಶ್ರೀ ರಾಮ್. ಇಂದು ರಾಮನ ಆರಾಧಿಸುವ ಎಲ್ಲರಿಗೂ ದೊಡ್ಡ ದಿನ. ಹಲವು ಶತಮಾನಗಳ ಬಳಿಕ ರಾಮ ಅಯೋಧ್ಯೆಗೆ ಮರಳುತ್ತಿದ್ದಾನೆ’ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ. ‘ಸಣ್ಣ ವಯಸ್ಸಿನಿಂದ ಈ ಬಗ್ಗೆ ಕೇಳುತ್ತಲೇ ಬರುತ್ತಿದ್ದೇವೆ. ಆ ಕ್ಷಣಕ್ಕೆ ನಾವು ಕಾಯುತ್ತಿದ್ದೇವೆ’ ಎಂದು ಟೈಗರ್ ಶ್ರಾಫ್ ಹೇಳಿದ್ದಾರೆ.

ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್, ರಣಬೀರ್ ಕಪೂರ್, ಆಲಿಯಾ ಭಟ್, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ರಜನಿಕಾಂತ್, ಅನುಪಮ್ ಖೇರ್, ಕಂಗನಾ ರಣಾವತ್ ಸೇರಿ ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ರಿಷಬ್ ಶೆಟ್ಟಿ, ನಿಖಿಲ್ ಕುಮಾರ್, ಚಿರಂಜೀವಿ, ರಾಮ್ ಚರಣ್ ಮೊದಲಾದವರು ಅಯೋಧ್ಯೆಗೆ ತೆರಳಿದ್ದಾರೆ.

ಇದನ್ನೂ ಓದಿ: 50ನೇ ವಯಸ್ಸಿಗೆ ಪದವಿ ಪಡೆದ ಟ್ವಿಂಕಲ್ ಖನ್ನಾ; ಅಕ್ಷಯ್ ಕುಮಾರ್​ಗೆ ಖುಷಿಯೋ ಖುಷಿ

ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟ್​ನಲ್ಲಿ ಇವರು ಬ್ಯುಸಿ ಇದ್ದಾರೆ. ಪೃಥ್ವಿರಾಜ್​ ಸುಕುಮಾರನ್ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ರಿಲೀಸ್​ಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ