AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕೋಟಿ ರೂ. ಸಂಭಾವನೆ ಪಡೆಯುವ ಬಗ್ಗೆ ನಟ ಅಕ್ಷಯ್ ಕುಮಾರ್​​ ಅಭಿಪ್ರಾಯ ಏನು?

ಅಕ್ಷಯ್ ಕುಮಾರ್ ನಟನೆಯ ಸಿನಿಮಾಗಳು ಗೆಲುವು ಕಾಣುತ್ತಿಲ್ಲ. ಅಕ್ಷಯ್ ಕುಮಾರ್ ಸಂಭಾವನೆಯನ್ನು ಭರಿಸೋದು ಅನೇಕ ನಿರ್ಮಾಪಕರಿಗೆ ಕಷ್ಟ ಆಗುತ್ತಿದೆ.

100 ಕೋಟಿ ರೂ. ಸಂಭಾವನೆ ಪಡೆಯುವ ಬಗ್ಗೆ ನಟ ಅಕ್ಷಯ್ ಕುಮಾರ್​​ ಅಭಿಪ್ರಾಯ ಏನು?
ಅಕ್ಷಯ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Jan 23, 2023 | 5:54 PM

Share

ಅಕ್ಷಯ್ ಕುಮಾರ್ (Akshay Kumar) ಅವರು ಬಾಲಿವುಡ್​ನ ಬೇಡಿಕೆಯ ನಟ. ಅವರ ಸಿನಿಮಾಗೆ ಬಂಡವಾಳ ಹೂಡಿದರೆ ನಷ್ಟ ಆಗುವುದಿಲ್ಲ ಎಂಬ ಅಭಿಪ್ರಾಯ ಇತ್ತು. ಆದರೆ, ಇತ್ತೀಚೆಗೆ ಈ ಅಭಿಪ್ರಾಯ ಬದಲಾಗಿದೆ. ಅವರ ಸಿನಿಮಾಗಳು ಸತತವಾಗಿ ಸೋಲು ಕಾಣುತ್ತಿವೆ. ಆದರೆ, ಅಕ್ಷಯ್ ಕುಮಾರ್ ಅವರು ಪಡೆಯುವ ಸಂಭಾವನೆ ಕಡಿಮೆ ಆಗಿಲ್ಲ. ಪ್ರತಿ ಚಿತ್ರಕ್ಕೆ ಅವರು 50-100 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಈ ಬಗ್ಗೆ ಅಕ್ಷಯ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಅಕ್ಷಯ್ ಕುಮಾರ್ ನಟನೆಯ ಸಿನಿಮಾಗಳು ಗೆಲುವು ಕಾಣುತ್ತಿಲ್ಲ. ಅಕ್ಷಯ್ ಕುಮಾರ್ ಸಂಭಾವನೆಯನ್ನು ಭರಿಸೋದು ಅನೇಕ ನಿರ್ಮಾಪಕರಿಗೆ ಕಷ್ಟ ಆಗುತ್ತಿದೆ. ಆದರೆ, ಅಕ್ಷಯ್ ಕುಮಾರ್ ಅವರು ಸಂಭಾವನೆ ಕಡಿಮೆ ಮಾಡಿಕೊಂಡಿಲ್ಲ. ಇದೇ ಕಾರಣಕ್ಕೆ ಅನೇಕ ನಿರ್ಮಾಪಕರು ಅಕ್ಷಯ್ ಜತೆ ಸಿನಿಮಾ ಮಾಡೋಕೆ ಹಿಂದೇಟು ಹಾಕುತ್ತಿದ್ದಾರೆ. 100 ಕೋಟಿ ಸಂಭಾವನೆ ಬಗ್ಗೆ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ.

ಅಕ್ಷಯ್ ಕುಮಾರ್ ಅವರು ‘ಸೆಲ್ಫಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಈ ಚಿತ್ರದಲ್ಲಿ ಸೂಪರ್​ಸ್ಟಾರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಮ್ರಾನ್ ಹಶ್ಮಿ ಅವರು ಪೊಲೀಸ್ ಅಧಿಕಾರಿ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್ ಲಾಂಚ್​ ವೇಳೆ ಸಂಭಾವನೆ ಬಗ್ಗೆ ಅವರ ಪ್ರತಿಕ್ರಿಯೆ ಕೇಳಲಾಯಿತು. ‘ನನ್ನ ಪ್ರತಿಕ್ರಿಯೆ ಯಾವಾಗಲೂ ಉತ್ತಮವಾಗಿರುತ್ತದೆ’ ಎಂದಷ್ಟೇ ಅಕ್ಷಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ
Image
Akshay Kumar: ಖ್ಯಾತ ನಿರ್ಮಾಪಕನ ಚಿತ್ರದಿಂದ ಅಕ್ಷಯ್ ಕುಮಾರ್ ಔಟ್​; ಕೈತಪ್ಪಿತು ದೊಡ್ಡ ಬಜೆಟ್ ಸಿನಿಮಾ
Image
Akshay Kumar: ಛತ್ರಪತಿ ಶಿವಾಜಿ ಪಾತ್ರದಲ್ಲಿ ಅಕ್ಷಯ್ ಕುಮಾರ್​; ಮರಾಠಿ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ

ಇದನ್ನೂ ಓದಿ: Akshay Kumar: ಖ್ಯಾತ ನಿರ್ಮಾಪಕನ ಚಿತ್ರದಿಂದ ಅಕ್ಷಯ್ ಕುಮಾರ್ ಔಟ್​; ಕೈತಪ್ಪಿತು ದೊಡ್ಡ ಬಜೆಟ್ ಸಿನಿಮಾ

ಈ ಮೊದಲು ಮಾತನಾಡಿದ್ದ ಅಕ್ಷಯ್ ಕುಮಾರ್ ಅವರು ತಮ್ಮ ಸಂಭಾವನೆಯಲ್ಲಿ ಶೇ. 30-40 ಸಂಭಾವನೆಯನ್ನು ತಗ್ಗಿಸಿಕೊಳ್ಳುವುದಾಗಿ ಹೇಳಿದ್ದರು. ಇದನ್ನು ಅವರು ಜಾರಿಗೆ ತಂದಿದ್ದಾರೋ ಅಥವಾ ಇಲ್ಲವೋ ತಿಳಿದಿಲ್ಲ.

‘ಸೆಲ್ಫಿ’ ಸಿನಿಮಾ ಫೆಬ್ರವರಿ 24ರಂದು ಚಿತ್ರಮಂದಿರದಲ್ಲಿ ರಿಲೀಸ್ ಆಗುತ್ತಿದೆ. 2022ರಲ್ಲಿ ಅಕ್ಷಯ್ ಕುಮಾರ್ ನಟನೆಯ ಸಿನಿಮಾಗಳು ಉತ್ತಮ ಬಿಸ್ನೆಸ್ ಮಾಡಿಲ್ಲ. ಈ ವರ್ಷ ಅವರ ನಟನೆಯ ಹಲವು ಸಿನಿಮಾಗಳು ರಿಲೀಸ್​ಗೆ ರೆಡಿ ಇವೆ. ಅವು ಉತ್ತಮ ರೀತಿಯಲ್ಲಿ ಕಲೆಕ್ಷನ್​ ಮಾಡಲಿವೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು