AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೀನಾಯ ಕಲೆಕ್ಷನ್ ಮಾಡಿದ ಅಕ್ಷಯ್ ಸಿನಿಮಾ; ಸೋಲಿನ ಸಾಲಲ್ಲಿ ಹತ್ತರ ಜೊತೆ ಮತ್ತೊಂದು

ತಮ್ಮ ಸೋಲಿನ ಬಗ್ಗೆ ಅಕ್ಷಯ್ ಕುಮಾರ್ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡುತ್ತಿದ್ದಾರೆ. ತಮ್ಮ ಶ್ರಮ ಇದೆ ಆದರೆ ಗೆಲುವು ಸಿಗುತ್ತಿಲ್ಲ ಅನ್ನೋದು ಅವರ ವಾದ. ಈಗ ಈ ವರ್ಷ ರಿಲೀಸ್ ಆದ ಅವರ ಮೂರನೇ ಸಿನಿಮಾ ಕೂಡ ಸೋತು ಹೋಗಿದೆ.

ಮತ್ತೆ ಹೀನಾಯ ಕಲೆಕ್ಷನ್ ಮಾಡಿದ ಅಕ್ಷಯ್ ಸಿನಿಮಾ; ಸೋಲಿನ ಸಾಲಲ್ಲಿ ಹತ್ತರ ಜೊತೆ ಮತ್ತೊಂದು
ಅಕ್ಷಯ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Aug 19, 2024 | 8:12 AM

Share

ಅಕ್ಷಯ್ ಕುಮಾರ್​ಗೆ ಯಾಕೋ ಅದೃಷ್ಟ ಕೈ ಹಿಡಿಯುವ ರೀತಿ ಕಾಣಿಸುತ್ತಿಲ್ಲ. ಸೋಲು ಬೆಂಬಿಡದೆ ಅವರನ್ನು ಕಾಡುತ್ತಿದೆ. ಮಾಡಿದ ಪ್ರತಿ ಸಿನಿಮಾ ಸೋಲುತ್ತಿದೆ. ಅವರ ಸಿನಿಮಾಗಳ ಬಗ್ಗೆ ಜನರು ಆಸಕ್ತಿಯನ್ನೇ ಕಳೆದುಕೊಂಡರೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ. ಈಗ ಅವರ ನಟನೆಯ ‘ಖೇಲ್ ಖೇಲ್ ಮೇ’ ಸಿನಿಮಾ ಕೂಡ ಸೋಲುವ ಭಿತಿಯಲ್ಲಿ ಇದೆ. ಅತ್ತ ‘ಸ್ತ್ರಿ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಕ್ಲಬ್ ಸೇರುವ ಸನಿಹದಲ್ಲಿ ಇದ್ದರೆ ಅಕ್ಷಯ್ ಕುಮಾರ್ ಚಿತ್ರ 15 ಕೋಟಿ ರೂಪಾಯಿ ಗಳಿಸಲು ಒದ್ದಾಡುತ್ತಿದೆ.

ಆಗಸ್ಟ್ 15ರ ಪ್ರಯುಕ್ತ ‘ಖೇಲ್ ಖೇಲ್ ಮೇ’ ಚಿತ್ರ ರಿಲೀಸ್ ಆಗಿದೆ. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 5 ಕೋಟಿ ರೂಪಾಯಿ. ಆ ಬಳಿಕ ಎರಡನೇ ದಿನ 2 ಕೋಟಿ ರೂಪಾಯಿ, ಮೂರನೇ ದಿನ 3.1 ಕೋಟಿ ರೂಪಾಯಿ ಹಾಗೂ ನಾಲ್ಕನೇ ದಿನ 3.75 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಒಟ್ಟಾರೆ ಗಳಿಕೆ 13.95 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಸಿನಿಮಾದ ಒಟ್ಟಾರೆ ಗಳಿಕೆ ನಾಲ್ಕು ದಿನಗಳಲ್ಲಿ 15 ಕೋಟಿ ತಲುಪೋದು ಕಷ್ಟ ಆಗಿದೆ ಅನ್ನೋದು ಬೇಸರದ ಸಂಗತಿ.

ಅಕ್ಷಯ್ ಕುಮಾರ್ ಅವರು ಪ್ರತಿ ಚಿತ್ರಕ್ಕೆ 50-60 ಕೋಟಿ ರೂಪಾಯಿ ಪಡೆಯುತ್ತಾರೆ. ಆದರೆ, ಅವರ ಸಿನಿಮಾ ಅಕ್ಷಯ್ ಕುಮಾರ್ ಸಂಭಾವನೆಯ ಅರ್ಧದಷ್ಟೂ ಗಳಿಕೆ ಮಾಡುತ್ತಿಲ್ಲ. ಈ ವರ್ಷ ರಿಲೀಸ್ ಆದ ಅವರ ನಟನೆಯ ಮೂರನೇ ಸಿನಿಮಾ ಇದು. ಈ ಚಿತ್ರವೂ ಸೋಲಿನ ಸುಳಿಯಲ್ಲಿ ಸಿಕ್ಕಿ ಒದ್ದಾಡುತ್ತಿದೆ. ಈ ಮೊದಲು ‘ಬಡೇ ಮಿಯಾ ಚೋಟೆ ಮಿಯಾ’, ‘ಸರ್ಫಿರಾ’ ಸಿನಿಮಾಗಳು ರಿಲೀಸ್ ಆಗಿ ಸೋತಿವೆ.

ಇದನ್ನೂ ಓದಿ: ಅಕ್ಷಯ್ ಕುಮಾರ್ ಸಿನಿಮಾ ಆಯ್ಕೆ ಬಗ್ಗೆ ಆಪ್ತರಿಂದಲೇ ಮೂಡಿದೆ ಪ್ರಶ್ನೆ; ಬೇಸರ ಹೊರಹಾಕಿದ ನಟ

2020ರಿಂದ ಈಚೆ ಅವರ ನಟನೆಯ ಬಹುತೇಕ ಸಿನಿಮಾಗಳು ಸೋತಿವೆ. ‘ಲಕ್ಷ್ಮಿ’, ‘ಬೆಲ್ ಬಾಟಂ’, ‘ಅತ್ರಂಗಿ ರೇ’, ‘ಬಚ್ಚನ್ ಪಾಂಡೆ’, ‘ಸಾಮ್ರಾಟ್ ಪೃಥ್ವಿರಾಜ್’, ‘ರಕ್ಷಾ ಬಂಧನ್’, ‘ಕಟ್​ಪುಟ್ಲಿ’, ‘ರಾಮ್ ಸೇತು’, ‘ಸೆಲ್ಫೀ’, ‘ಮಿಷನ್ ರಾಣಿಗಂಜ್’, ‘ಬಡೇ ಮಿಯಾ ಚೋಟೆ ಮಿಯಾ’, ‘ಸರ್ಫಿರಾ’ ಸೋತ ಸಿನಿಮಾಗಳ ಸಾಲಿನಲ್ಲಿ ನಿಂತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ