AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣದ ಸೂಪರ್ ಹಿಟ್ ಕಾಮಿಡಿ ಚಿತ್ರದ ಹಿಂದಿ ರಿಮೇಕ್​ನಲ್ಲಿ ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಇತ್ತೀಚಿನ ಗಂಭೀರ ಚಿತ್ರಗಳ ರಿಮೇಕ್‌ಗಳು ಯಶಸ್ಸು ಕಾಣದ ಹಿನ್ನೆಲೆಯಲ್ಲಿ ಈಗ ದಕ್ಷಿಣದ ಹಿಟ್ ಕಾಮಿಡಿ ‘ಸಂಕ್ರಾಂತಿಕಿ ವಸ್ತುನ್ನಾಮ್’ ಚಿತ್ರವನ್ನು ರಿಮೇಕ್ ಮಾಡಲು ಮುಂದಾಗಿದ್ದಾರೆ. ವಿಕ್ಟರಿ ವೆಂಕಟೇಶ್ ನಟಿಸಿದ್ದ, ದಿಲ್ ರಾಜು ನಿರ್ಮಿಸಿದ್ದ ಈ ತೆಲುಗು ಚಿತ್ರ 280 ಕೋಟಿ ರೂ. ಗಳಿಸಿತ್ತು. ಅನೀಸ್ ಬಾಜ್ಮೀ ನಿರ್ದೇಶನದಲ್ಲಿ ಸಿದ್ಧವಾಗಲಿರುವ ಈ ಹಾಸ್ಯ ಚಿತ್ರ ಅಕ್ಷಯ್‌ಗೆ ಮತ್ತೆ ಗೆಲುವು ತಂದುಕೊಡುವ ನಿರೀಕ್ಷೆಯಿದೆ.

ದಕ್ಷಿಣದ ಸೂಪರ್ ಹಿಟ್ ಕಾಮಿಡಿ ಚಿತ್ರದ ಹಿಂದಿ ರಿಮೇಕ್​ನಲ್ಲಿ ಅಕ್ಷಯ್ ಕುಮಾರ್
ಅಕ್ಷಯ್
ರಾಜೇಶ್ ದುಗ್ಗುಮನೆ
|

Updated on:Oct 14, 2025 | 10:56 AM

Share

ಅಕ್ಷಯ್ ಕುಮಾರ್ (Akshay Kumar) ಅವರು ಬಾಲಿವುಡ್​ನ ಸೂಪರ್ ಸ್ಟಾರ್. ಹಲವು ಚಿತ್ರಗಳನ್ನು ಅವರು ರಿಮೇಕ್ ಮಾಡಿದ್ದಾರೆ. ಕೆಲವು ಸಿನಿಮಾಗಳು ಯಶಸ್ಸು ಕಂಡರೆ, ಇನ್ನೂ ಕೆಲವು ಸಿನಿಮಾಗಳು ಫ್ಲಾಪ್ ಆಗಿವೆ. ಈಗ ದಕ್ಷಿಣದ ಸೂಪರ್ ಹಿಟ್ ಕಾಮಿಡಿ ಚಿತ್ರವನ್ನು ರಿಮೇಕ್ ಮಾಡಲು ಅಕ್ಷಯ್ ಕುಮಾರ್ ಮುಂದಾಗಿದ್ದಾರೆ. ಇದು ಹಾಸ್ಯ ಚಿತ್ರ ಆಗಿರುವುದರಿಂದ ಅಕ್ಷಯ್​ಗೆ ಗೆಲುವು ಸಿಗುವ ನಿರೀಕ್ಷೆ ಇದೆ.

ಅಕ್ಷಯ್ ಕುಮಾರ್ ಅವರು ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ ನಿಜ. ಆದರೆ, ಇತ್ತೀಚೆಗೆ ಅವರಿಗೆ ಗೆಲುವು ಸಿಗುತ್ತಿಲ್ಲ. ಅಂದುಕೊಂಡಂತೆ ಸಿನಿಮಾ ಯಶಸ್ಸು ಕಾಣುತ್ತಿಲ್ಲ. ಈ ಬಗ್ಗೆ ಅಕ್ಷಯ್​ಗೆ ಬೇಸರ ಇದೆ. ಆದರೆ, ಅವರು ರಿಮೇಕ್ ಮಾಡೋದನ್ನು ಮಾತ್ರ ನಿಲ್ಲಿಸುತ್ತಿಲ್ಲ. ದಕ್ಷಿಣದಲ್ಲಿ ಹಿಟ್ ಆದ ಹಲವು ಚಿತ್ರಗಳನ್ನು ಬಾಲಿವುಡ್​ನಲ್ಲಿ ಟ್ರೈ ಮಾಡಿದ್ದಾರೆ. ಈಗ ‘ಸಂಕ್ರಾಂತಿಕಿ ವಸ್ತುನ್ನಾಮ್’ ಸಿನಿಮಾ ರಿಮೇಕ್​ನಲ್ಲಿ ಅವರು ನಟಿಸುತ್ತಿದ್ದಾರೆ.

‘ಸಂಕ್ರಾಂತಿಕಿ ವಸ್ತುನ್ನಾಮ್’ ಸಿನಿಮಾ ತೆಲುಗಿನ ಸೂಪರ್ ಹಿಟ್ ಚಿತ್ರಗಳಲ್ಲಿ ಒಂದು. ವಿಕ್ಟರಿ ವೆಂಕಟೇಶ್ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಸಖತ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿತ್ತು. ಈ ಚಿತ್ರವನ್ನು ದಿಲ್ ರಾಜು ನಿರ್ಮಾಣ ಮಾಡಿದ್ದರು. ಈ ಸಿನಿಮಾ ಜನವರಿಯಲ್ಲಿ ರಿಲೀಸ್ ಆಗಿ 280 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 2’ ಯಾವಾಗ? ಕೊನೆಗೂ ಉತ್ತರಿಸಿದ ರಿಷಬ್ ಶೆಟ್ಟಿ
Image
ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕಾವ್ಯಾ ಕಣ್ಣಿಗೆ ಹೆದರಿದ ಗಿಲ್ಲಿ
Image
ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ

ಈ ಚಿತ್ರ ಹಿಂದಿಗೆ ರಿಮೇಕ್ ಆಗುತ್ತಿದೆ. ವಿಕ್ಟರಿ ವೆಂಕಟೇಶ್ ಮಾಡಿದ್ದ ಪಾತ್ರವನ್ನು ಅಕ್ಷಯ್ ಕುಮಾರ್ ಮಾಡಲಿದ್ದಾರೆ. ‘ವೆಲ್​ಕಮ್’, ‘ಭೂಲ್​ ಭುಲಯ್ಯ’ ರೀತಿಯ ಸಿನಿಮಾ ನಿರ್ದೇಶನ ಮಾಡಿದ್ದ ಅನೀಸ್ ಬಾಜ್ಮೀ ಅವರು ಈ ಚಿತ್ರ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರವನ್ನು ಹಿಂದಿಯಲ್ಲಿ ದಿಲ್ ರಾಜು ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಇಬ್ಬರು ನಾಯಕಿಯರು ಬೇಕು. ಹೀಗಾಗಿ, ಅದರ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ: ಬದಲಾಗೋದೇ ಇಲ್ಲ ಅಕ್ಷಯ್ ಕುಮಾರ್ ಅದೃಷ್ಟ; ಹೊಸ ಚಿತ್ರ, ಮತ್ತದೇ ಹೀನಾಯ ಕಲೆಕ್ಷನ್

ಅಕ್ಷಯ್ ಕುಮಾರ್ ಇತ್ತೀಚೆಗೆ ಗಂಭೀರ ಸಿನಿಮಾಗಳನ್ನೇ ಹೆಚ್ಚು ರಿಮೇಕ್ ಮಾಡುತ್ತಿದ್ದಾರೆ. ಆದರೆ, ಅದು ಯಶಸ್ಸು ಕಾಣುತ್ತಿಲ್ಲ. ಹೀಗಾಗಿ, ಅಕ್ಷಯ್ ಕುಮಾರ್ ಅವರು ಹಾಸ್ಯ ಪಾತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಇದು ಕೈ ಹಿಡಿಯೋ ಸೂಚನೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:02 am, Tue, 14 October 25

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು