AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ರೀತಿಯ ಸೋಲು ನಾನು ಕಾಣದಿರುವುದೇನಲ್ಲ’; ಸತತ ಫ್ಲಾಪ್ ಬಗ್ಗೆ ಅಕ್ಷಯ್ ಕುಮಾರ್ ಮಾತು

ಈ ವರ್ಷ ರಿಲೀಸ್ ಆದ ಅಕ್ಷಯ್ ಕುಮಾರ್ ನಟನೆಯ ‘ಸೆಲ್ಫೀ’ ಹಾಗೂ ‘ಮಿಷನ್ ರಾಣಿಗಂಜ್’ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಫ್ಲಾಪ್ ಎನಿಸಿಕೊಂಡವು. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಇದರ ಪ್ರಚಾರದಲ್ಲಿ ಭಾಗಿ ಆಗುತ್ತಿರುವ ಅವರು ಈ ಬಗ್ಗೆ ಮಾತನಾಡಿದ್ದಾರೆ.  

‘ಈ ರೀತಿಯ ಸೋಲು ನಾನು ಕಾಣದಿರುವುದೇನಲ್ಲ’; ಸತತ ಫ್ಲಾಪ್ ಬಗ್ಗೆ ಅಕ್ಷಯ್ ಕುಮಾರ್ ಮಾತು
ಅಕ್ಷಯ್-ಟೈಗರ್
ರಾಜೇಶ್ ದುಗ್ಗುಮನೆ
|

Updated on: Mar 27, 2024 | 6:59 AM

Share

ಇತ್ತೀಚೆಗೆ ರಿಲೀಸ್ ಆದ ಅಕ್ಷಯ್ ಕುಮಾರ್ (Akshay Kumar) ನಟನೆಯ ಬಹುತೇಕ ಸಿನಿಮಾಗಳು ಫ್ಲಾಪ್ ಎನಿಸಿಕೊಂಡಿವೆ. ಇದಕ್ಕೆ ಕಾರಣ ಹಲವು. ಆದಾಗ್ಯೂ ಅಕ್ಷಯ್ ಕುಮಾರ್​ಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಇದರ ಜೊತೆಗೆ ಅವರು ತೋರುತ್ತಿರುವ ಉತ್ಸಾಹವೂ ಕುಗ್ಗಿಲ್ಲ. ಅಕ್ಷಯ್ ಕುಮಾರ್ ಅವರು ಸಾಲು ಸಾಲು ಫ್ಲಾಪ್ ನೀಡಿರುವುದರ ಬಗ್ಗೆ ಮಾತನಾಡಿದ್ದಾರೆ. ಅವರ ನಟನೆಯ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಇದರ ಪ್ರಚಾರದಲ್ಲಿ ಭಾಗಿ ಆಗುತ್ತಿರುವ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಈ ವರ್ಷ ರಿಲೀಸ್ ಆದ ಅಕ್ಷಯ್ ಕುಮಾರ್ ನಟನೆಯ ‘ಸೆಲ್ಫೀ’ ಹಾಗೂ ‘ಮಿಷನ್ ರಾಣಿಗಂಜ್’ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಫ್ಲಾಪ್ ಎನಿಸಿಕೊಂಡವು. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ನಾನು ಎಲ್ಲಾ ರೀತಿಯ ಸಿನಿಮಾಗಳನ್ನು ಮಾಡುತ್ತೇನೆ. ಒಂದೇ ವರ್ಗದ ಸಿನಿಮಾಗೆ ಕಟ್ಟು ಬೀಳುವವನು ನಾನಲ್ಲ. ಬೇರೆ ಬೇರೆ ವರ್ಗದ ಚಿತ್ರಗಳನ್ನು ಮಾಡುವುದು ನನಗಿಷ್ಟ. ಅದು ಯಶಸ್ಸು ಕಾಣಲಿ ಅಥವಾ ಕಾಣದೆ ಇರಲಿ, ನಾನು ಕೆಲಸ ಮಾಡುವುದೇ ಹೀಗೆ. ಕೆಲವು ಸಾಮಾಜಿಕ ಸಿನಿಮಾ, ಕೆಲವು ಒಳ್ಳೆಯ ಕಥೆ ಇರುವ ಸಿನಿಮಾ, ಕೆಲವು ಕಾಮಿಡಿ, ಕೆಲವು ಆ್ಯಕ್ಷನ್ ಸಿನಿಮಾ ಮಾಡುತ್ತಿರುತ್ತೇನೆ’ ಎಂದಿದ್ದಾರೆ ಅಕ್ಷಯ್ ಕುಮಾರ್

‘ನಾನು ವಿವಿಧ ಬಗೆಯ ಸಿನಿಮಾಗಳನ್ನು ಮಾಡಲು ಇಷ್ಟಪಡುತ್ತೇನೆ. ಈಗ ಕಾಮಿಡಿ ಹಾಗೂ ಆ್ಯಕ್ಷನ್ ಸಿನಿಮಾಗಳನ್ನೇ ಜನರು ಹೆಚ್ಚು ನೋಡುತ್ತಾರೆ ಎಂದು ಕೆಲವರು ಹೇಳಿದ್ದಿದೆ. ಹಾಗಂದ ಮಾತ್ರಕ್ಕೆ ನಾನು ಅವುಗಳನ್ನೇ ಮಾಡಬೇಕು ಎಂದಿಲ್ಲ. ಟಾಯ್ಲೆಟ್: ಏಕ್ ಪ್ರೇಮ್ ಕಥಾ, ಏರ್​ಲಿಫ್ಟ್, ರುಸ್ತುಂ ಸಿನಿಮಾ ಸೇರಿ ಅನೇಕ ಸಾಮಾಜಿಕ ಕಥೆಯ ಸಿನಿಮಾ ಮಾಡಿದ್ದೇನೆ. ಕೆಲವೊಮ್ಮೆ ಯಶಸ್ಸು ಸಿಗುತ್ತದೆ, ಕೆಲವೊಮ್ಮೆ ಸಿಗಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಬದುಕುವ ಸಾಧ್ಯತೆ ಶೇ.30 ಮಾತ್ರ’: ಇದು ಅಕ್ಷಯ್​ ಕುಮಾರ್​ ಜೀವನದ ಅಪಾಯಕಾರಿ ಸ್ಟಂಟ್

‘ಇದು ನಾನು ನೋಡದೇ ಇರುವುದೇನು ಅಲ್ಲ. ಈ ಮೊದಲು ನನ್ನ 16 ಸಿನಿಮಾಗಳು ಸತತವಾಗಿ ಫ್ಲಾಪ್ ಆಗಿದ್ದವು. ಆದರೂ ನಾನು ಸಿನಿಮಾ ಮಾಡಿದೆ. ಈ ಚಿತ್ರಕ್ಕಾಗಿ (ಬಡೇ ಮಿಯಾ ಚೋಟೆ ಮಿಯಾ) ನಾವು ಸಾಕಷ್ಟು ಶ್ರಮ ಹಾಕಿದ್ದೇವೆ. ಈ ಸಿನಿಮಾ ನಮಗೆ ಅದೃಷ್ಟ ತರುತ್ತದೆ ಎಂದು ನಾನು ನಂಬಿದ್ದೇನೆ’ ಎಂದಿದ್ದಾರೆ ಅಕ್ಷಯ್ ಕುಮಾರ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ