AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮನ ಆರಾಧಿಸುವವರಿಗೆ ದೊಡ್ಡ ದಿನ’; ಕಾರ್ಯಕ್ರಮ ಮಿಸ್ ಮಾಡಿಕೊಂಡು ಸಂದೇಶ ಕೊಟ್ಟ ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಅವರು ಹಲವು ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾರೆ. ಅವರಿಗೆ ಅಯೋಧ್ಯೆಗೆ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಆಗಮಿಸುತ್ತಿಲ್ಲ. ಈ ಬಗ್ಗೆ ಅವರು ವಿಡಿಯೋ ಮಾಡಿದ್ದಾರೆ.

‘ರಾಮನ ಆರಾಧಿಸುವವರಿಗೆ ದೊಡ್ಡ ದಿನ’; ಕಾರ್ಯಕ್ರಮ ಮಿಸ್ ಮಾಡಿಕೊಂಡು ಸಂದೇಶ ಕೊಟ್ಟ ಅಕ್ಷಯ್ ಕುಮಾರ್
ಅಕ್ಷಯ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Jan 22, 2024 | 12:36 PM

Share

ಅಯೋಧ್ಯೆಯ (Ayodhye) ರಾಮ ಮಂದಿರದಲ್ಲಿ ನಡೆಯುತ್ತಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ನಟ ಅಕ್ಷಯ್ ಕುಮಾರ್ ಅವರಿಗೆ ಆಹ್ವಾನ ಸಿಕ್ಕಿತ್ತು. ಆದರೆ, ಶೂಟಿಂಗ್​ ಹಿನ್ನೆಲೆಯಲ್ಲಿ ಅವರಿಗೆ ಕಾರ್ಯಕ್ರಮದಲ್ಲಿ ಭಾಗಿ ಆಗೋಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಅವರು ಒಟ್ಟಾಗಿ ವಿಶ್ ಮಾಡಿದ್ದಾರೆ. ಅವರು ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದಾರೆ.

ಅಕ್ಷಯ್ ಕುಮಾರ್ ಅವರು ಹಲವು ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾರೆ. ಅವರಿಗೆ ಅಯೋಧ್ಯೆಗೆ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಆಗಮಿಸುತ್ತಿಲ್ಲ. ಈ ಬಗ್ಗೆ ಅವರು ವಿಡಿಯೋ ಮಾಡಿದ್ದಾರೆ. ‘ನಮ್ಮಿಬ್ಬರ ಕಡೆಯಿಂದ ಜೈ ಶ್ರೀ ರಾಮ್. ಇಂದು ರಾಮನ ಆರಾಧಿಸುವ ಎಲ್ಲರಿಗೂ ದೊಡ್ಡ ದಿನ. ಹಲವು ಶತಮಾನಗಳ ಬಳಿಕ ರಾಮ ಅಯೋಧ್ಯೆಗೆ ಮರಳುತ್ತಿದ್ದಾನೆ’ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ. ‘ಸಣ್ಣ ವಯಸ್ಸಿನಿಂದ ಈ ಬಗ್ಗೆ ಕೇಳುತ್ತಲೇ ಬರುತ್ತಿದ್ದೇವೆ. ಆ ಕ್ಷಣಕ್ಕೆ ನಾವು ಕಾಯುತ್ತಿದ್ದೇವೆ’ ಎಂದು ಟೈಗರ್ ಶ್ರಾಫ್ ಹೇಳಿದ್ದಾರೆ.

ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್, ರಣಬೀರ್ ಕಪೂರ್, ಆಲಿಯಾ ಭಟ್, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ರಜನಿಕಾಂತ್, ಅನುಪಮ್ ಖೇರ್, ಕಂಗನಾ ರಣಾವತ್ ಸೇರಿ ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ರಿಷಬ್ ಶೆಟ್ಟಿ, ನಿಖಿಲ್ ಕುಮಾರ್, ಚಿರಂಜೀವಿ, ರಾಮ್ ಚರಣ್ ಮೊದಲಾದವರು ಅಯೋಧ್ಯೆಗೆ ತೆರಳಿದ್ದಾರೆ.

ಇದನ್ನೂ ಓದಿ: 50ನೇ ವಯಸ್ಸಿಗೆ ಪದವಿ ಪಡೆದ ಟ್ವಿಂಕಲ್ ಖನ್ನಾ; ಅಕ್ಷಯ್ ಕುಮಾರ್​ಗೆ ಖುಷಿಯೋ ಖುಷಿ

ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟ್​ನಲ್ಲಿ ಇವರು ಬ್ಯುಸಿ ಇದ್ದಾರೆ. ಪೃಥ್ವಿರಾಜ್​ ಸುಕುಮಾರನ್ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ರಿಲೀಸ್​ಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು