AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸತ್ತುಹೋದೆ ಎಂಬ ರೀತಿಯಲ್ಲಿ ಸಂತಾಪ ಸೂಚಿಸುತ್ತಿದ್ದೀರಲ್ಲ’; ಫ್ಯಾನ್ಸ್ ಬಗ್ಗೆ ಅಕ್ಷಯ್ ಗರಂ

ಅಕ್ಷಯ್ ಕುಮಾರ್ ಅವರ ಸಿನಿಮಾಗಳಿಗೆ ಬಂಡವಾಳ ಹೂಡಿದ ನಿರ್ಮಾಪಕರು ಸಂಕಷ್ಟದಲ್ಲಿ ಇದ್ದಾರೆ. ಆದರೆ, ಅಕ್ಷಯ್ ಸಂಭಾವನೆ ಕಡಿಮೆ ಮಾಡಿಕೊಳ್ಳಲು ಸಿದ್ಧರಿಲ್ಲ. ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ಅಕ್ಷಯ್ ಕುಮಾರ್ ದೊಡ್ಡ ಫ್ಲಾಪ್ ಕಂಡರು. ‘ಸರ್ಫಿರಾ’ ಕೂಡ ಕಳಪೆ ಗಳಿಕೆ ಮಾಡಿತು.

‘ನಾನು ಸತ್ತುಹೋದೆ ಎಂಬ ರೀತಿಯಲ್ಲಿ ಸಂತಾಪ ಸೂಚಿಸುತ್ತಿದ್ದೀರಲ್ಲ’; ಫ್ಯಾನ್ಸ್ ಬಗ್ಗೆ ಅಕ್ಷಯ್ ಗರಂ
ಅಕ್ಷಯ್
ರಾಜೇಶ್ ದುಗ್ಗುಮನೆ
|

Updated on: Aug 03, 2024 | 10:23 AM

Share

ಕೊವಿಡ್ ಕಾಣಿಸಿಕೊಂಡ ಬಳಿಕ ಅಕ್ಷಯ್ ಕುಮಾರ್ ನಟನೆಯ 15 ಸಿನಿಮಾಗಳು ರಿಲೀಸ್ ಆಗಿವೆ. ಇದರಲ್ಲಿ ಯಶಸ್ಸು ಕಂಡಿದ್ದು 2-3 ಸಿನಿಮಾಗಳು ಮಾತ್ರ. ಅವರ ಅಭಿಮಾನಿಗಳು ಅಕ್ಷಯ್ ಕುಮಾರ್ ದೊಡ್ಡ ಕಂಬ್ಯಾಕ್ ಮಾಡಲಿ ಎಂದು ಬಯಸುತ್ತಿದ್ದಾರೆ. ಅಕ್ಷಯ್ ಸಿನಿಮಾ ಸೋತಿದ್ದಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಇದಕ್ಕೆ ಅವರು ತಿರುಗೇಟು ಕೊಟ್ಟಿದ್ದಾರೆ. ಅವರನ್ನು ಟೀಕಿಸಿದವರು ಮುಟ್ಟಿ ನೋಡಿಕೊಳ್ಳುವಂತೆ ಅಕ್ಷಯ್ ಕುಮಾರ್ ಅವರು ಉತ್ತರ ನೀಡಿದ್ದಾರೆ.

ಅಕ್ಷಯ್ ಕುಮಾರ್ ಅವರ ಸಿನಿಮಾಗಳಿಗೆ ಬಂಡವಾಳ ಹೂಡಿದ ನಿರ್ಮಾಪಕರು ಸಂಕಷ್ಟದಲ್ಲಿ ಇದ್ದಾರೆ. ಆದರೆ, ಅಕ್ಷಯ್ ಸಂಭಾವನೆ ಕಡಿಮೆ ಮಾಡಿಕೊಳ್ಳಲು ಸಿದ್ಧರಿಲ್ಲ. ‘ಏನೇ ಆದರೂ ಒಳ್ಳೆಯದಕ್ಕೆ ಆಗೋದು. ನಾನು ಹೆಚ್ಚು ಆಲೋಚಿಸುವುದಿಲ್ಲ, ಒತ್ತಡ ತೆಗೆದುಕೊಳ್ಳುವುದಿಲ್ಲ. ನಾಲ್ಕೈದು ಸಿನಿಮಾ ಉತ್ತಮವಾಗಿ ಕೆಲಸ ಮಾಡಿಲ್ಲ ಎಂದ ಮಾತ್ರಕ್ಕೆ ನಾನು ಸತ್ತೇ ಹೋದ ಎಂಬ ರೀತಿಯಲ್ಲಿ ಸಂತಾಪದ ಸಂದೇಶ ಕಳಿಸುತ್ತಾರೆ’ ಎಂದಿದ್ದಾರೆ ಅಕ್ಷಯ್ ಕುಮಾರ್.

‘ಜನರು ನಾನು ಕಂಬ್ಯಾಕ್ ಮಾಡಲಿ ಎಂದು ಕಾಯುತ್ತಿದ್ದಾರೆ. ನಾನು ಎಲ್ಲಿಗೆ ಹೋಗಿದ್ದೇನೆ ಎಂದು ಕಂಬ್ಯಾಕ್ ಮಾಡಬೇಕು? ನಾನು ಯಾವಾಗಲೂ ಇಲ್ಲೇ ಇದ್ದೇನೆ. ನಿರಂತರವಾಗಿ ಕೆಲಸ ಮಾಡುತ್ತಿದ್ದೇನೆ. ನೀವು ಏನೇ ಹೇಳಿದರೂ ನನ್ನ ಕೆಲಸ ಮುಂದುವರಿಸುತ್ತೇನೆ. ನಾನು ಕಷ್ಟಪಟ್ಟು ಹಣ ಸಂಪಾದಿಸುತ್ತೇನೆಯೇ ಹೊರತು ಬೇಡಿಕೊಂಡಲ್ಲ. ನನ್ನ ಜೀವ ಇರೋವರೆಗೆ ನಾನು ಕೆಲಸ ಮಾಡುತ್ತೇನೆ’ ಎಂದಿದ್ದಾರೆ ಅಕ್ಷಯ್ ಕುಮಾರ್.

ಇದನ್ನೂ ಓದಿ: ‘ವಿಧಿ ಬದಲಿಸಲು ಸಾಧ್ಯವಿಲ್ಲ’; ಸಿನಿಮಾ ಸೋಲಿನ ಬಗ್ಗೆ ಅಕ್ಷಯ್ ಕುಮಾರ್ ಬೇಸರದ ಮಾತು

‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ಅಕ್ಷಯ್ ಕುಮಾರ್ ದೊಡ್ಡ ಫ್ಲಾಪ್ ಕಂಡರು. ‘ಸರ್ಫಿರಾ’ ಕೂಡ ಕಳಪೆ ಗಳಿಕೆ ಮಾಡಿತು. ಅವರ ನಟನೆಯ ‘ಸೆಲ್ಫಿ’, ‘ಮಿಷನ್ ರಾಣಿಗಂಜ್’ ಮೊದಲಾದ ಸಿನಿಮಾಗಳ ಕಥೆಯೂ ಇದೆ. ‘ಖೇಲ್ ಖೇಲ್ ಮೇ’ ಚಿತ್ರ ಆಗಸ್ಟ್ 15ರಂದು ಬಿಡುಗಡೆ ಆಗಲಿದೆ. ಇದನ್ನು ಹೊರತುಪಡಿಸಿ ಇನ್ನೂ ಎರಡು ಸಿನಿಮಾಗಳು ಈ ವರ್ಷ ರಿಲೀಸ್ ಆಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ