AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿರ್ಮಾಪಕರಿಂದ ಮೋಸ ಆಗಿದೆ, ನನಗೆ ಹಣ ಕೊಟ್ಟಿಲ್ಲ’: ಚಿತ್ರರಂಗದ ಕರಾಳ ಸತ್ಯ ಹೇಳಿದ ಅಕ್ಷಯ್​ ಕುಮಾರ್​

ಈ ವರ್ಷ ಆರಂಭದಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಬಡೆ ಮಿಯಾ ಚೋಟೆ ಮಿಯಾ’ ತೆರೆಕಂಡಿತು. ಕೆಲವೇ ದಿನಗಳ ಹಿಂದೆ ‘ಸರ್ಫಿರಾ’ ಸಿನಿಮಾ ಬಿಡುಗಡೆ ಆಯಿತು. ಆಗಸ್ಟ್​ 15ರಂದು ‘ಖೇಲ್​ ಖೇಲ್​ ಮೇ’ ಸಿನಿಮಾ ರಿಲೀಸ್​ ಆಗಲಿದೆ. ಈಗಾಗಲೇ ಅವರಿಗೆ ಸತತ ಸೋಲು ಎದುರಾಗಿದೆ. ತಮಗೆ ನಿರ್ಮಾಪಕರು ಮೋಸ ಮಾಡಿದ್ದಾರೆ ಎಂದು ಅಕ್ಷಯ್​ ಕುಮಾರ್​ ಆರೋಪಿಸಿದ್ದಾರೆ.

‘ನಿರ್ಮಾಪಕರಿಂದ ಮೋಸ ಆಗಿದೆ, ನನಗೆ ಹಣ ಕೊಟ್ಟಿಲ್ಲ’: ಚಿತ್ರರಂಗದ ಕರಾಳ ಸತ್ಯ ಹೇಳಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್
ಮದನ್​ ಕುಮಾರ್​
|

Updated on: Jul 25, 2024 | 7:03 PM

Share

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್​ ಅವರು ಸರಿಯಾದ ಗೆಲುವು ಸಿಗದೇ ಸೊರಗಿದ್ದಾರೆ. ಅವರು ಮಾಡಿದ ಎಲ್ಲ ಸಿನಿಮಾಗಳೂ ಸೋಲುತ್ತಿವೆ. ಏನೇ ಪ್ರಯತ್ನ ಮಾಡಿದರೂ, ಎಷ್ಟೇ ಸಿನಿಮಾ ಮಾಡಿದರೂ ಅವರಿಗೆ ಸಕ್ಸಸ್​ ಸಿಗುತ್ತಿಲ್ಲ. ಗಡಿಬಿಡಿಯಲ್ಲಿ ಸಿನಿಮಾ ಕೆಲಸಗಳನ್ನು ಮುಗಿಸುವುದೇ ಈ ಪರಿಸ್ಥಿತಿಗೆ ಕಾರಣ ಎಂದು ಅನೇಕರು ಟೀಕಿಸಿದ್ದಾರೆ. ಈ ಬಗ್ಗೆ ಅಕ್ಷಯ್​ ಕುಮಾರ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮಗೂ ಕೂಡ ನಿರ್ಮಾಪಕರಿಂದ ಮೋಸ ಆಗಿದೆ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಅಕ್ಷಯ್​ ಕುಮಾರ್​ ನಟನೆಯ ‘ಸರ್ಫಿರಾ’ ಸಿನಿಮಾ ಬಿಡುಗಡೆಯಾಗಿ ಸೋತಿತು. ಅದಕ್ಕೂ ಮುನ್ನ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಕೂಡ ಬಾಕ್ಸ್​ ಆಫೀಸ್​ನಲ್ಲಿ ನೆಲ ಕಚ್ಚಿತ್ತು. ಆ ಸಿನಿಮಾವನ್ನು ನಿರ್ಮಾಣ ಮಾಡಿದ್ದ ಜಾಕಿ ಭಗ್ನಾನಿ ಮತ್ತು ವಶು ಭಗ್ನಾನಿ ಅವರು ಆಸ್ತಿ ಮಾರಿಕೊಳ್ಳುವ ಪರಿಸ್ಥಿತಿಗೆ ಬಂದರು. ಇದಕ್ಕೆಲ್ಲ ಅಕ್ಷಯ್​ ಕುಮಾರ್​ ಕಾರಣ ಎಂದು ಅನೇಕರು ಆರೋಪಿಸಿದ್ದುಂಟು.

ಇದನ್ನೂ ಓದಿ:  ‘ಉಚಿತ ಟೀ, ಸಮೋಸಾ ಕೊಡ್ತೀವಿ, ಸಿನಿಮಾ ನೋಡೋಕೆ ಬನ್ನಿ’: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಹೀನಾಯ ಸ್ಥಿತಿ

ಶಾಕಿಂಗ್​ ಸಂಗತಿ ಏನೆಂದರೆ, ಅನೇಕ ನಿರ್ಮಾಪಕರಿಂದ ಅಕ್ಷಯ್​ ಕುಮಾರ್​ ಅವರಿಗೆ ಮೋಸ ಆಗಿದೆ. ಆ ಬಗ್ಗೆ ಅವರು ಈಗ ಬಾಯಿ ಬಿಟ್ಟಿದ್ದಾರೆ. ‘ಕಾಮನ್​ ಆಗಿ ಈ ರೀತಿ ಆಗುತ್ತದೆ. ಆ ಬಳಿಕ ಅಂಥವರ ಜೊತೆ ನಾನು ಮಾತನಾಡುವುದಿಲ್ಲ. ಸುಮ್ಮನೇ ಮೌನವಾಗಿ ಇರುತ್ತೇನೆ. ಒಂದಿಬ್ಬರು ನಿರ್ಮಾಪಕರಿಂದ ಸಂಭಾವನೆ ಬರುವುದೇ ಇಲ್ಲ. ಅದು ಮೋಸವಲ್ಲದೇ ಮತ್ತೇನೂ ಅಲ್ಲ’ ಎಂದಿದ್ದಾರೆ ಅಕ್ಷಯ್​ ಕುಮಾರ್​.

ಇದನ್ನೂ ಓದಿ: ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ

ಗುಣಮಟ್ಟಕ್ಕೆ ಗಮನ ನೀಡದೇ ಕೇವಲ ಸಿನಿಮಾಗಳ ಸಂಖ್ಯೆ ಹೆಚ್ಚಿಸುತ್ತಾರೆ ಎಂಬ ಕಾರಣಕ್ಕೆ ಅಕ್ಷಯ್​ ಅವರನ್ನು ಟೀಕಿಸಲಾಗುತ್ತಿದೆ. ಅದಕ್ಕೂ ಅಕ್ಷಯ್​ ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಕೇವಲ ನಾನು ಒಂದು ಸಿನಿಮಾ ಮಾಡಿದೆ, ಇನ್ನುಳಿದ ದಿನಗಳಲ್ಲಿ ಏನು ಮಾಡಲಿ?’ ಎಂದು ಅವರು ಪ್ರಶ್ನಿಸಿದ್ದಾರೆ. ತಾವು ಹೆಚ್ಚು ಸಿನಿಮಾಗಳನ್ನು ಮಾಡುವುದರಿಂದ ಉದ್ಯೋಗಾವಕಾಶ ಹೆಚ್ಚುತ್ತದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ