AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್ ಕುಮಾರ್ ಸಿನಿಮಾ ಉದ್ದಕ್ಕೂ ಕಾಣಲ್ಲ ಪೃಥ್ವಿರಾಜ್ ಮುಖ? ಮೂಡಿದೆ ಅನುಮಾನ

ಪೃಥ್ವಿರಾಜ್ ಅವರು ವಿವಿಧ ರೀತಿಯ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ವಿಲನ್ ರೀತಿಯ ಪಾತ್ರಗಳನ್ನು ಮಾಡಲು ಅವರು ಎಂದಿಗೂ ಹಿಂದೇಟು ಹಾಕಿದವರಲ್ಲ. ಈಗ ಅವರು ಸ್ಟಾರ್ ಕಾಸ್ಟ್​ನ ಹಿಂದಿ ಚಿತ್ರಕ್ಕೆ ವಿಲನ್ ಆಗಿದ್ದಾರೆ. ಹೀಗಾಗಿ, ಅವರ ಪಾತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇರೋದು ಸಾಮಾನ್ಯ.

ಅಕ್ಷಯ್ ಕುಮಾರ್ ಸಿನಿಮಾ ಉದ್ದಕ್ಕೂ ಕಾಣಲ್ಲ ಪೃಥ್ವಿರಾಜ್ ಮುಖ? ಮೂಡಿದೆ ಅನುಮಾನ
ಪೃಥ್ವಿರಾಜ್
ರಾಜೇಶ್ ದುಗ್ಗುಮನೆ
|

Updated on: Mar 30, 2024 | 12:27 PM

Share

ಅಕ್ಷಯ್  ಕುಮಾರ್ (Akshay Kumar) ಹಾಗೂ ಟೈಗರ್​ ಶ್ರಾಫ್ ನಟನೆಯ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ಹಿಂದಿ ಜೊತೆಗೆ ಈ ಸಿನಿಮಾ ಕನ್ನಡದಲ್ಲೂ ವೀಕ್ಷಣೆಗೆ ಲಭ್ಯವಿದೆ. ಅಕ್ಷಯ್ ಕುಮಾರ್ ಸಿನಿಮಾದಲ್ಲಿ ಪೃಥ್ವಿರಾಜ್ ಅವರು ವಿಲನ್ ಪಾತ್ರ ಮಾಡುತ್ತಿದ್ದಾರೆ. ಅವರ ಲುಕ್ ರಿವೀಲ್ ಆಗಿದೆ. ಈ ಚಿತ್ರದಲ್ಲಿ ಅವರು ಖಡಕ್ ವಿಲನ್ ಆಗೋ ಸೂಚನೆ ಸಿಕ್ಕಿದೆ.

ಪೃಥ್ವಿರಾಜ್ ಅವರು ವಿವಿಧ ರೀತಿಯ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ವಿಲನ್ ರೀತಿಯ ಪಾತ್ರಗಳನ್ನು ಮಾಡಲು ಅವರು ಎಂದಿಗೂ ಹಿಂದೇಟು ಹಾಕಿದವರಲ್ಲ. ಈಗ ಅವರು ಸ್ಟಾರ್ ಕಾಸ್ಟ್​ನ ಹಿಂದಿ ಚಿತ್ರಕ್ಕೆ ವಿಲನ್ ಆಗಿದ್ದಾರೆ. ಹೀಗಾಗಿ, ಅವರ ಪಾತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇರೋದು ಸಾಮಾನ್ಯ. ಆ ನಿರೀಕ್ಷೆಗೆ ತಕ್ಕಂತೆ ಅವರ ಪಾತ್ರ ಇದೆ ಎನ್ನಲಾಗುತ್ತಿದೆ.

ಟ್ರೇಲರ್​ ಉದ್ದಕ್ಕೂ ಪೃಥ್ವಿರಾಜ್ ಅವರ ಪಾತ್ರದ ಪರಿಚಯ ಆಗಿರಲಿಲ್ಲ. ಮುಖಕ್ಕೆ ಮಾಸ್ಕ್ ಧರಿಸಿದ ವ್ಯಕ್ತಿ ಮಾತ್ರ ಕಾಣಿಸಿಕೊಂಡಿದ್ದ. ಅದು ಪೃಥ್ವಿರಾಜ್ ಅವರ ಪಾತ್ರವಂತೆ. ‘ಅವನು ಎವಿಲ್, ಅವನು ಡೇಂಜರಸ್, ಅವನಿಗೆ ಇರೋದು ಒಂದೇ ಉದ್ದೇಶ ಅದುವೇ ಸೇಡು’ ಎಂದು ಅಕ್ಷಯ್ ಕುಮಾರ್ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟರ್ ನೋಡಿದ ಬಳಿಕ ಅನೇಕರು ‘ಸಿನಿಮಾ ಉದ್ದಕ್ಕೂ ಪೃಥ್ವಿರಾಜ್ ಅವರು ಮುಖ ರಿವೀಲ್ ಆಗುವುದಿಲ್ಲವೇ’ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಅನೇಕರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದು ಚಿತ್ರಕ್ಕಾಗಿ 16 ವರ್ಷ ಮುಡಿಪಿಟ್ಟ ಪೃಥ್ವಿರಾಜ್​; ಅಕ್ಷಯ್ ಕುಮಾರ್ ರಿಯಾಕ್ಷನ್ ಹೇಗಿತ್ತು?

‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಈ ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡುವ ಕೆಲಸ ಆಗುತ್ತಿದೆ. ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಇದೇ ಮೊದಲ ಬಾರಿಗೆ ಒಂದಾಗಿದ್ದಾರೆ. ಈ ಸಿನಿಮಾ 3ಡಿಯಲ್ಲೂ ಲಭ್ಯವಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ