AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂರ್ಯವಂಶಿ’ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ನಿಂತಿದೆ ರಾಜಮೌಳಿ ‘ಆರ್​ಆರ್​ಆರ್’ ಭವಿಷ್ಯ; ಏನಿದು ಸಮಾಚಾರ?

ಮಹಾರಾಷ್ಟ್ರ ಸರ್ಕಾರ ಚಿತ್ರಮಂದಿರದಲ್ಲಿ ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಈ ಆದೇಶದ ನಂತರದಲ್ಲಿ ತೆರೆಗೆ ಬರುತ್ತಿರುವ ಹಿಂದಿಯ ಮೊದಲ ದೊಡ್ಡ ಬಜೆಟ್​ ಸಿನಿಮಾ ಎಂದರೆ ಅದು ‘ಸೂರ್ಯವಂಶಿ’.

‘ಸೂರ್ಯವಂಶಿ’ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ನಿಂತಿದೆ ರಾಜಮೌಳಿ ‘ಆರ್​ಆರ್​ಆರ್’ ಭವಿಷ್ಯ; ಏನಿದು ಸಮಾಚಾರ?
ಅಕ್ಷಯ್​ ಕುಮಾರ್​-ರಾಜಮೌಳಿ
TV9 Web
| Edited By: |

Updated on: Oct 24, 2021 | 6:01 PM

Share

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’​ ಸಿನಿಮಾ 2022ರ ಜನವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಈ ಬಗ್ಗೆ ಈಗಾಗಲೇ ಚಿತ್ರತಂಡ ಘೋಷಣೆ ಮಾಡಿದೆ. ಆ ಸಂದರ್ಭದಲ್ಲಿ ಸಾಕಷ್ಟು ಸಿನಿಮಾಗಳು ಕೂಡ ರಿಲೀಸ್​ಗೆ ರೆಡಿ ಇವೆ. ಈ ಮಧ್ಯೆ, ‘ಆರ್​ಆರ್​ಆರ್​’ ರಿಲೀಸ್​ ಭವಿಷ್ಯ ‘ಸೂರ್ಯವಂಶಿ’ ಸಿನಿಮಾ ಬಾಕ್ಸ್​ ಆಫೀಸ್​ ಕಲೆಕ್ಷನ್​ ಆಧರಿಸಿ ನಿರ್ಧಾರವಾಗಲಿದೆ ಎನ್ನುವ ಸುದ್ದಿ ಜೋರಾಗಿದೆ.

ಅಕ್ಷಯ್​ ಕುಮಾರ್​ ನಟನೆಯ ‘ಬೆಲ್​ ಬಾಟಮ್​’  ಸಿನಿಮಾ ಕೆಲ ತಿಂಗಳ ಹಿಂದೆ ತೆರೆಗೆ ಬಂದಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಚಿತ್ರಮಂದಿರ ಓಪನ್​ ಆಗಿರದ ಕಾರಣ ಹಣ ಗಳಿಕೆ ವಿಚಾರದಲ್ಲಿ ಸಿನಿಮಾ ಮಕಾಡೆ ಮಲಗಿತು. ಈಗ ಮಹಾರಾಷ್ಟ್ರ ಸರ್ಕಾರ ಚಿತ್ರಮಂದಿರದಲ್ಲಿ ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಈ ಆದೇಶದ ನಂತರದಲ್ಲಿ ತೆರೆಗೆ ಬರುತ್ತಿರುವ ಹಿಂದಿಯ ಮೊದಲ ದೊಡ್ಡ ಬಜೆಟ್​ ಸಿನಿಮಾ ಎಂದರೆ ಅದು ‘ಸೂರ್ಯವಂಶಿ’. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಹೇಗೆ ಕಲೆಕ್ಷನ್​ ಮಾಡುತ್ತದೆ ಎನ್ನುವ ಆಧಾರದ ಮೇಲೆ ಸಿನಿಮಂದಿಯ ಮನಸ್ಥಿತಿ ಈಗ ಹೇಗಿದೆ ಎಂಬುದು ಗೊತ್ತಾಗುತ್ತದೆ.

ಒಂದೊಮ್ಮೆ ‘ಸೂರ್ಯವಂಶಿ’ ಒಳ್ಳೆಯ ಕಲೆಕ್ಷನ್​ ಮಾಡಿದರೆ, ‘ಆರ್​ಆರ್​ಆರ್​’ ಸಿನಿಮಾ ಪ್ರಮೋಷನ್​ ಕಾರ್ಯ ಆರಂಭಿಸಲಿದೆ. ಈ ಚಿತ್ರ ಕಮಾಯಿಯಲ್ಲಿ ಸೋತರೆ ಚಿತ್ರತಂಡ ರಿಲೀಸ್​ ಡೇಟ್​ ಮುಂದೂಡುವ ಬಗ್ಗೆ ಆಲೋಚಿಸಬಹುದು ಎನ್ನುವ ಮಾತಿದೆ. ಒಟ್ಟಿನಲ್ಲಿ ‘ಸೂರ್ಯವಂಶಿ’ ಕಲೆಕ್ಷನ್​ ಆಧರಿಸಿ ಮುಂದಿನ ವಿಚಾರ ನಿರ್ಧಾರವಾಗಲಿದೆ.

ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ರಿಲೀಸ್​ ಡೇಟ್​ ಈಗಾಗಲೇ ಘೋಷಣೆ ಆಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸಿನಿಮಾ ಜನವರಿ 13ರಂದು ತೆರೆಗೆ ಬರುತ್ತಿದೆ. ಬಿಗ್​ ಬಜೆಟ್​ ಸಿನಿಮಾ ಇದಾಗಿದ್ದು, ಈ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅಂದರೆ ಜನವರಿ 14ರಂದು ‘ರಾಧೆ ಶ್ಯಾಮ್​’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಪ್ರಭಾಸ್​ ನಟನೆಯ ಈ ಸಿನಿಮಾ ಕೂಡ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದೆ.  ಪವನ್​ ಕಲ್ಯಾಣ್​ ಹಾಗೂ ರಾಣಾ ದಗ್ಗುಬಾಟಿ ಅಭಿನಯದ ‘ಭೀಮ್ಲಾ ನಾಯಕ್​’ ಸಿನಿಮಾ ಜನವರಿ 12ರಂದು ರಿಲೀಸ್​ ಆಗುತ್ತಿದೆ. ‘ಸೂರ್ಯವಂಶಿ’ ಸಿನಿಮಾ ಚೆನ್ನಾಗಿದ್ದು, ಯಶಸ್ಸು ಕಾಣದಿದ್ದರೆ ಇವುಗಳ ಪೈಕಿ ಕೆಲ ಸಿನಿಮಾಗಳ ರಿಲೀಸ್​ ಡೇಟ್​ ಕೂಡ ಮುಂದೂಡಲ್ಪಡಬಹುದು.

ಇದನ್ನೂ ಓದಿ: ಅಕ್ಷಯ್​ ಕುಮಾರ್​ಗೂ ಆಗಿತ್ತು ಲೈಂಗಿಕ ಕಿರುಕುಳ; ಲಿಫ್ಟ್​ನಲ್ಲಿ ನಡೆದ ಕರಾಳ ಘಟನೆ ಬಗ್ಗೆ ಅಕ್ಕಿ ಮಾತು

ಸೂರ್ಯವಂಶಿ ಬಿಡುಗಡೆಗೆ ಅಂತೂ ದಿನ ಕೂಡಿಬಂತು; ಇಂದು ದಿನಾಂಕ ಘೋಷಣೆ ಮಾಡಿದ ಅಕ್ಷಯ್​ ಕುಮಾರ್​-ಕತ್ರೀನಾ ಕೈಫ್​

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ