AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣದ ಸೂಪರ್ ಹಿಟ್ ಕಾಮಿಡಿ ಚಿತ್ರದ ಹಿಂದಿ ರಿಮೇಕ್​ನಲ್ಲಿ ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಇತ್ತೀಚಿನ ಗಂಭೀರ ಚಿತ್ರಗಳ ರಿಮೇಕ್‌ಗಳು ಯಶಸ್ಸು ಕಾಣದ ಹಿನ್ನೆಲೆಯಲ್ಲಿ ಈಗ ದಕ್ಷಿಣದ ಹಿಟ್ ಕಾಮಿಡಿ ‘ಸಂಕ್ರಾಂತಿಕಿ ವಸ್ತುನ್ನಾಮ್’ ಚಿತ್ರವನ್ನು ರಿಮೇಕ್ ಮಾಡಲು ಮುಂದಾಗಿದ್ದಾರೆ. ವಿಕ್ಟರಿ ವೆಂಕಟೇಶ್ ನಟಿಸಿದ್ದ, ದಿಲ್ ರಾಜು ನಿರ್ಮಿಸಿದ್ದ ಈ ತೆಲುಗು ಚಿತ್ರ 280 ಕೋಟಿ ರೂ. ಗಳಿಸಿತ್ತು. ಅನೀಸ್ ಬಾಜ್ಮೀ ನಿರ್ದೇಶನದಲ್ಲಿ ಸಿದ್ಧವಾಗಲಿರುವ ಈ ಹಾಸ್ಯ ಚಿತ್ರ ಅಕ್ಷಯ್‌ಗೆ ಮತ್ತೆ ಗೆಲುವು ತಂದುಕೊಡುವ ನಿರೀಕ್ಷೆಯಿದೆ.

ದಕ್ಷಿಣದ ಸೂಪರ್ ಹಿಟ್ ಕಾಮಿಡಿ ಚಿತ್ರದ ಹಿಂದಿ ರಿಮೇಕ್​ನಲ್ಲಿ ಅಕ್ಷಯ್ ಕುಮಾರ್
ಅಕ್ಷಯ್
ರಾಜೇಶ್ ದುಗ್ಗುಮನೆ
|

Updated on:Oct 14, 2025 | 10:56 AM

Share

ಅಕ್ಷಯ್ ಕುಮಾರ್ (Akshay Kumar) ಅವರು ಬಾಲಿವುಡ್​ನ ಸೂಪರ್ ಸ್ಟಾರ್. ಹಲವು ಚಿತ್ರಗಳನ್ನು ಅವರು ರಿಮೇಕ್ ಮಾಡಿದ್ದಾರೆ. ಕೆಲವು ಸಿನಿಮಾಗಳು ಯಶಸ್ಸು ಕಂಡರೆ, ಇನ್ನೂ ಕೆಲವು ಸಿನಿಮಾಗಳು ಫ್ಲಾಪ್ ಆಗಿವೆ. ಈಗ ದಕ್ಷಿಣದ ಸೂಪರ್ ಹಿಟ್ ಕಾಮಿಡಿ ಚಿತ್ರವನ್ನು ರಿಮೇಕ್ ಮಾಡಲು ಅಕ್ಷಯ್ ಕುಮಾರ್ ಮುಂದಾಗಿದ್ದಾರೆ. ಇದು ಹಾಸ್ಯ ಚಿತ್ರ ಆಗಿರುವುದರಿಂದ ಅಕ್ಷಯ್​ಗೆ ಗೆಲುವು ಸಿಗುವ ನಿರೀಕ್ಷೆ ಇದೆ.

ಅಕ್ಷಯ್ ಕುಮಾರ್ ಅವರು ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ ನಿಜ. ಆದರೆ, ಇತ್ತೀಚೆಗೆ ಅವರಿಗೆ ಗೆಲುವು ಸಿಗುತ್ತಿಲ್ಲ. ಅಂದುಕೊಂಡಂತೆ ಸಿನಿಮಾ ಯಶಸ್ಸು ಕಾಣುತ್ತಿಲ್ಲ. ಈ ಬಗ್ಗೆ ಅಕ್ಷಯ್​ಗೆ ಬೇಸರ ಇದೆ. ಆದರೆ, ಅವರು ರಿಮೇಕ್ ಮಾಡೋದನ್ನು ಮಾತ್ರ ನಿಲ್ಲಿಸುತ್ತಿಲ್ಲ. ದಕ್ಷಿಣದಲ್ಲಿ ಹಿಟ್ ಆದ ಹಲವು ಚಿತ್ರಗಳನ್ನು ಬಾಲಿವುಡ್​ನಲ್ಲಿ ಟ್ರೈ ಮಾಡಿದ್ದಾರೆ. ಈಗ ‘ಸಂಕ್ರಾಂತಿಕಿ ವಸ್ತುನ್ನಾಮ್’ ಸಿನಿಮಾ ರಿಮೇಕ್​ನಲ್ಲಿ ಅವರು ನಟಿಸುತ್ತಿದ್ದಾರೆ.

‘ಸಂಕ್ರಾಂತಿಕಿ ವಸ್ತುನ್ನಾಮ್’ ಸಿನಿಮಾ ತೆಲುಗಿನ ಸೂಪರ್ ಹಿಟ್ ಚಿತ್ರಗಳಲ್ಲಿ ಒಂದು. ವಿಕ್ಟರಿ ವೆಂಕಟೇಶ್ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಸಖತ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿತ್ತು. ಈ ಚಿತ್ರವನ್ನು ದಿಲ್ ರಾಜು ನಿರ್ಮಾಣ ಮಾಡಿದ್ದರು. ಈ ಸಿನಿಮಾ ಜನವರಿಯಲ್ಲಿ ರಿಲೀಸ್ ಆಗಿ 280 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 2’ ಯಾವಾಗ? ಕೊನೆಗೂ ಉತ್ತರಿಸಿದ ರಿಷಬ್ ಶೆಟ್ಟಿ
Image
ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕಾವ್ಯಾ ಕಣ್ಣಿಗೆ ಹೆದರಿದ ಗಿಲ್ಲಿ
Image
ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ

ಈ ಚಿತ್ರ ಹಿಂದಿಗೆ ರಿಮೇಕ್ ಆಗುತ್ತಿದೆ. ವಿಕ್ಟರಿ ವೆಂಕಟೇಶ್ ಮಾಡಿದ್ದ ಪಾತ್ರವನ್ನು ಅಕ್ಷಯ್ ಕುಮಾರ್ ಮಾಡಲಿದ್ದಾರೆ. ‘ವೆಲ್​ಕಮ್’, ‘ಭೂಲ್​ ಭುಲಯ್ಯ’ ರೀತಿಯ ಸಿನಿಮಾ ನಿರ್ದೇಶನ ಮಾಡಿದ್ದ ಅನೀಸ್ ಬಾಜ್ಮೀ ಅವರು ಈ ಚಿತ್ರ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರವನ್ನು ಹಿಂದಿಯಲ್ಲಿ ದಿಲ್ ರಾಜು ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಇಬ್ಬರು ನಾಯಕಿಯರು ಬೇಕು. ಹೀಗಾಗಿ, ಅದರ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ: ಬದಲಾಗೋದೇ ಇಲ್ಲ ಅಕ್ಷಯ್ ಕುಮಾರ್ ಅದೃಷ್ಟ; ಹೊಸ ಚಿತ್ರ, ಮತ್ತದೇ ಹೀನಾಯ ಕಲೆಕ್ಷನ್

ಅಕ್ಷಯ್ ಕುಮಾರ್ ಇತ್ತೀಚೆಗೆ ಗಂಭೀರ ಸಿನಿಮಾಗಳನ್ನೇ ಹೆಚ್ಚು ರಿಮೇಕ್ ಮಾಡುತ್ತಿದ್ದಾರೆ. ಆದರೆ, ಅದು ಯಶಸ್ಸು ಕಾಣುತ್ತಿಲ್ಲ. ಹೀಗಾಗಿ, ಅಕ್ಷಯ್ ಕುಮಾರ್ ಅವರು ಹಾಸ್ಯ ಪಾತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಇದು ಕೈ ಹಿಡಿಯೋ ಸೂಚನೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:02 am, Tue, 14 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?