AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಜ್​ ಚೋಪ್ರಾಗೆ ಸಿನಿಮಾ ಆಫರ್​; ಅಕ್ಷಯ್​ ಕುಮಾರ್ ಬಯೋಪಿಕ್​ ಬಗ್ಗೆ ಏನಿದು ಅಪ್​ಡೇಟ್​?

ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್​ ಕುಮಾರ್ ಆಯ್ದುಕೊಳ್ಳುವ ಸಿನಿಮಾಗಳಲ್ಲಿ ಮನರಂಜನೆ ಜತೆ ಒಂದೊಳ್ಳೆಯ ಸಂದೇಶ ಇರುತ್ತದೆ. ಅಕ್ಷಯ್​ ಕುಮಾರ್​ ಹಲವು ಬಯೋಪಿಕ್​ನಲ್ಲಿ ನಟಿಸಿದ್ದಾರೆ ಕೂಡ.

ನೀರಜ್​ ಚೋಪ್ರಾಗೆ ಸಿನಿಮಾ ಆಫರ್​; ಅಕ್ಷಯ್​ ಕುಮಾರ್ ಬಯೋಪಿಕ್​ ಬಗ್ಗೆ ಏನಿದು ಅಪ್​ಡೇಟ್​?
ನೀರಜ್​ ಚೋಪ್ರಾಗೆ ಸಿನಿಮಾ ಆಫರ್​; ಅಕ್ಷಯ್​ ಕುಮಾರ್ ಬಯೋಪಿಕ್​ ಬಗ್ಗೆ ಏನಿದು ಅಪ್​ಡೇಟ್​?
TV9 Web
| Edited By: |

Updated on: Aug 09, 2021 | 5:19 PM

Share

ಟೋಕಿಯೋ ಒಲಿಂಪಿಕ್ಸ್ -2020ರಲ್ಲಿ ನೀರಜ್ ಚೋಪ್ರಾ ಅವರು ಭಾರತವನ್ನು ಪ್ರತಿನಿಧಿಸಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ನೀರಜ್​ ಚೋಪ್ರಾ ಬಯೋಪಿಕ್​ಗೆ ನಟ ಅಕ್ಷಯ ಕುಮಾರ್​ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮೀಮ್​ಗಳು ಹರಿದಾಡಿದ್ದವು. ಆದರೆ, ಈ ವಿಚಾರದಲ್ಲಿ ಅಕ್ಷಯ್​ ಕುಮಾರ್​ ನೀಡಿದ ಹೇಳಿಕೆ ಭಿನ್ನವಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್​ ಕುಮಾರ್ ಆಯ್ದುಕೊಳ್ಳುವ ಸಿನಿಮಾಗಳಲ್ಲಿ ಮನರಂಜನೆ ಜತೆ ಒಂದೊಳ್ಳೆಯ ಸಂದೇಶ ಇರುತ್ತದೆ. ಅಕ್ಷಯ್​ ಕುಮಾರ್​ ಹಲವು ಬಯೋಪಿಕ್​ನಲ್ಲಿ ನಟಿಸಿದ್ದಾರೆ ಕೂಡ. ಈ ಎಲ್ಲಾ ಕಾರಣಕ್ಕೆ ಯಾವುದೇ ವ್ಯಕ್ತಿ ಕ್ರೀಡೆಯಲ್ಲಿ ಸಾಧನೆ ಮಾಡಿದರೆ, ಆ ವ್ಯಕ್ತಿಯ ಬಯೋಪಿಕ್​ನಲ್ಲಿ ಅಕ್ಷಯ್​ ನಟಿಸುತ್ತಾರೆ ಎನ್ನುವ ವಿಚಾರ ಮುನ್ನೆಲೆಗೆ ಬರುತ್ತದೆ.

ಈ ಬಾರಿ ನೀರಜ್​ ಒಲಂಪಿಕ್ಸ್​ನಲ್ಲಿ ಪದಕ ಗೆದ್ದಾಗ ಅಕ್ಷಯ್​ ಕುಮಾರ್​ ಅವರು ಜಾವೆಲಿನ್​ ಹಿಡಿದುಕೊಂಡಿದ್ದ ಹಳೆಯ ಫೋಟೋ ವೈರಲ್​ ಆಗಿತ್ತು. ನೀರಜ್​ ಬಯೋಪಿಕ್​ನಲ್ಲಿ ಅಕ್ಷಯ್​ ಕುಮಾರ್​ ನಟಿಸುತ್ತಿದ್ದಾರೆ ಎಂದು ಕೆಲವರು ಟ್ರೋಲ್​ ಮಾಡಿದ್ದರು. ಈ ಬಗ್ಗೆ ಅಕ್ಷಯ್​ ಪ್ರತಿಕ್ರಿಯೆ ನೀಡಿದ್ದಾರೆ.

‘ನೀರಜ್​ ಚೋಪ್ರಾ ಬಯೋಪಿಕ್​ಗೆ ಅಕ್ಷಯ್​ ತರಬೇತಿ ಆರಂಭಿಸಿದರು ಎಂದು ಕೆಲವರು ಹೇಳುತ್ತಿದ್ದಾರೆ. ಇದು ಸಾಕಷ್ಟು ಫನ್ನಿ ಎಂದು ನನಗನ್ನಿಸುತ್ತದೆ. ವೈರಲ್​ ಆದ ಫೋಟೋ ನನ್ನ ಮೊದಲ ಚಿತ್ರ ‘ಸೌಗಂಧ್​’ ಹಾಡೊಂದರಲ್ಲಿ ಬರುವ ದೃಶ್ಯ ಅದು. ನೀರಜ್​ ಸುಂದರವಾಗಿದ್ದಾರೆ. ನನ್ನ ಬಯೋಪಿಕ್​ನಲ್ಲಿ ಯಾರಾದರೂ ನಟಿಸಬೇಕು ಎಂದರೆ ಅದು ನೀರಜ್​’ ಎಂದು ನಕ್ಕಿದ್ದಾರೆ ಅಕ್ಷಯ್​ ಕುಮಾರ್.

ಅಕ್ಷಯ್ ಕುಮಾರ್​ ನಟನೆಯ ‘ಬೆಲ್​ ಬಾಟಂ’ ಚಿತ್ರ ಕೂಡ ಬಿಡುಗಡೆಗೆ ಸಜ್ಜಾಗಿದೆ. ಅತರಂಗಿ ರೇ, ರಾಮ್​ ಸೇತು, ರಕ್ಷಾ ಬಂದನ್​, ಬಚ್ಚನ್​ ಪಾಂಡೆ ಸೇರಿದಂತೆ ಹಲವಾರು ಸಿನಿಮಾಗಳು ಅಕ್ಷಯ್​ ಕುಮಾರ್​ ಕೈಯಲ್ಲಿವೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೆ ಅಕ್ಷಯ್​ ಕುಮಾರ್​ ಕಡೆಯಿಂದ ಸಿಗಲಿದೆ ಗಿಫ್ಟ್​; ಲೀಕ್​ ಆಯ್ತು ಬಿಗ್​ ನ್ಯೂಸ್​

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ