AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆತ್ತಲೆ ಚಿತ್ರ ಕಳಿಸುವಂತೆ ಮಗಳಿಗೆ ಹೇಳಿದ್ದ: ಶಾಕಿಂಗ್ ವಿಷಯ ಬಿಚ್ಚಿಟ್ಟ ಬಾಲಿವುಡ್ ಸೂಪರ್ ಸ್ಟಾರ್

Akshay Kumar daughter: ನಟ ಅಕ್ಷಯ್ ಕುಮಾರ್ ಬಾಲಿವುಡ್​ನ ಸೂಪರ್ ಸ್ಟಾರ್. ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಹಲವಾರು ರಾಷ್ಟ್ರ ನಾಯಕರುಗಳೊಟ್ಟಿಗೆ ಬಲು ಆತ್ಮೀಯ ಗೆಳೆತನವನ್ನು ಅಕ್ಷಯ್ ಕುಮಾರ್ ಹೊಂದಿದ್ದಾರೆ. ಇಷ್ಟೆಲ್ಲಾ ಇದ್ದರೂ ಸಹ ಅಕ್ಷಯ್ ಕುಮಾರ್ ಅವರ ಮಗಳು ದೌರ್ಜನ್ಯಕ್ಕೆ ಗುರಿಯಾಗಿದ್ದಾರೆ. ಅದನ್ನು ಅವರೇ ವಿವರಿಸಿದ್ದಾರೆ.

ಬೆತ್ತಲೆ ಚಿತ್ರ ಕಳಿಸುವಂತೆ ಮಗಳಿಗೆ ಹೇಳಿದ್ದ: ಶಾಕಿಂಗ್ ವಿಷಯ ಬಿಚ್ಚಿಟ್ಟ ಬಾಲಿವುಡ್ ಸೂಪರ್ ಸ್ಟಾರ್
Akshay Kumar Daughter
ಮಂಜುನಾಥ ಸಿ.
|

Updated on:Oct 04, 2025 | 1:55 PM

Share

ಸೂಪರ್ ಸ್ಟಾರ್​​ಗಳೆಂದರೆ ಅವರಿಗೆ ಯಾವುದೇ ಕಷ್ಟಗಳಿರುವುದಿಲ್ಲ. ಕೈಗೊಬ್ಬರು, ಕಾಲಿಗೊಬ್ಬರು ಆಳುಗಳಿರುತ್ತಾರೆ, ಐಶಾರಾಮಿ ಬಂಗಲೆ, ಐಶಾರಾಮಿ ಕಾರುಗಳು, ನೂರಾರು ಕೋಟಿ ಹಣ ಎಲ್ಲವೂ ಇರುತ್ತದೆ. ಆದರೆ ಅವರಿಗೆ ಬೇರೆಯದ್ದೇ ರೀತಿಯ ಸಮಸ್ಯೆಗಳು, ಮಾನಸಿಕ ಹಿಂಸೆಗಳು ಎದುರಾಗುತ್ತವೆ. ಇದೀಗ ಬಾಲಿವುಡ್​​ನ (Bollywood) ಸೂಪರ್ ಸ್ಟಾರ್ ನಟರೊಬ್ಬರು, ತಮಗೆ ಎದುರಾದ ಕಷ್ಟವೊಂದನ್ನು ಹೇಳಿಕೊಂಡಿದ್ದಾರೆ. ತಮ್ಮ ಮಗಳೊಟ್ಟಿಗೆ ಅನಾಮನಿಕನೊಬ್ಬನ ಕೆಟ್ಟ ವರ್ತನೆ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಮುಂಬೈನಲ್ಲಿ ನಡೆದಿದ್ದ ಸೈಬರ್ ಜಾಗೃತಿ ಸಪ್ತಾಹ 2025ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಕ್ಷಯ್ ಕುಮಾರ್, ತಮ್ಮ 13 ವರ್ಷದ ಪುತ್ರಿ ಹೇಗೆ ಸೈಬರ್ ಲೈಂಗಿಕ ದೌರರ್ಜನ್ಯಕ್ಕೆ ಒಳಗಾಗಿದ್ದರು ಎಂಬುದನ್ನು ನಿರ್ಭೀತಿಯಿಂದ ಹೇಳಿಕೊಂಡಿದ್ದಾರೆ. ಆ ಮೂಲಕ ಇತರರು ಸಹ ತಮಗೆ ಆದ ಅನ್ಯಾಯದ ಬಗ್ಗೆ ಬಹಿರಂಗವಾಗಿ ಮಾತನಾಡುವ ಹಾಗೂ ಧೈರ್ಯವಾಗಿ ದೂರುಗಳನ್ನು ದಾಖಲಿಸುವ ಸ್ಪೂರ್ತಿ ತುಂಬಿದ್ದಾರೆ.

ಸೈಬರ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅಕ್ಷಯ್ ಕುಮಾರ್, ‘ನನ್ನ 13 ವರ್ಷದ ಪುತ್ರಿ ಆನ್​ಲೈನ್​​​ನಲ್ಲಿ ಗೇಮ್ ಆಡುತ್ತಿದ್ದರು. ಆನ್​​ಲೈನ್​​​ನಲ್ಲಿ ಅನಾಮಿಕನೊಟ್ಟಿಗೆ ಗೇಮ್​​ ನಡೆದಿತ್ತು. ಆ ಬದಿಯ ವ್ಯಕ್ತಿ ನೀನು ಪುರುಷನೋ ಅಥವಾ ಮಹಿಳೆಯೋ ಎಂದು ಕೇಳಿದ್ದಾನೆ. ನನ್ನ ಪುತ್ರಿ ತಾನು ಯುವತಿ ಎಂದು ಹೇಳಿದ ಕೂಡಲೇ, ಆ ಬದಿಯಲ್ಲಿದ್ದ ವ್ಯಕ್ತಿ ಬೆತ್ತಲೆ ಚಿತ್ರಗಳನ್ನು ಕಳಿಸುವಂತೆ ಕೇಳಿದ್ದಾನೆ. ಇದರಿಂದ ಆತಂಕಕ್ಕೆ ಒಳಗಾದ ನನ್ನ ಪುತ್ರಿ ಕೂಡಲೇ ಹೋಗಿ ನನ್ನ ಪತ್ನಿಯ ಬಳಿ ಅಂದರೆ ಆಕೆಯ ತಾಯಿಯ ಬಳಿ ವಿಷಯ ಹೇಳಿದ್ದಾಳೆ’ ಎಂದಿದ್ದಾರೆ ಅಕ್ಷಯ್ ಕುಮಾರ್.

ಇದನ್ನೂ ಓದಿ:ಬದಲಾಗೋದೇ ಇಲ್ಲ ಅಕ್ಷಯ್ ಕುಮಾರ್ ಅದೃಷ್ಟ; ಹೊಸ ಚಿತ್ರ, ಮತ್ತದೇ ಹೀನಾಯ ಕಲೆಕ್ಷನ್

‘ಈ ರೀತಿಯೇ ಆನ್​ಲೈನ್ ದೌರ್ಜನ್ಯಗಳು ಶುರುವಾಗುತ್ತವೆ. ನನ್ನ ಮಗಳು ತಾಯಿಯ ಬಳಿ ಹೇಳಿಕೊಂಡಿದ್ದಕ್ಕೆ ಅನಾಹುತ ಆಗಲಿಲ್ಲ. ಆದರೆ ಎಲ್ಲರೊಟ್ಟಿಗೂ ಹೀಗೆ ಆಗುವುದಿಲ್ಲ. ಕೆಲವು ಮಕ್ಕಳು ಮೈಮರೆತು, ದೂರದೃಷ್ಟಿ ಇಲ್ಲದೆ ಚಿತ್ರಗಳನ್ನು, ವಿಡಿಯೋಗಳನ್ನು ಕಳಿಸಿದ್ದಿದೆ. ಅದೇ ವಿಡಿಯೋ, ಚಿತ್ರಗಳನ್ನು ಇರಿಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಾರೆ. ಹಣ ದೋಚುತ್ತಾರೆ. ಕೆಲವು ಪ್ರಕರಣಗಳಲ್ಲಿ ಸಂತ್ರಸ್ತ ಯುವತಿಯರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳೂ ಸಹ ಇವೆ’ ಎಂದಿದ್ದಾರೆ ಅಕ್ಷಯ್ ಕುಮಾರ್.

ಅಕ್ಷಯ್ ಕುಮಾರ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮೊದಲ ಮಗನ ಹೆಸರು ಆರವ್, ಆತ ವಿದೇಶದಲ್ಲಿ ವಿದ್ಯಾಭ್ಯಾಸದಲ್ಲಿ ತೊಡಗಿದ್ದಾನೆ. ಮಗಳ ಹೆಸರು ನಿತಾರಾ. ಅವರ ವಯಸ್ಸಿನ್ನೂ 13 ವರ್ಷಗಳಾಗಿದ್ದು ಮುಂಬೈನ ಪ್ರತಿಷ್ಠಿತ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದೀಗ ನಿತಾರಾ ಅವರಿಗೆ ಆನ್​ಲೈನ್​​​ನಲ್ಲಿ ಕಿರುಕುಳ ನೀಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Sat, 4 October 25

Follow Us
ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್
ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ