Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಜಾಮಾ ಮಸೀದಿ ಬಳಿ ಕಾಣಿಸಿಕೊಂಡ ಅಕ್ಷಯ್​ ಕುಮಾರ್​; ಸುತ್ತುವರಿದ ಅಭಿಮಾನಿಗಳು

Jama Masjid: ಅಕ್ಷಯ್​ ಕುಮಾರ್​ ಅವರು ಜಾಮಾ ಮಸೀದಿ ಬಳಿ ಬಂದಾಗ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಅವರ ಜೊತೆ ಬಾಡಿ ಗಾರ್ಡ್ಸ್​ ಕೂಡ ಇದ್ದರು. ಈ ವಿಡಿಯೋ ವೈರಲ್​ ಆಗಿದೆ.

Akshay Kumar: ಜಾಮಾ ಮಸೀದಿ ಬಳಿ ಕಾಣಿಸಿಕೊಂಡ ಅಕ್ಷಯ್​ ಕುಮಾರ್​; ಸುತ್ತುವರಿದ ಅಭಿಮಾನಿಗಳು
ಜಾಮಾ ಮಸೀದಿ ಬಳಿ ಕಾಣಿಸಿಕೊಂಡ ಅಕ್ಷಯ್​ ಕುಮಾರ್​
Follow us
ಮದನ್​ ಕುಮಾರ್​
|

Updated on: Jun 05, 2023 | 10:06 PM

ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಹೊಸ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ದೇಶದ ವಿವಿಧ ಲೊಕೇಷನ್​ಗಳಲ್ಲಿ ಅವರು ಶೂಟಿಂಗ್​ ಮಾಡುತ್ತಿದ್ದಾರೆ. ವೇಗವಾಗಿ ಸಿನಿಮಾ ಕೆಲಸಗಳನ್ನು ಮುಗಿಸುವಲ್ಲಿ ಅಕ್ಷಯ್​ ಕುಮಾರ್​ ಎತ್ತಿದ ಕೈ. ಅನಗತ್ಯವಾಗಿ ಅವರು ಬಿಡುವು ಪಡೆದುಕೊಳ್ಳುವುದಿಲ್ಲ. ಈಗ ಅವರು ದೆಹಲಿಯ ಜಾಮಾ ಮಸೀದಿ (Jama Masjid) ಬಳಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರು ಸಡನ್​ ಆಗಿ ಕಾಣಿಸಿಕೊಂಡಿದ್ದು ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ತಮ್ಮ ನೆಚ್ಚಿನ ನಟನನ್ನು ನೋಡಲು ಜನರು (Akshay Kumar Fans) ಸುತ್ತುವರಿದಿದ್ದಾರೆ. ನೆರೆದಿದ್ದ ಎಲ್ಲ ಅಭಿಮಾನಿಗಳ ಕಡೆಗೆ ಅಕ್ಷಯ್​ ಕುಮಾರ್​ ಕೈ ಬೀಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಹೊಸ ಸಿನಿಮಾದ ಚಿತ್ರೀಕರಣದ ಸಲುವಾಗಿ ಅಕ್ಷಯ್​ ಕುಮಾರ್​ ಅವರು ಜಾಮಾ ಮಸೀದಿ ಬಳಿ ಬಂದಾಗ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಅವರು ಕಾರು ಹತ್ತುವವರೆಗೂ ಬಾಡಿ ಗಾರ್ಡ್ಸ್​ ಜೊತೆಯಲ್ಲೇ ಇದ್ದರು. ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಎಷ್ಟೇ ಸಿನಿಮಾಗಳು ಸೋತರೂ ಕೂಡ ಅವರ ಬಗ್ಗೆ ಜನರಿಗೆ ಇರುವ ಕ್ರೇಜ್​ ಕಮ್ಮಿ ಆಗಿಲ್ಲ. ಅಷ್ಟರಮಟ್ಟಿಗೆ ಅವರು ಹವಾ ಕ್ರಿಯೇಟ್​ ಮಾಡಿದ್ದಾರೆ.

ಬರೀ ಸಿನಿಮಾದಲ್ಲಿ ಮಾತ್ರವಲ್ಲದೇ ನಿಜ ಜೀವನದಲ್ಲೂ ಕೂಡ ಅಕ್ಷಯ್​ ಕುಮಾರ್​ ಅವರು ತುಂಬ ಆ್ಯಕ್ಟೀವ್​ ಆಗಿರುತ್ತಾರೆ. ಪ್ರತಿದಿನ ಅವರು ವ್ಯಾಯಾಮ ತಪ್ಪಿಸುವುದಿಲ್ಲ. ಕ್ರೀಡೆ ಬಗ್ಗೆಯೂ ಅವರಿಗೆ ಸಖತ್​ ಆಸಕ್ತಿ ಇದೆ. ಇತ್ತೀಚೆಗೆ ಅವರು ಪೊಲೀಸರ ಜೊತೆ ವಾಲಿಬಾಲ್​ ಆಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್​ ಆಗಿತ್ತು. ಶೂಟಿಂಗ್​ ಸಲುವಾಗಿ ಡೆಹರಾಡೂನ್​ಗೆ ತೆರಳಿದ್ದ ಅಕ್ಷಯ್​ ಕುಮಾರ್​ ಅವರು ಬಿಡುವಿನ ವೇಳೆ ವಾಲಿಬಾಲ್​ ಆಡಿದ್ದರು. ಅವರ ಪಂದ್ಯವನ್ನು ನೋಡಲು ಸ್ಟೇಡಿಯಂನಲ್ಲಿ ಜನರು ನೆರೆದಿದ್ದರು.

OMG 2: ಶೀಘ್ರದಲ್ಲೇ ರಿಲೀಸ್​ ಆಗಲಿದೆ ಅಕ್ಷಯ್​ ಕುಮಾರ್​ ನಟನೆಯ ‘ಓಹ್​ ಮೈ ಗಾಡ್​ 2’ ಸಿನಿಮಾ; ಒಟಿಟಿಯಲ್ಲೋ? ಚಿತ್ರಮಂದಿರವೋ?

ಅಕ್ಷಯ್​ ಕುಮಾರ್​ ಅವರು ಆಗಾಗ ಟ್ರೋಲ್​ ಆಗುತ್ತಾರೆ ಕೂಡ. ಚಿಕ್ಕ ಪುಟ್ಟ ಕಾರಣಕ್ಕೂ ಅವರನ್ನು ಟೀಕೆ ಮಾಡಲಾಗುತ್ತದೆ. ಇತ್ತೀಚೆಗೆ ಅವರು ದುಬಾರಿ ಬೆಲೆಯ ಬ್ಯಾಗ್​ ಧರಿಸಿದ್ದಕ್ಕೆ ಟ್ರೋಲ್​ ಆಗಿದ್ದರು. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅಕ್ಷಯ್​ ಕುಮಾರ್​ ಅವರು ಐಷಾರಾಮಿ ಜೀವನ ನಡೆಸುತ್ತಾರೆ. ಕೆಲವೇ ದಿನಗಳ ಹಿಂದೆ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಆ ವೇಳೆ ಅವರು ಧರಿಸಿದ್ದ ಬ್ಯಾಗ್​ ಮೇಲೆ ಎಲ್ಲರ ಕಣ್ಣು ಬಿದ್ದಿತ್ತು. ಆ ಬ್ಯಾಗ್​ ಬೆಲೆ 30 ಸಾವಿರ ರೂಪಾಯಿ. ಇಷ್ಟು ದುಬಾರಿ ಬ್ಯಾಗ್​ ಅವಶ್ಯಕತೆ ಇದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದರು. ‘ನಿರ್ಮಾಪಕರಿಗೆ ನೂರಾರು ಕೋಟಿ ರೂಪಾಯಿ ನಷ್ಟ ಮಾಡುವ ಅಕ್ಷಯ್​ ಕುಮಾರ್​ ಈಗ ಶೋಕಿ ಜೀವನ ನಡೆಸುತ್ತಿದ್ದಾರೆ’ ಎಂದೆಲ್ಲ ಕಮೆಂಟ್​ ಮಾಡಲಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ