AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೀನಾಯ ಕಲೆಕ್ಷನ್ ಮಾಡಿದ ಅಕ್ಷಯ್ ಸಿನಿಮಾ; ಸೋಲಿನ ಸಾಲಲ್ಲಿ ಹತ್ತರ ಜೊತೆ ಮತ್ತೊಂದು

ತಮ್ಮ ಸೋಲಿನ ಬಗ್ಗೆ ಅಕ್ಷಯ್ ಕುಮಾರ್ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡುತ್ತಿದ್ದಾರೆ. ತಮ್ಮ ಶ್ರಮ ಇದೆ ಆದರೆ ಗೆಲುವು ಸಿಗುತ್ತಿಲ್ಲ ಅನ್ನೋದು ಅವರ ವಾದ. ಈಗ ಈ ವರ್ಷ ರಿಲೀಸ್ ಆದ ಅವರ ಮೂರನೇ ಸಿನಿಮಾ ಕೂಡ ಸೋತು ಹೋಗಿದೆ.

ಮತ್ತೆ ಹೀನಾಯ ಕಲೆಕ್ಷನ್ ಮಾಡಿದ ಅಕ್ಷಯ್ ಸಿನಿಮಾ; ಸೋಲಿನ ಸಾಲಲ್ಲಿ ಹತ್ತರ ಜೊತೆ ಮತ್ತೊಂದು
ಅಕ್ಷಯ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Aug 19, 2024 | 8:12 AM

Share

ಅಕ್ಷಯ್ ಕುಮಾರ್​ಗೆ ಯಾಕೋ ಅದೃಷ್ಟ ಕೈ ಹಿಡಿಯುವ ರೀತಿ ಕಾಣಿಸುತ್ತಿಲ್ಲ. ಸೋಲು ಬೆಂಬಿಡದೆ ಅವರನ್ನು ಕಾಡುತ್ತಿದೆ. ಮಾಡಿದ ಪ್ರತಿ ಸಿನಿಮಾ ಸೋಲುತ್ತಿದೆ. ಅವರ ಸಿನಿಮಾಗಳ ಬಗ್ಗೆ ಜನರು ಆಸಕ್ತಿಯನ್ನೇ ಕಳೆದುಕೊಂಡರೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ. ಈಗ ಅವರ ನಟನೆಯ ‘ಖೇಲ್ ಖೇಲ್ ಮೇ’ ಸಿನಿಮಾ ಕೂಡ ಸೋಲುವ ಭಿತಿಯಲ್ಲಿ ಇದೆ. ಅತ್ತ ‘ಸ್ತ್ರಿ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಕ್ಲಬ್ ಸೇರುವ ಸನಿಹದಲ್ಲಿ ಇದ್ದರೆ ಅಕ್ಷಯ್ ಕುಮಾರ್ ಚಿತ್ರ 15 ಕೋಟಿ ರೂಪಾಯಿ ಗಳಿಸಲು ಒದ್ದಾಡುತ್ತಿದೆ.

ಆಗಸ್ಟ್ 15ರ ಪ್ರಯುಕ್ತ ‘ಖೇಲ್ ಖೇಲ್ ಮೇ’ ಚಿತ್ರ ರಿಲೀಸ್ ಆಗಿದೆ. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 5 ಕೋಟಿ ರೂಪಾಯಿ. ಆ ಬಳಿಕ ಎರಡನೇ ದಿನ 2 ಕೋಟಿ ರೂಪಾಯಿ, ಮೂರನೇ ದಿನ 3.1 ಕೋಟಿ ರೂಪಾಯಿ ಹಾಗೂ ನಾಲ್ಕನೇ ದಿನ 3.75 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಒಟ್ಟಾರೆ ಗಳಿಕೆ 13.95 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಸಿನಿಮಾದ ಒಟ್ಟಾರೆ ಗಳಿಕೆ ನಾಲ್ಕು ದಿನಗಳಲ್ಲಿ 15 ಕೋಟಿ ತಲುಪೋದು ಕಷ್ಟ ಆಗಿದೆ ಅನ್ನೋದು ಬೇಸರದ ಸಂಗತಿ.

ಅಕ್ಷಯ್ ಕುಮಾರ್ ಅವರು ಪ್ರತಿ ಚಿತ್ರಕ್ಕೆ 50-60 ಕೋಟಿ ರೂಪಾಯಿ ಪಡೆಯುತ್ತಾರೆ. ಆದರೆ, ಅವರ ಸಿನಿಮಾ ಅಕ್ಷಯ್ ಕುಮಾರ್ ಸಂಭಾವನೆಯ ಅರ್ಧದಷ್ಟೂ ಗಳಿಕೆ ಮಾಡುತ್ತಿಲ್ಲ. ಈ ವರ್ಷ ರಿಲೀಸ್ ಆದ ಅವರ ನಟನೆಯ ಮೂರನೇ ಸಿನಿಮಾ ಇದು. ಈ ಚಿತ್ರವೂ ಸೋಲಿನ ಸುಳಿಯಲ್ಲಿ ಸಿಕ್ಕಿ ಒದ್ದಾಡುತ್ತಿದೆ. ಈ ಮೊದಲು ‘ಬಡೇ ಮಿಯಾ ಚೋಟೆ ಮಿಯಾ’, ‘ಸರ್ಫಿರಾ’ ಸಿನಿಮಾಗಳು ರಿಲೀಸ್ ಆಗಿ ಸೋತಿವೆ.

ಇದನ್ನೂ ಓದಿ: ಅಕ್ಷಯ್ ಕುಮಾರ್ ಸಿನಿಮಾ ಆಯ್ಕೆ ಬಗ್ಗೆ ಆಪ್ತರಿಂದಲೇ ಮೂಡಿದೆ ಪ್ರಶ್ನೆ; ಬೇಸರ ಹೊರಹಾಕಿದ ನಟ

2020ರಿಂದ ಈಚೆ ಅವರ ನಟನೆಯ ಬಹುತೇಕ ಸಿನಿಮಾಗಳು ಸೋತಿವೆ. ‘ಲಕ್ಷ್ಮಿ’, ‘ಬೆಲ್ ಬಾಟಂ’, ‘ಅತ್ರಂಗಿ ರೇ’, ‘ಬಚ್ಚನ್ ಪಾಂಡೆ’, ‘ಸಾಮ್ರಾಟ್ ಪೃಥ್ವಿರಾಜ್’, ‘ರಕ್ಷಾ ಬಂಧನ್’, ‘ಕಟ್​ಪುಟ್ಲಿ’, ‘ರಾಮ್ ಸೇತು’, ‘ಸೆಲ್ಫೀ’, ‘ಮಿಷನ್ ರಾಣಿಗಂಜ್’, ‘ಬಡೇ ಮಿಯಾ ಚೋಟೆ ಮಿಯಾ’, ‘ಸರ್ಫಿರಾ’ ಸೋತ ಸಿನಿಮಾಗಳ ಸಾಲಿನಲ್ಲಿ ನಿಂತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ