AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಮಾತೆ ಜೊತೆ ಅಕ್ಷಯ್​ ಕುಮಾರ್​ ಪುತ್ರಿ; ಮಕ್ಕಳಿಗೆ ಈ ಅನುಭವ ಬೇಕು ಎಂದ ಸ್ಟಾರ್​ ನಟ

ಅಕ್ಷಯ್​ ಕುಮಾರ್​ ಪುತ್ರಿ ನಿತಾರಾಗೆ 9 ವರ್ಷ ವಯಸ್ಸು. ಮಗಳ ಜೊತೆಯಲ್ಲಿ ಅಕ್ಕಿ ಈಗ ಹಾಲಿಡೇ ಎಂಜಾಯ್​ ​ಮಾಡುತ್ತಿದ್ದಾರೆ.

ಗೋಮಾತೆ ಜೊತೆ ಅಕ್ಷಯ್​ ಕುಮಾರ್​ ಪುತ್ರಿ; ಮಕ್ಕಳಿಗೆ ಈ ಅನುಭವ ಬೇಕು ಎಂದ ಸ್ಟಾರ್​ ನಟ
ಮಗಳು ನಿತಾರಾ ಜೊತೆ ಅಕ್ಷಯ್​ ಕುಮಾರ್​
TV9 Web
| Edited By: |

Updated on: Jan 17, 2022 | 12:55 PM

Share

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಜೊತೆಗೆ ಅವರು ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಾರೆ. ಶೂಟಿಂಗ್​ ವೇಳಾಪಟ್ಟಿ ವಿಚಾರದಲ್ಲಿ ಅವರು ತುಂಬ ಕಟ್ಟುನಿಟ್ಟು. ಸರಿಯಾದ ಸಮಯಕ್ಕೆ ಚಿತ್ರೀಕರಣ ಶುರುವಾಗಬೇಕು, ಸರಿಯಾದ ಸಮಯಕ್ಕೆ ಪ್ಯಾಕಪ್​ ಆಗಬೇಕು. ಅದು ಅಕ್ಷಯ್​ ಕುಮಾರ್ ಪಾಲಿಸಿ. ಹಾಗಾಗಿ ಬಹಳ ಫಾಸ್ಟ್​ ಆಗಿ ಅವರ ಸಿನಿಮಾಗಳು ತಯಾರಾಗುತ್ತವೆ. ಇನ್ನುಳಿದ ಸಮಯವನ್ನು ಅವರು​ ಕುಟುಂಬದವರಿಗಾಗಿ (Akshay Kumar Family) ಮೀಸಲಿಡುತ್ತಾರೆ. ಈಗ ಅವರು ಪುತ್ರಿ ನಿತಾರಾ ಜೊತೆ ಕಾಲ ಕಳೆಯುತ್ತಿದ್ದಾರೆ. ಸದ್ಯ ಅವರು ರಣಥಂಬೋರ್​ ರಾಷ್ಟ್ರೀಯ ಉದ್ಯಾನಕ್ಕೆ (Ranthambore National Park) ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಾಣಿಗಳನ್ನು ಮುದ್ದಿಸಿದ್ದಾರೆ. ಆ ಕ್ಷಣದ ವಿಡಿಯೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಕ್ಷಯ್​ ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ದಂಪತಿಗೆ ಇಬ್ಬರು ಮಕ್ಕಳು. ಪುತ್ರ ಆರವ್​ ಕುಮಾರ್​ ಅವರಿಗೆ ಈಗ 19 ವರ್ಷ. ಅವರು ಲಂಡನ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ಪುತ್ರಿ ನಿತಾರಾಗೆ 9 ವರ್ಷ ವಯಸ್ಸು. ಮಗಳ ಜೊತೆಯಲ್ಲಿ ಅಕ್ಕಿ ಹಾಲಿಡೇ ಎಂಜಾಯ್​ ಮಾಡುತ್ತಿದ್ದಾರೆ. ಮಗಳನ್ನು ಕರೆದುಕೊಂಡು ರಣಥಂಬೋರ್​ ಉದ್ಯಾನವನದಲ್ಲಿ ಓಡಾಡುತ್ತಿರುವ ಅವರು ಗೋವುಗಳಿಗೆ ಆಹಾರ ನೀಡಿ ಖುಷಿಪಟ್ಟಿದ್ದಾರೆ. ಈ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಈ ಮಣ್ಣಿನ ವಾಸನೆ, ಗೋವುಗಳಿಗೆ ಆಹಾರ ನೀಡೋದು, ಮರಗಳಿಂದ ಬೀಸುವ ತಂಗಾಳಿ.. ಇವುಗಳ ಅನುಭವನ್ನು ಮಕ್ಕಳಿಗೆ ನೀಡುವುದರಲ್ಲಿ ಏನೋ ಒಂಥರಾ ಖುಷಿ ಇದೆ. ನಾಳೆ ಆಕೆಗೆ ಕಾಡಿನಲ್ಲಿ ಹುಲಿ ಕಾಣಿಸಿದರೆ ಇನ್ನೂ ಸಂತೋಷವಾಗಲಿದೆ. ಸುಂದರವಾದ ರಣಥಂಬೋರ್​ ಉದ್ಯಾನಕ್ಕೆ ಭೇಟಿ ನೀಡಿದ್ದೇವೆ. ಈ ರೀತಿಯ ಅದ್ಭುತವಾದ ಸ್ಥಳಗಳನ್ನು ನೀಡಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು’ ಎಂದು ಅಕ್ಷಯ್​ ಕುಮಾರ್​ ಬರೆದುಕೊಂಡಿದ್ದಾರೆ.

View this post on Instagram

A post shared by Akshay Kumar (@akshaykumar)

ಅಕ್ಷಯ್ ಕುಮಾರ್ ಅವರು ತಮ್ಮ ಪತ್ನಿ ಟ್ವಿಂಕಲ್ ಖನ್ನಾ ಅವರ ಹುಟ್ಟುಹಬ್ಬವನ್ನು ಆಚರಿಸಲು ಮತ್ತು ಹೊಸ ವರ್ಷವನ್ನು ಸಂಭ್ರಮಿಸಲು ಮಾಲ್ಡೀವ್ಸ್‌ಗೆ ತೆರಳಿದ್ದರು. ಅಲ್ಲಿನ ಸಮುದ್ರದ ತೀರದಲ್ಲಿ ನಿಂತುಕೊಂಡು ಬೆಳಿಗ್ಗೆ ಗಾಯತ್ರಿ ಮಂತ್ರವನ್ನು ಪಠಿಸುವ ವಿಡಿಯೋವನ್ನು ಅವರು ಹಂಚಿಕೊಂಡಿದ್ದರು. ಆ ವಿಡಿಯೋ ಕೂಡ ಸಖತ್​ ವೈರಲ್​ ಆಗಿತ್ತು. ಹೀಗೆ ತಮ್ಮ ಖಾಸಗಿ ಜೀವನದ ಬಗ್ಗೆ ಹಲವು ಅಪ್​ಡೇಟ್​ಗಳನ್ನು ಅಕ್ಷಯ್​ ಕುಮಾರ್​ ನೀಡುತ್ತಾ ಇರುತ್ತಾರೆ.

ಇದನ್ನೂ ಓದಿ:

ಅಕ್ಷಯ್​ ಕುಮಾರ್​ ಮೇಲೆ ಕಣ್ಣಿಟ್ಟ ‘ಪುಷ್ಪ’ ನಿರ್ದೇಶಕ ಸುಕುಮಾರ್​; ಅಭಿಮಾನಿಗಳಲ್ಲಿ ಹೆಚ್ಚಿತು ನಿರೀಕ್ಷೆ

ಅಕ್ಷಯ್​ ಕುಮಾರ್​ಗೆ 170 ಕೋಟಿ ರೂ. ಸಂಭಾವನೆ; ಹೊಸ ಸಿನಿಮಾ ಬಗ್ಗೆ ಹರಿದಾಡುತ್ತಿದೆ ಬಿಗ್ ನ್ಯೂಸ್​

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್