AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸತ್ತುಹೋದೆ ಎಂಬ ರೀತಿಯಲ್ಲಿ ಸಂತಾಪ ಸೂಚಿಸುತ್ತಿದ್ದೀರಲ್ಲ’; ಫ್ಯಾನ್ಸ್ ಬಗ್ಗೆ ಅಕ್ಷಯ್ ಗರಂ

ಅಕ್ಷಯ್ ಕುಮಾರ್ ಅವರ ಸಿನಿಮಾಗಳಿಗೆ ಬಂಡವಾಳ ಹೂಡಿದ ನಿರ್ಮಾಪಕರು ಸಂಕಷ್ಟದಲ್ಲಿ ಇದ್ದಾರೆ. ಆದರೆ, ಅಕ್ಷಯ್ ಸಂಭಾವನೆ ಕಡಿಮೆ ಮಾಡಿಕೊಳ್ಳಲು ಸಿದ್ಧರಿಲ್ಲ. ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ಅಕ್ಷಯ್ ಕುಮಾರ್ ದೊಡ್ಡ ಫ್ಲಾಪ್ ಕಂಡರು. ‘ಸರ್ಫಿರಾ’ ಕೂಡ ಕಳಪೆ ಗಳಿಕೆ ಮಾಡಿತು.

‘ನಾನು ಸತ್ತುಹೋದೆ ಎಂಬ ರೀತಿಯಲ್ಲಿ ಸಂತಾಪ ಸೂಚಿಸುತ್ತಿದ್ದೀರಲ್ಲ’; ಫ್ಯಾನ್ಸ್ ಬಗ್ಗೆ ಅಕ್ಷಯ್ ಗರಂ
ಅಕ್ಷಯ್
ರಾಜೇಶ್ ದುಗ್ಗುಮನೆ
|

Updated on: Aug 03, 2024 | 10:23 AM

Share

ಕೊವಿಡ್ ಕಾಣಿಸಿಕೊಂಡ ಬಳಿಕ ಅಕ್ಷಯ್ ಕುಮಾರ್ ನಟನೆಯ 15 ಸಿನಿಮಾಗಳು ರಿಲೀಸ್ ಆಗಿವೆ. ಇದರಲ್ಲಿ ಯಶಸ್ಸು ಕಂಡಿದ್ದು 2-3 ಸಿನಿಮಾಗಳು ಮಾತ್ರ. ಅವರ ಅಭಿಮಾನಿಗಳು ಅಕ್ಷಯ್ ಕುಮಾರ್ ದೊಡ್ಡ ಕಂಬ್ಯಾಕ್ ಮಾಡಲಿ ಎಂದು ಬಯಸುತ್ತಿದ್ದಾರೆ. ಅಕ್ಷಯ್ ಸಿನಿಮಾ ಸೋತಿದ್ದಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಇದಕ್ಕೆ ಅವರು ತಿರುಗೇಟು ಕೊಟ್ಟಿದ್ದಾರೆ. ಅವರನ್ನು ಟೀಕಿಸಿದವರು ಮುಟ್ಟಿ ನೋಡಿಕೊಳ್ಳುವಂತೆ ಅಕ್ಷಯ್ ಕುಮಾರ್ ಅವರು ಉತ್ತರ ನೀಡಿದ್ದಾರೆ.

ಅಕ್ಷಯ್ ಕುಮಾರ್ ಅವರ ಸಿನಿಮಾಗಳಿಗೆ ಬಂಡವಾಳ ಹೂಡಿದ ನಿರ್ಮಾಪಕರು ಸಂಕಷ್ಟದಲ್ಲಿ ಇದ್ದಾರೆ. ಆದರೆ, ಅಕ್ಷಯ್ ಸಂಭಾವನೆ ಕಡಿಮೆ ಮಾಡಿಕೊಳ್ಳಲು ಸಿದ್ಧರಿಲ್ಲ. ‘ಏನೇ ಆದರೂ ಒಳ್ಳೆಯದಕ್ಕೆ ಆಗೋದು. ನಾನು ಹೆಚ್ಚು ಆಲೋಚಿಸುವುದಿಲ್ಲ, ಒತ್ತಡ ತೆಗೆದುಕೊಳ್ಳುವುದಿಲ್ಲ. ನಾಲ್ಕೈದು ಸಿನಿಮಾ ಉತ್ತಮವಾಗಿ ಕೆಲಸ ಮಾಡಿಲ್ಲ ಎಂದ ಮಾತ್ರಕ್ಕೆ ನಾನು ಸತ್ತೇ ಹೋದ ಎಂಬ ರೀತಿಯಲ್ಲಿ ಸಂತಾಪದ ಸಂದೇಶ ಕಳಿಸುತ್ತಾರೆ’ ಎಂದಿದ್ದಾರೆ ಅಕ್ಷಯ್ ಕುಮಾರ್.

‘ಜನರು ನಾನು ಕಂಬ್ಯಾಕ್ ಮಾಡಲಿ ಎಂದು ಕಾಯುತ್ತಿದ್ದಾರೆ. ನಾನು ಎಲ್ಲಿಗೆ ಹೋಗಿದ್ದೇನೆ ಎಂದು ಕಂಬ್ಯಾಕ್ ಮಾಡಬೇಕು? ನಾನು ಯಾವಾಗಲೂ ಇಲ್ಲೇ ಇದ್ದೇನೆ. ನಿರಂತರವಾಗಿ ಕೆಲಸ ಮಾಡುತ್ತಿದ್ದೇನೆ. ನೀವು ಏನೇ ಹೇಳಿದರೂ ನನ್ನ ಕೆಲಸ ಮುಂದುವರಿಸುತ್ತೇನೆ. ನಾನು ಕಷ್ಟಪಟ್ಟು ಹಣ ಸಂಪಾದಿಸುತ್ತೇನೆಯೇ ಹೊರತು ಬೇಡಿಕೊಂಡಲ್ಲ. ನನ್ನ ಜೀವ ಇರೋವರೆಗೆ ನಾನು ಕೆಲಸ ಮಾಡುತ್ತೇನೆ’ ಎಂದಿದ್ದಾರೆ ಅಕ್ಷಯ್ ಕುಮಾರ್.

ಇದನ್ನೂ ಓದಿ: ‘ವಿಧಿ ಬದಲಿಸಲು ಸಾಧ್ಯವಿಲ್ಲ’; ಸಿನಿಮಾ ಸೋಲಿನ ಬಗ್ಗೆ ಅಕ್ಷಯ್ ಕುಮಾರ್ ಬೇಸರದ ಮಾತು

‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ಅಕ್ಷಯ್ ಕುಮಾರ್ ದೊಡ್ಡ ಫ್ಲಾಪ್ ಕಂಡರು. ‘ಸರ್ಫಿರಾ’ ಕೂಡ ಕಳಪೆ ಗಳಿಕೆ ಮಾಡಿತು. ಅವರ ನಟನೆಯ ‘ಸೆಲ್ಫಿ’, ‘ಮಿಷನ್ ರಾಣಿಗಂಜ್’ ಮೊದಲಾದ ಸಿನಿಮಾಗಳ ಕಥೆಯೂ ಇದೆ. ‘ಖೇಲ್ ಖೇಲ್ ಮೇ’ ಚಿತ್ರ ಆಗಸ್ಟ್ 15ರಂದು ಬಿಡುಗಡೆ ಆಗಲಿದೆ. ಇದನ್ನು ಹೊರತುಪಡಿಸಿ ಇನ್ನೂ ಎರಡು ಸಿನಿಮಾಗಳು ಈ ವರ್ಷ ರಿಲೀಸ್ ಆಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ