AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂರ್ಯವಂಶಿ’ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ನಿಂತಿದೆ ರಾಜಮೌಳಿ ‘ಆರ್​ಆರ್​ಆರ್’ ಭವಿಷ್ಯ; ಏನಿದು ಸಮಾಚಾರ?

ಮಹಾರಾಷ್ಟ್ರ ಸರ್ಕಾರ ಚಿತ್ರಮಂದಿರದಲ್ಲಿ ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಈ ಆದೇಶದ ನಂತರದಲ್ಲಿ ತೆರೆಗೆ ಬರುತ್ತಿರುವ ಹಿಂದಿಯ ಮೊದಲ ದೊಡ್ಡ ಬಜೆಟ್​ ಸಿನಿಮಾ ಎಂದರೆ ಅದು ‘ಸೂರ್ಯವಂಶಿ’.

‘ಸೂರ್ಯವಂಶಿ’ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ನಿಂತಿದೆ ರಾಜಮೌಳಿ ‘ಆರ್​ಆರ್​ಆರ್’ ಭವಿಷ್ಯ; ಏನಿದು ಸಮಾಚಾರ?
ಅಕ್ಷಯ್​ ಕುಮಾರ್​-ರಾಜಮೌಳಿ
TV9 Web
| Edited By: |

Updated on: Oct 24, 2021 | 6:01 PM

Share

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’​ ಸಿನಿಮಾ 2022ರ ಜನವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಈ ಬಗ್ಗೆ ಈಗಾಗಲೇ ಚಿತ್ರತಂಡ ಘೋಷಣೆ ಮಾಡಿದೆ. ಆ ಸಂದರ್ಭದಲ್ಲಿ ಸಾಕಷ್ಟು ಸಿನಿಮಾಗಳು ಕೂಡ ರಿಲೀಸ್​ಗೆ ರೆಡಿ ಇವೆ. ಈ ಮಧ್ಯೆ, ‘ಆರ್​ಆರ್​ಆರ್​’ ರಿಲೀಸ್​ ಭವಿಷ್ಯ ‘ಸೂರ್ಯವಂಶಿ’ ಸಿನಿಮಾ ಬಾಕ್ಸ್​ ಆಫೀಸ್​ ಕಲೆಕ್ಷನ್​ ಆಧರಿಸಿ ನಿರ್ಧಾರವಾಗಲಿದೆ ಎನ್ನುವ ಸುದ್ದಿ ಜೋರಾಗಿದೆ.

ಅಕ್ಷಯ್​ ಕುಮಾರ್​ ನಟನೆಯ ‘ಬೆಲ್​ ಬಾಟಮ್​’  ಸಿನಿಮಾ ಕೆಲ ತಿಂಗಳ ಹಿಂದೆ ತೆರೆಗೆ ಬಂದಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಚಿತ್ರಮಂದಿರ ಓಪನ್​ ಆಗಿರದ ಕಾರಣ ಹಣ ಗಳಿಕೆ ವಿಚಾರದಲ್ಲಿ ಸಿನಿಮಾ ಮಕಾಡೆ ಮಲಗಿತು. ಈಗ ಮಹಾರಾಷ್ಟ್ರ ಸರ್ಕಾರ ಚಿತ್ರಮಂದಿರದಲ್ಲಿ ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಈ ಆದೇಶದ ನಂತರದಲ್ಲಿ ತೆರೆಗೆ ಬರುತ್ತಿರುವ ಹಿಂದಿಯ ಮೊದಲ ದೊಡ್ಡ ಬಜೆಟ್​ ಸಿನಿಮಾ ಎಂದರೆ ಅದು ‘ಸೂರ್ಯವಂಶಿ’. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಹೇಗೆ ಕಲೆಕ್ಷನ್​ ಮಾಡುತ್ತದೆ ಎನ್ನುವ ಆಧಾರದ ಮೇಲೆ ಸಿನಿಮಂದಿಯ ಮನಸ್ಥಿತಿ ಈಗ ಹೇಗಿದೆ ಎಂಬುದು ಗೊತ್ತಾಗುತ್ತದೆ.

ಒಂದೊಮ್ಮೆ ‘ಸೂರ್ಯವಂಶಿ’ ಒಳ್ಳೆಯ ಕಲೆಕ್ಷನ್​ ಮಾಡಿದರೆ, ‘ಆರ್​ಆರ್​ಆರ್​’ ಸಿನಿಮಾ ಪ್ರಮೋಷನ್​ ಕಾರ್ಯ ಆರಂಭಿಸಲಿದೆ. ಈ ಚಿತ್ರ ಕಮಾಯಿಯಲ್ಲಿ ಸೋತರೆ ಚಿತ್ರತಂಡ ರಿಲೀಸ್​ ಡೇಟ್​ ಮುಂದೂಡುವ ಬಗ್ಗೆ ಆಲೋಚಿಸಬಹುದು ಎನ್ನುವ ಮಾತಿದೆ. ಒಟ್ಟಿನಲ್ಲಿ ‘ಸೂರ್ಯವಂಶಿ’ ಕಲೆಕ್ಷನ್​ ಆಧರಿಸಿ ಮುಂದಿನ ವಿಚಾರ ನಿರ್ಧಾರವಾಗಲಿದೆ.

ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ರಿಲೀಸ್​ ಡೇಟ್​ ಈಗಾಗಲೇ ಘೋಷಣೆ ಆಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸಿನಿಮಾ ಜನವರಿ 13ರಂದು ತೆರೆಗೆ ಬರುತ್ತಿದೆ. ಬಿಗ್​ ಬಜೆಟ್​ ಸಿನಿಮಾ ಇದಾಗಿದ್ದು, ಈ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅಂದರೆ ಜನವರಿ 14ರಂದು ‘ರಾಧೆ ಶ್ಯಾಮ್​’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಪ್ರಭಾಸ್​ ನಟನೆಯ ಈ ಸಿನಿಮಾ ಕೂಡ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದೆ.  ಪವನ್​ ಕಲ್ಯಾಣ್​ ಹಾಗೂ ರಾಣಾ ದಗ್ಗುಬಾಟಿ ಅಭಿನಯದ ‘ಭೀಮ್ಲಾ ನಾಯಕ್​’ ಸಿನಿಮಾ ಜನವರಿ 12ರಂದು ರಿಲೀಸ್​ ಆಗುತ್ತಿದೆ. ‘ಸೂರ್ಯವಂಶಿ’ ಸಿನಿಮಾ ಚೆನ್ನಾಗಿದ್ದು, ಯಶಸ್ಸು ಕಾಣದಿದ್ದರೆ ಇವುಗಳ ಪೈಕಿ ಕೆಲ ಸಿನಿಮಾಗಳ ರಿಲೀಸ್​ ಡೇಟ್​ ಕೂಡ ಮುಂದೂಡಲ್ಪಡಬಹುದು.

ಇದನ್ನೂ ಓದಿ: ಅಕ್ಷಯ್​ ಕುಮಾರ್​ಗೂ ಆಗಿತ್ತು ಲೈಂಗಿಕ ಕಿರುಕುಳ; ಲಿಫ್ಟ್​ನಲ್ಲಿ ನಡೆದ ಕರಾಳ ಘಟನೆ ಬಗ್ಗೆ ಅಕ್ಕಿ ಮಾತು

ಸೂರ್ಯವಂಶಿ ಬಿಡುಗಡೆಗೆ ಅಂತೂ ದಿನ ಕೂಡಿಬಂತು; ಇಂದು ದಿನಾಂಕ ಘೋಷಣೆ ಮಾಡಿದ ಅಕ್ಷಯ್​ ಕುಮಾರ್​-ಕತ್ರೀನಾ ಕೈಫ್​

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು