AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಅಂಥ ನಿರ್ದೇಶಕರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರಾ ಅಕ್ಷಯ್ ಕುಮಾರ್?

ಅಕ್ಷಯ್ ಕುಮಾರ್ ಅವರು ಬಾಲಿವುಡ್ ಸಿನಿಮಾಗಳ ಸತತ ವೈಫಲ್ಯದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿನಿಮಾಗಳ ರಹಸ್ಯವನ್ನು ಬಹಿರಂಗಪಡಿಸುವುದರಿಂದ ಮ್ಯಾಜಿಕ್ ಕಳೆದುಹೋಗುತ್ತದೆ ಎಂದು ಅವರು ಹೇಳಿದ್ದಾರೆ. ಅತಿಯಾದ ಪಬ್ಲಿಸಿಟಿ ಮತ್ತು ಪ್ರೇಕ್ಷಕರಲ್ಲಿ ನಿರೀಕ್ಷೆಗಳನ್ನು ಹೆಚ್ಚಿಸುವುದರಿಂದಲೂ ಸಿನಿಮಾಗಳ ಸೋಲು ಉಂಟಾಗುತ್ತಿದೆ ಎಂದು ಅವರು ಭಾವಿಸುತ್ತಾರೆ.

ರಾಜಮೌಳಿ ಅಂಥ ನಿರ್ದೇಶಕರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರಾ ಅಕ್ಷಯ್ ಕುಮಾರ್?
Rajamouli
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 24, 2025 | 8:33 AM

Share

ಅಕ್ಷಯ್ ಕುಮಾರ್ ಅವರ ಸಿನಿಮಾಗಳು ಸಾಲು ಸಾಲು ಸೋಲು ಕಾಣುತ್ತಿವೆ. ಇದಕ್ಕೆ ಅಭಿಮಾನಿಗಳು ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ. ಹಾಗಂತ ಅಕ್ಷಯ್ ಕುಮಾರ್ ಅವರು ಕೈ ಕಟ್ಟಿ ಕುಳಿತಿಲ್ಲ. ತಮಗೆ ಬಂದ ಆಫರ್​ಗಳೆಲ್ಲವನ್ನೂ ಒಪ್ಪಿ ಸಿನಿಮಾ ಮಾಡುತ್ತಿದ್ದಾರೆ. ಅವರು ವಾರದ ದಿನಗಳಲ್ಲಿ ಮಾತ್ರ ಶೂಟ್ ಮಾಡಯತ್ತಾರೆ, ವಾರಾಂತ್ಯದಲ್ಲಿ ಕುಟುಂಬದ ಜೊತೆ ಸಮಯ ಕಳೆಯುತ್ತಾರೆ. ಈಗ ಅವರು ಪರೋಕ್ಷವಾಗಿ ರಾಜಮೌಳಿ ರೀತಿಯ ನಿರ್ದೇಶಕರ ಬಗ್ಗೆ ಮಾತನಾಡಿದರೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ.

ಬಾಲಿವುಡ್ ಸಿನಿಮಾಗಳು ಸೋಲಲು ಕಾರಣ ಏನು ಎನ್ನುವ ಪ್ರಶ್ನೆ ಅನೇಕರಲ್ಲಿ ಇದೆ. ಇದಕ್ಕೆ ಒಬ್ಬೊಬ್ಬರು ಒಂದೊಂದು ರೀತಿಯ ಕಾರಣ ನೀಡುತ್ತಾರೆ. ಅಕ್ಷಯ್ ಕುಮಾರ್ ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯ ಹೇಳಿಕೊಂಡಿದ್ದಾರೆ. ಸಿನಿಮಾನ ಮ್ಯಾಜಿಕ್​ಗೆ ಹೋಲಿಕೆ ಮಾಡಿರೋ ಅವರು, ‘ತೆರೆ ಹಿಂದೆ ಏನಾಯಿತು ಎಂಬದನ್ನು ಹೇಳಬಾರದು’ ಎಂದಿದ್ದಾರೆ.

‘ಎಲ್ಲಿಯೂ ಮ್ಯಾಜಿಕ್ ಉಳಿದಿಲ್ಲ. ಸಿನಿಮಾ ಮೇಕಿಂಗ್​ನ ಜನಕ್ಕೆ ಏಕೆ ತೋರಿಸಬೇಕು? ನಾವು ಮ್ಯಾಜಿಕ್ ನೋಡೋಕೆ ಹೋಗುತ್ತೇವೆ. ಈ ಮ್ಯಾಜಿಕ್​ನ ಹೇಗೆ ಮಾಡಿದರು ಎಂದು ಯಾರಾದರೂ ತೋರಿಸಿದರೆ ಮ್ಯಾಜಿಕ್​ನಲ್ಲಿ ಏನಾದರೂ ಎಗ್ಸೈಟ್​ಮೆಂಟ್ ಇರುತ್ತದೆಯೇ? ಇದನ್ನು ಹೇಗೆ ಮಾಡಿದರು ಎಂದು ನನಗೆ ಗೊತ್ತಿದೆ ಎಂದು ಹೇಳುತ್ತಾರೆ’ ಎಂದಿದ್ದಾರೆ ಅಕ್ಷಯ್ ಕುಮಾರ್.

‘ಓರ್ವ ಹೀರೋ ಒಂದು ಕಡೆಯಿಂದ ಮತ್ತೊಂದು ಕಡೆಗೆ ಜಂಪ್ ಮಾಡಿದ್ದನ್ನು ತೋರಿಸಲು ನೀವು ವಿಎಫ್​ಎಕ್ಸ್ ಮಾಡಿರಬಹುದು ಅಥವಾ ಏನೇ ಟ್ರಿಕ್ ಮಾಡಿರಬಹುದು. ಆದರೆ, ಅದನ್ನು ತೋರಿಸಿದಾಗ ಎಲ್ಲವೂ ಹಾಳಾಗುತ್ತದೆ. ನಾವು ಸಾಕಷ್ಟು ವಿಚಾರಗಳನ್ನು ಜನರಿಗೆ ತೋರಿಸಿದ್ದೇವೆ. ಈಗ ಯಾವುದೇ ಮ್ಯಾಜಿಕ್ ಉಳಿದಿಲ್ಲ. ಇದು ಸಿನಿಮಾ ಸೋಲಲು ಪ್ರಮುಖ ಕಾರಣ’ ಎಂದು ಅಕ್ಷಯ್ ಕಯಮಾರ್ ಹೇಳಿದ್ದಾರೆ.

‘ಮೊದಲು ಅಮಿತಾಭ್​ನ ನೋಡಿದೆ ಎಂದು ಎಗ್ಸೈಟ್ ಆಗುತ್ತಿದ್ದರು. ಆದರೆ, ಈಗ ಅಕ್ಷಯ್ ಕುಮಾರ್ ಅವರನ್ನು ಕಂಡರೆ ಯಾರಿಗೂ ಎಗ್ಸೈಟ್ ಆಗುವುದಿಲ್ಲ. ಪಿಆರ್ ಪಬ್ಲಿಸಿಟಿಯಿಂದ ನಾವು ಎಲ್ಲವನ್ನೂ ಹಾಳು ಮಾಡಿದ್ದೇವೆ’ ಎಂದು ಅಕ್ಷಯ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ರಾಜಮೌಳಿಯನ್ನೇ ಬ್ಯಾನ್ ಮಾಡಿತ್ತು ತೆಲುಗು ಚಿತ್ರರಂಗ, ಕಾರಣ ಏನು ಗೊತ್ತೆ?

ರಾಜಮೌಳಿ ಅವರು ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾದ ಮೇಕಿಂಗ್​ನ ಡಾಕ್ಯುಮೆಂಟರಿ ಮಾಡಿ ಬಿಟ್ಟಿದ್ದರು. ಅನೇಕ ನಿರ್ದೇಶಕರು ಈ ಕೆಲಸ ಮಾಡಿದ್ದರು. ರಾಜಮೌಳಿ ಅಸಮಾಧಾನ ಹೊರಹಾಕಿದ್ದು ಇದೇ ರೀತಿಯ ಫೂಟೇಜ್ ತೋರಿಸುವವರ ಬಗ್ಗೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ