AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಜಾಮಾ ಮಸೀದಿ ಬಳಿ ಕಾಣಿಸಿಕೊಂಡ ಅಕ್ಷಯ್​ ಕುಮಾರ್​; ಸುತ್ತುವರಿದ ಅಭಿಮಾನಿಗಳು

Jama Masjid: ಅಕ್ಷಯ್​ ಕುಮಾರ್​ ಅವರು ಜಾಮಾ ಮಸೀದಿ ಬಳಿ ಬಂದಾಗ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಅವರ ಜೊತೆ ಬಾಡಿ ಗಾರ್ಡ್ಸ್​ ಕೂಡ ಇದ್ದರು. ಈ ವಿಡಿಯೋ ವೈರಲ್​ ಆಗಿದೆ.

Akshay Kumar: ಜಾಮಾ ಮಸೀದಿ ಬಳಿ ಕಾಣಿಸಿಕೊಂಡ ಅಕ್ಷಯ್​ ಕುಮಾರ್​; ಸುತ್ತುವರಿದ ಅಭಿಮಾನಿಗಳು
ಜಾಮಾ ಮಸೀದಿ ಬಳಿ ಕಾಣಿಸಿಕೊಂಡ ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 05, 2023 | 10:06 PM

Share

ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಹೊಸ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ದೇಶದ ವಿವಿಧ ಲೊಕೇಷನ್​ಗಳಲ್ಲಿ ಅವರು ಶೂಟಿಂಗ್​ ಮಾಡುತ್ತಿದ್ದಾರೆ. ವೇಗವಾಗಿ ಸಿನಿಮಾ ಕೆಲಸಗಳನ್ನು ಮುಗಿಸುವಲ್ಲಿ ಅಕ್ಷಯ್​ ಕುಮಾರ್​ ಎತ್ತಿದ ಕೈ. ಅನಗತ್ಯವಾಗಿ ಅವರು ಬಿಡುವು ಪಡೆದುಕೊಳ್ಳುವುದಿಲ್ಲ. ಈಗ ಅವರು ದೆಹಲಿಯ ಜಾಮಾ ಮಸೀದಿ (Jama Masjid) ಬಳಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರು ಸಡನ್​ ಆಗಿ ಕಾಣಿಸಿಕೊಂಡಿದ್ದು ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ತಮ್ಮ ನೆಚ್ಚಿನ ನಟನನ್ನು ನೋಡಲು ಜನರು (Akshay Kumar Fans) ಸುತ್ತುವರಿದಿದ್ದಾರೆ. ನೆರೆದಿದ್ದ ಎಲ್ಲ ಅಭಿಮಾನಿಗಳ ಕಡೆಗೆ ಅಕ್ಷಯ್​ ಕುಮಾರ್​ ಕೈ ಬೀಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಹೊಸ ಸಿನಿಮಾದ ಚಿತ್ರೀಕರಣದ ಸಲುವಾಗಿ ಅಕ್ಷಯ್​ ಕುಮಾರ್​ ಅವರು ಜಾಮಾ ಮಸೀದಿ ಬಳಿ ಬಂದಾಗ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಅವರು ಕಾರು ಹತ್ತುವವರೆಗೂ ಬಾಡಿ ಗಾರ್ಡ್ಸ್​ ಜೊತೆಯಲ್ಲೇ ಇದ್ದರು. ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಎಷ್ಟೇ ಸಿನಿಮಾಗಳು ಸೋತರೂ ಕೂಡ ಅವರ ಬಗ್ಗೆ ಜನರಿಗೆ ಇರುವ ಕ್ರೇಜ್​ ಕಮ್ಮಿ ಆಗಿಲ್ಲ. ಅಷ್ಟರಮಟ್ಟಿಗೆ ಅವರು ಹವಾ ಕ್ರಿಯೇಟ್​ ಮಾಡಿದ್ದಾರೆ.

ಬರೀ ಸಿನಿಮಾದಲ್ಲಿ ಮಾತ್ರವಲ್ಲದೇ ನಿಜ ಜೀವನದಲ್ಲೂ ಕೂಡ ಅಕ್ಷಯ್​ ಕುಮಾರ್​ ಅವರು ತುಂಬ ಆ್ಯಕ್ಟೀವ್​ ಆಗಿರುತ್ತಾರೆ. ಪ್ರತಿದಿನ ಅವರು ವ್ಯಾಯಾಮ ತಪ್ಪಿಸುವುದಿಲ್ಲ. ಕ್ರೀಡೆ ಬಗ್ಗೆಯೂ ಅವರಿಗೆ ಸಖತ್​ ಆಸಕ್ತಿ ಇದೆ. ಇತ್ತೀಚೆಗೆ ಅವರು ಪೊಲೀಸರ ಜೊತೆ ವಾಲಿಬಾಲ್​ ಆಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್​ ಆಗಿತ್ತು. ಶೂಟಿಂಗ್​ ಸಲುವಾಗಿ ಡೆಹರಾಡೂನ್​ಗೆ ತೆರಳಿದ್ದ ಅಕ್ಷಯ್​ ಕುಮಾರ್​ ಅವರು ಬಿಡುವಿನ ವೇಳೆ ವಾಲಿಬಾಲ್​ ಆಡಿದ್ದರು. ಅವರ ಪಂದ್ಯವನ್ನು ನೋಡಲು ಸ್ಟೇಡಿಯಂನಲ್ಲಿ ಜನರು ನೆರೆದಿದ್ದರು.

OMG 2: ಶೀಘ್ರದಲ್ಲೇ ರಿಲೀಸ್​ ಆಗಲಿದೆ ಅಕ್ಷಯ್​ ಕುಮಾರ್​ ನಟನೆಯ ‘ಓಹ್​ ಮೈ ಗಾಡ್​ 2’ ಸಿನಿಮಾ; ಒಟಿಟಿಯಲ್ಲೋ? ಚಿತ್ರಮಂದಿರವೋ?

ಅಕ್ಷಯ್​ ಕುಮಾರ್​ ಅವರು ಆಗಾಗ ಟ್ರೋಲ್​ ಆಗುತ್ತಾರೆ ಕೂಡ. ಚಿಕ್ಕ ಪುಟ್ಟ ಕಾರಣಕ್ಕೂ ಅವರನ್ನು ಟೀಕೆ ಮಾಡಲಾಗುತ್ತದೆ. ಇತ್ತೀಚೆಗೆ ಅವರು ದುಬಾರಿ ಬೆಲೆಯ ಬ್ಯಾಗ್​ ಧರಿಸಿದ್ದಕ್ಕೆ ಟ್ರೋಲ್​ ಆಗಿದ್ದರು. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅಕ್ಷಯ್​ ಕುಮಾರ್​ ಅವರು ಐಷಾರಾಮಿ ಜೀವನ ನಡೆಸುತ್ತಾರೆ. ಕೆಲವೇ ದಿನಗಳ ಹಿಂದೆ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಆ ವೇಳೆ ಅವರು ಧರಿಸಿದ್ದ ಬ್ಯಾಗ್​ ಮೇಲೆ ಎಲ್ಲರ ಕಣ್ಣು ಬಿದ್ದಿತ್ತು. ಆ ಬ್ಯಾಗ್​ ಬೆಲೆ 30 ಸಾವಿರ ರೂಪಾಯಿ. ಇಷ್ಟು ದುಬಾರಿ ಬ್ಯಾಗ್​ ಅವಶ್ಯಕತೆ ಇದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದರು. ‘ನಿರ್ಮಾಪಕರಿಗೆ ನೂರಾರು ಕೋಟಿ ರೂಪಾಯಿ ನಷ್ಟ ಮಾಡುವ ಅಕ್ಷಯ್​ ಕುಮಾರ್​ ಈಗ ಶೋಕಿ ಜೀವನ ನಡೆಸುತ್ತಿದ್ದಾರೆ’ ಎಂದೆಲ್ಲ ಕಮೆಂಟ್​ ಮಾಡಲಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!