AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿರ್ಮಾಪಕರಿಂದ ಮೋಸ ಆಗಿದೆ, ನನಗೆ ಹಣ ಕೊಟ್ಟಿಲ್ಲ’: ಚಿತ್ರರಂಗದ ಕರಾಳ ಸತ್ಯ ಹೇಳಿದ ಅಕ್ಷಯ್​ ಕುಮಾರ್​

ಈ ವರ್ಷ ಆರಂಭದಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಬಡೆ ಮಿಯಾ ಚೋಟೆ ಮಿಯಾ’ ತೆರೆಕಂಡಿತು. ಕೆಲವೇ ದಿನಗಳ ಹಿಂದೆ ‘ಸರ್ಫಿರಾ’ ಸಿನಿಮಾ ಬಿಡುಗಡೆ ಆಯಿತು. ಆಗಸ್ಟ್​ 15ರಂದು ‘ಖೇಲ್​ ಖೇಲ್​ ಮೇ’ ಸಿನಿಮಾ ರಿಲೀಸ್​ ಆಗಲಿದೆ. ಈಗಾಗಲೇ ಅವರಿಗೆ ಸತತ ಸೋಲು ಎದುರಾಗಿದೆ. ತಮಗೆ ನಿರ್ಮಾಪಕರು ಮೋಸ ಮಾಡಿದ್ದಾರೆ ಎಂದು ಅಕ್ಷಯ್​ ಕುಮಾರ್​ ಆರೋಪಿಸಿದ್ದಾರೆ.

‘ನಿರ್ಮಾಪಕರಿಂದ ಮೋಸ ಆಗಿದೆ, ನನಗೆ ಹಣ ಕೊಟ್ಟಿಲ್ಲ’: ಚಿತ್ರರಂಗದ ಕರಾಳ ಸತ್ಯ ಹೇಳಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್
ಮದನ್​ ಕುಮಾರ್​
|

Updated on: Jul 25, 2024 | 7:03 PM

Share

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್​ ಅವರು ಸರಿಯಾದ ಗೆಲುವು ಸಿಗದೇ ಸೊರಗಿದ್ದಾರೆ. ಅವರು ಮಾಡಿದ ಎಲ್ಲ ಸಿನಿಮಾಗಳೂ ಸೋಲುತ್ತಿವೆ. ಏನೇ ಪ್ರಯತ್ನ ಮಾಡಿದರೂ, ಎಷ್ಟೇ ಸಿನಿಮಾ ಮಾಡಿದರೂ ಅವರಿಗೆ ಸಕ್ಸಸ್​ ಸಿಗುತ್ತಿಲ್ಲ. ಗಡಿಬಿಡಿಯಲ್ಲಿ ಸಿನಿಮಾ ಕೆಲಸಗಳನ್ನು ಮುಗಿಸುವುದೇ ಈ ಪರಿಸ್ಥಿತಿಗೆ ಕಾರಣ ಎಂದು ಅನೇಕರು ಟೀಕಿಸಿದ್ದಾರೆ. ಈ ಬಗ್ಗೆ ಅಕ್ಷಯ್​ ಕುಮಾರ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮಗೂ ಕೂಡ ನಿರ್ಮಾಪಕರಿಂದ ಮೋಸ ಆಗಿದೆ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಅಕ್ಷಯ್​ ಕುಮಾರ್​ ನಟನೆಯ ‘ಸರ್ಫಿರಾ’ ಸಿನಿಮಾ ಬಿಡುಗಡೆಯಾಗಿ ಸೋತಿತು. ಅದಕ್ಕೂ ಮುನ್ನ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಕೂಡ ಬಾಕ್ಸ್​ ಆಫೀಸ್​ನಲ್ಲಿ ನೆಲ ಕಚ್ಚಿತ್ತು. ಆ ಸಿನಿಮಾವನ್ನು ನಿರ್ಮಾಣ ಮಾಡಿದ್ದ ಜಾಕಿ ಭಗ್ನಾನಿ ಮತ್ತು ವಶು ಭಗ್ನಾನಿ ಅವರು ಆಸ್ತಿ ಮಾರಿಕೊಳ್ಳುವ ಪರಿಸ್ಥಿತಿಗೆ ಬಂದರು. ಇದಕ್ಕೆಲ್ಲ ಅಕ್ಷಯ್​ ಕುಮಾರ್​ ಕಾರಣ ಎಂದು ಅನೇಕರು ಆರೋಪಿಸಿದ್ದುಂಟು.

ಇದನ್ನೂ ಓದಿ:  ‘ಉಚಿತ ಟೀ, ಸಮೋಸಾ ಕೊಡ್ತೀವಿ, ಸಿನಿಮಾ ನೋಡೋಕೆ ಬನ್ನಿ’: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಹೀನಾಯ ಸ್ಥಿತಿ

ಶಾಕಿಂಗ್​ ಸಂಗತಿ ಏನೆಂದರೆ, ಅನೇಕ ನಿರ್ಮಾಪಕರಿಂದ ಅಕ್ಷಯ್​ ಕುಮಾರ್​ ಅವರಿಗೆ ಮೋಸ ಆಗಿದೆ. ಆ ಬಗ್ಗೆ ಅವರು ಈಗ ಬಾಯಿ ಬಿಟ್ಟಿದ್ದಾರೆ. ‘ಕಾಮನ್​ ಆಗಿ ಈ ರೀತಿ ಆಗುತ್ತದೆ. ಆ ಬಳಿಕ ಅಂಥವರ ಜೊತೆ ನಾನು ಮಾತನಾಡುವುದಿಲ್ಲ. ಸುಮ್ಮನೇ ಮೌನವಾಗಿ ಇರುತ್ತೇನೆ. ಒಂದಿಬ್ಬರು ನಿರ್ಮಾಪಕರಿಂದ ಸಂಭಾವನೆ ಬರುವುದೇ ಇಲ್ಲ. ಅದು ಮೋಸವಲ್ಲದೇ ಮತ್ತೇನೂ ಅಲ್ಲ’ ಎಂದಿದ್ದಾರೆ ಅಕ್ಷಯ್​ ಕುಮಾರ್​.

ಇದನ್ನೂ ಓದಿ: ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ

ಗುಣಮಟ್ಟಕ್ಕೆ ಗಮನ ನೀಡದೇ ಕೇವಲ ಸಿನಿಮಾಗಳ ಸಂಖ್ಯೆ ಹೆಚ್ಚಿಸುತ್ತಾರೆ ಎಂಬ ಕಾರಣಕ್ಕೆ ಅಕ್ಷಯ್​ ಅವರನ್ನು ಟೀಕಿಸಲಾಗುತ್ತಿದೆ. ಅದಕ್ಕೂ ಅಕ್ಷಯ್​ ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಕೇವಲ ನಾನು ಒಂದು ಸಿನಿಮಾ ಮಾಡಿದೆ, ಇನ್ನುಳಿದ ದಿನಗಳಲ್ಲಿ ಏನು ಮಾಡಲಿ?’ ಎಂದು ಅವರು ಪ್ರಶ್ನಿಸಿದ್ದಾರೆ. ತಾವು ಹೆಚ್ಚು ಸಿನಿಮಾಗಳನ್ನು ಮಾಡುವುದರಿಂದ ಉದ್ಯೋಗಾವಕಾಶ ಹೆಚ್ಚುತ್ತದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್