AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿರ್ಮಾಪಕರಿಂದ ಮೋಸ ಆಗಿದೆ, ನನಗೆ ಹಣ ಕೊಟ್ಟಿಲ್ಲ’: ಚಿತ್ರರಂಗದ ಕರಾಳ ಸತ್ಯ ಹೇಳಿದ ಅಕ್ಷಯ್​ ಕುಮಾರ್​

ಈ ವರ್ಷ ಆರಂಭದಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಬಡೆ ಮಿಯಾ ಚೋಟೆ ಮಿಯಾ’ ತೆರೆಕಂಡಿತು. ಕೆಲವೇ ದಿನಗಳ ಹಿಂದೆ ‘ಸರ್ಫಿರಾ’ ಸಿನಿಮಾ ಬಿಡುಗಡೆ ಆಯಿತು. ಆಗಸ್ಟ್​ 15ರಂದು ‘ಖೇಲ್​ ಖೇಲ್​ ಮೇ’ ಸಿನಿಮಾ ರಿಲೀಸ್​ ಆಗಲಿದೆ. ಈಗಾಗಲೇ ಅವರಿಗೆ ಸತತ ಸೋಲು ಎದುರಾಗಿದೆ. ತಮಗೆ ನಿರ್ಮಾಪಕರು ಮೋಸ ಮಾಡಿದ್ದಾರೆ ಎಂದು ಅಕ್ಷಯ್​ ಕುಮಾರ್​ ಆರೋಪಿಸಿದ್ದಾರೆ.

‘ನಿರ್ಮಾಪಕರಿಂದ ಮೋಸ ಆಗಿದೆ, ನನಗೆ ಹಣ ಕೊಟ್ಟಿಲ್ಲ’: ಚಿತ್ರರಂಗದ ಕರಾಳ ಸತ್ಯ ಹೇಳಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್
ಮದನ್​ ಕುಮಾರ್​
|

Updated on: Jul 25, 2024 | 7:03 PM

Share

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್​ ಅವರು ಸರಿಯಾದ ಗೆಲುವು ಸಿಗದೇ ಸೊರಗಿದ್ದಾರೆ. ಅವರು ಮಾಡಿದ ಎಲ್ಲ ಸಿನಿಮಾಗಳೂ ಸೋಲುತ್ತಿವೆ. ಏನೇ ಪ್ರಯತ್ನ ಮಾಡಿದರೂ, ಎಷ್ಟೇ ಸಿನಿಮಾ ಮಾಡಿದರೂ ಅವರಿಗೆ ಸಕ್ಸಸ್​ ಸಿಗುತ್ತಿಲ್ಲ. ಗಡಿಬಿಡಿಯಲ್ಲಿ ಸಿನಿಮಾ ಕೆಲಸಗಳನ್ನು ಮುಗಿಸುವುದೇ ಈ ಪರಿಸ್ಥಿತಿಗೆ ಕಾರಣ ಎಂದು ಅನೇಕರು ಟೀಕಿಸಿದ್ದಾರೆ. ಈ ಬಗ್ಗೆ ಅಕ್ಷಯ್​ ಕುಮಾರ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮಗೂ ಕೂಡ ನಿರ್ಮಾಪಕರಿಂದ ಮೋಸ ಆಗಿದೆ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಅಕ್ಷಯ್​ ಕುಮಾರ್​ ನಟನೆಯ ‘ಸರ್ಫಿರಾ’ ಸಿನಿಮಾ ಬಿಡುಗಡೆಯಾಗಿ ಸೋತಿತು. ಅದಕ್ಕೂ ಮುನ್ನ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಕೂಡ ಬಾಕ್ಸ್​ ಆಫೀಸ್​ನಲ್ಲಿ ನೆಲ ಕಚ್ಚಿತ್ತು. ಆ ಸಿನಿಮಾವನ್ನು ನಿರ್ಮಾಣ ಮಾಡಿದ್ದ ಜಾಕಿ ಭಗ್ನಾನಿ ಮತ್ತು ವಶು ಭಗ್ನಾನಿ ಅವರು ಆಸ್ತಿ ಮಾರಿಕೊಳ್ಳುವ ಪರಿಸ್ಥಿತಿಗೆ ಬಂದರು. ಇದಕ್ಕೆಲ್ಲ ಅಕ್ಷಯ್​ ಕುಮಾರ್​ ಕಾರಣ ಎಂದು ಅನೇಕರು ಆರೋಪಿಸಿದ್ದುಂಟು.

ಇದನ್ನೂ ಓದಿ:  ‘ಉಚಿತ ಟೀ, ಸಮೋಸಾ ಕೊಡ್ತೀವಿ, ಸಿನಿಮಾ ನೋಡೋಕೆ ಬನ್ನಿ’: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಹೀನಾಯ ಸ್ಥಿತಿ

ಶಾಕಿಂಗ್​ ಸಂಗತಿ ಏನೆಂದರೆ, ಅನೇಕ ನಿರ್ಮಾಪಕರಿಂದ ಅಕ್ಷಯ್​ ಕುಮಾರ್​ ಅವರಿಗೆ ಮೋಸ ಆಗಿದೆ. ಆ ಬಗ್ಗೆ ಅವರು ಈಗ ಬಾಯಿ ಬಿಟ್ಟಿದ್ದಾರೆ. ‘ಕಾಮನ್​ ಆಗಿ ಈ ರೀತಿ ಆಗುತ್ತದೆ. ಆ ಬಳಿಕ ಅಂಥವರ ಜೊತೆ ನಾನು ಮಾತನಾಡುವುದಿಲ್ಲ. ಸುಮ್ಮನೇ ಮೌನವಾಗಿ ಇರುತ್ತೇನೆ. ಒಂದಿಬ್ಬರು ನಿರ್ಮಾಪಕರಿಂದ ಸಂಭಾವನೆ ಬರುವುದೇ ಇಲ್ಲ. ಅದು ಮೋಸವಲ್ಲದೇ ಮತ್ತೇನೂ ಅಲ್ಲ’ ಎಂದಿದ್ದಾರೆ ಅಕ್ಷಯ್​ ಕುಮಾರ್​.

ಇದನ್ನೂ ಓದಿ: ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ

ಗುಣಮಟ್ಟಕ್ಕೆ ಗಮನ ನೀಡದೇ ಕೇವಲ ಸಿನಿಮಾಗಳ ಸಂಖ್ಯೆ ಹೆಚ್ಚಿಸುತ್ತಾರೆ ಎಂಬ ಕಾರಣಕ್ಕೆ ಅಕ್ಷಯ್​ ಅವರನ್ನು ಟೀಕಿಸಲಾಗುತ್ತಿದೆ. ಅದಕ್ಕೂ ಅಕ್ಷಯ್​ ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಕೇವಲ ನಾನು ಒಂದು ಸಿನಿಮಾ ಮಾಡಿದೆ, ಇನ್ನುಳಿದ ದಿನಗಳಲ್ಲಿ ಏನು ಮಾಡಲಿ?’ ಎಂದು ಅವರು ಪ್ರಶ್ನಿಸಿದ್ದಾರೆ. ತಾವು ಹೆಚ್ಚು ಸಿನಿಮಾಗಳನ್ನು ಮಾಡುವುದರಿಂದ ಉದ್ಯೋಗಾವಕಾಶ ಹೆಚ್ಚುತ್ತದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?